ರಾಜಕೀಯ

ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ

ಪುತ್ತೂರು: ಯುವಕರ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಬಿಜೆಪಿ ಹಂಗಾಮಿ ಸರಕಾರ ತಾವೇ ಒತ್ತಡ ತಂದು ಕಾಂಗ್ರೆಸ್ ಮೇಲೆ ಆರೋಪ ಹೊರಿಸಿರುವುದು ಬಿಜೆಪಿಗೆ ಕನಿಷ್ಠ ಜ್ಞಾನ ಇರಬೇಕಿತ್ತಲ್ಲವೇ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿರುವುದುದರಿಂದ ಕಾಂಗ್ರೆಸ್ ನಷ್ಟವಾದರೂ ಏನು, ಲಾಭವಾದರು ಏನು ಎಂದು ಪ್ರಶ್ನಿಸಿದ ಅವರು, ಘಟನೆಗೆ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ನೇರ ಕಾರಣ […]

ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ Read More »

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ

ಪುತ್ತೂರು: ರಕ್ತವನ್ನು ಬೆವರು ಮಾಡಿ, ಭಗವಧ್ವಜದ ಅಡಿಯಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಯಕರ್ತರಿಗೆ ದೌರ್ಜನ್ಯ ಎಸಗುವುದು ನೋವು ತರಿಸುವ ಘಟನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು. ಪುತ್ತೂರು ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮುಂದೆ ಕಾರ್ಯಕರ್ತರ ಅಳಲನ್ನು ಬಿಚ್ಚಿಟ್ಟರು. ನಮಗೆ ಅಧಿಕಾರ ಬೇಡ, ಯಾವುದೂ ಬೇಡ. ನಮ್ಮ ಕಾರ್ಯಕರ್ತರಿಗೆ ಇಂತಹ ಪರಿಸ್ಥಿತಿ ಬರುವುದ ಬೇಡ. ಎದುರಿನಿಂದ ಬೆನ್ನು ತಟ್ಟಿ ಮಾತನಾಡಿಸುವುದು, ಹಿಂದಿನಿಂದ ಇಂತಹ ಕೆಲಸ ಮಾಡಿಸುವುದು. ಕಾರ್ಯಕರ್ತರಿಗೆ ಇದಕ್ಕಿಂತ

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ Read More »

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್

ಪುತ್ತೂರು: ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಬೇರೆಯಲ್ಲ. ಆದ್ದರಿಂದ ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ. ನೊಂದ ಎಲ್ಲರಿಗೂ ಪಕ್ಷದಿಂದಲೇ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಹೊರಗೊಂದು ಒಳಗೊಂದು ಮಾತನಾಡುವ ಸ್ವಭಾವ ನನ್ನದಲ್ಲ. ಯಾವತ್ತೂ ನೇರವಾಗಿಯೇ ಮಾತನಾಡುವವ. ಪ್ರಜಾಪ್ರಭುತ್ವದಲ್ಲಿ ಟೀಕೆ – ಟಿಪ್ಪಣಿಗೆ ಅವಕಾಶವಿದೆ. ಬ್ಯಾನರ್ ಹಾಕಿದ್ದಾರೆ ಎಂದಾಕ್ಷಣ ಅವರು ತಾಲಿಬಾನಿಗಳಲ್ಲ, ದೇಶದ್ರೋಹಿಗಳಲ್ಲ. ಬ್ಯಾನರ್

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್ Read More »

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗಾಗಮಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್

ಪುತ್ತೂರು: ಇಲ್ಲಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಯುವಕರಿಗೆ ಧೈರ್ಯ ತುಂಬಿದರು. ಪಂಚವಟಿ, ಬಿಜೆಪಿ ಕಚೇರಿಗೆ ತೆರಳಿ ಬಳಿಕ ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆ ಆವರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಯತ್ನಾಳ್ ಅವರನ್ನು ಸ್ವಾಗತಿಸಿದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್ Read More »

ಪುತ್ತೂರಿಗೆ ಆಗಮಿಸಿದ ಫೈರ್ ಬ್ರಾಂಡ್ ಯತ್ನಾಳ್

ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿದ್ದಾರೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು. ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳು, ಯತ್ನಾಳ್ ಬರುತ್ತಿದ್ದಂತೆ ಮುತ್ತಿಕ್ಕಿದರು.

ಪುತ್ತೂರಿಗೆ ಆಗಮಿಸಿದ ಫೈರ್ ಬ್ರಾಂಡ್ ಯತ್ನಾಳ್ Read More »

ಡಿವೈಎಸ್ಪಿ ಹುದ್ದೆಗೆ ಕಳಂಕ ತಂದ ಪುತ್ತೂರು ಡಿವೈಎಸ್ಪಿಯ ಅಮಾನತು ಮಾಡಿ

ಕಡಬ: ಪುತ್ತೂರು ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹುದ್ದೆಯನ್ನು ಅರಿಯದ ಸಾಮಾನ್ಯ ವ್ಯಕ್ತಿಯಂತೆ ಹಲ್ಲೆ ನಡೆಸಿದ ಪುತ್ತೂರು ಡಿವೈಎಸ್ಪಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ವಿ.ಹಿಂ.ಪ. ಕಡಬ ಪ್ರಖಂಡ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿ, ಇದೇ ಡಿವೈಎಸ್ಪಿ ಕೊಂಬಾರು ಆನೆ ದಾಳಿ ಪ್ರಕರಣದಲ್ಲಿ ಕೂಡ ತಾನೂ ಡಿವೈಎಸ್ಪಿ ಎಂಬುದನ್ನು ಮರೆತು ಅನಾಗರಿಕನಂತೆ ವರ್ತಿಸಿದ್ದಾರೆ. ಸಮಸ್ಯೆಗಳು ಬಂದಾಗ ಅದನ್ನು ಬಗೆಹರಿಸುವ ಬಗ್ಗೆ ಯೋಚಿಸದೆ ಒಟ್ಟಾರೆಯಾಗಿ ವರ್ತಿಸಿರುವುದು ಕಂಡು ಬಂದಿದೆ. ಸಾಮಾನ್ಯ ಜನರಿಗೆ ಕಾನೂನು

ಡಿವೈಎಸ್ಪಿ ಹುದ್ದೆಗೆ ಕಳಂಕ ತಂದ ಪುತ್ತೂರು ಡಿವೈಎಸ್ಪಿಯ ಅಮಾನತು ಮಾಡಿ Read More »

ಬ್ಯಾನರ್ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಪೊಲೀಸರಿಗೆ ಒತ್ತಡ : ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ : ಅಶೋಕ್ ಕುಮಾರ್ ರೈ

ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿರುವುದು ಬಿಜೆಪಿ ನಾಯಕರೇ. ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣ ಇದೀಗ ವಿವಿಧ ಮಗ್ಗುಲು ಬದಲಿಸಿಕೊಳ್ಳುತ್ತಿದೆ. ಇದರ ನಡುವೆ ಪುತ್ತೂರಿಗೆ ಆಗಮಿಸಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಕಾಂಗ್ರೆಸ್ ಸರಕಾರದ ಮೇಲೆ ಆರೋಪ ಹೊರಿಸಿದ್ದರು. ಇದಕ್ಕೆ

ಬ್ಯಾನರ್ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಪೊಲೀಸರಿಗೆ ಒತ್ತಡ : ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ : ಅಶೋಕ್ ಕುಮಾರ್ ರೈ Read More »

ಹೊಸ ಸರ್ಕಾರ ಬಂದಾಕ್ಷಣ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಹೊಸ ಸರ್ಕಾರ ಬಂದ ತಕ್ಷಣ ಮುಂದಿನ‌ 5 ವರ್ಷ ಏನಾಗ್ತದೆ ಎಂಬುದಕ್ಕೆ ಸಾಕ್ಷಿ ಈ ಘಟನೆ. ಕಂಬಳದಲ್ಲಿ ಕೋಣಗಳ ಮೇಲೆ ಹೊಡೆಯಬಾರದು ಎಂದು ಹೇಳುತ್ತಾರೆ. ಅದಕ್ಕಿಂತಲೂ ಅಮಾನವೀಯವಾದ ಕೃತ್ಯ. ಆದ್ದರಿಂದ ಈ ಘಟನೆಗೆ ಕಾರಣರಾದ ಡಿವೈಎಸ್ಪಿಯನ್ನೇ ಅಮಾನತು ಮಾಡುವಂತೆ ಹಿಂದೂ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಆಗ್ರಹಿಸಿದರು. ಗುರುವಾರ ಪುತ್ತೂರು ಮಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ದಾಖಲಾಗಿರುವ ಯುವಕರ ಆರೋಗ್ಯ ವಿಚಾರಿಸಿ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಬಂದು 2-3 ದಿನ ಆಗಿದೆಯಷ್ಟೇ.

ಹೊಸ ಸರ್ಕಾರ ಬಂದಾಕ್ಷಣ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ: ಡಾ. ಕಲ್ಲಡ್ಕ ಪ್ರಭಾಕರ ಭಟ್ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರನ್ನು ಆಶಾ ತಿಮ್ಮಪ್ಪ ಅವರು ಗುರುವಾರ ಭೇಟಿಯಾದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪಅವರು ಯುವಕರ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ Read More »

error: Content is protected !!
Scroll to Top