ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗೆಲುವಿಗಾಗಿ ಎಲ್ಲರೂ ಶ್ರಮಿಸಿದ್ದಾರೆ. ಆದರೂ ಸೋಲಾಗಿದೆ. ಈ ಸೋಲು ತಾತ್ಕಾಲಿಕ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವವರೆಗೆ ನಾನು ವಿರಮಿಸುವುದಿಲ್ಲ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಹೇಳಿದರು. ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ತಮ್ಮ ಅನಿಸಿಕೆ ಹಂಚಿಕೊಂಡರು. ಮುಂದೆ ಲೋಕಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ಇವೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲೇಬೇಕು. ಪುತ್ತೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸುವುದಿಲ್ಲ […]

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು Read More »

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ

ಪುತ್ತೂರು: ಸೋಲನ್ನು ನಾನು ಒಪ್ಪಿಕೊಂಡಿದ್ದೇನೆ. ಈ ಸೋಲನ್ನು ನಾನು ಕಾರ್ಯಕರ್ತರ ಮೇಲೆ ಹಾಕುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಳಿಕ ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದರು. ಸಂಜೀವ ಮಠಂದೂರು ಅವರು ಶಾಸಕರಾಗಿ ಒಂದೂವರೆ ಸಾವಿರ ಕೋಟಿ ರೂ. ಅನುದಾನ ತಂದು, ಅಭಿವೃದ್ಧಿ ಕಾರ್ಯ ಮಾಡಿದರು. ಆದರೆ ಇದನ್ನು ಮತದಾರರು ಗುರುತಿಸದೇ ಇರುವುದು ವಿಪರ್ಯಾಸ. ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಗುರುತಿಸಿಲ್ಲ ಎನ್ನುವುದನ್ನು ಚುನಾವಣೆ ತೋರಿಸಿಕೊಟ್ಟಿದೆ.

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ Read More »

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಂಭ್ರಮಾಚರಿಸಲಾಯಿತು. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರ ಪರ ಘೋಷಣೆಗಳನ್ನು ಕೂಗುತ್ತಾ, ಬಾವುಟಗಳನ್ನು ಹಿಡಿದು ಕಾಂಗ್ರೆಸ್ ಜಿಂದಾಬಾದ್ ಘೋಷಣೆ ಕೂಗಿದರು. ಇದೇ ಸಂದರ್ಭ ಅಲ್ಲಿ ಸೇರಿದ್ದ ಭಾರತೀಯರು ಸಿಹಿ ಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ Read More »

ಶಾಸಕಾಂಗ ಪಕ್ಷದ ಸಭೆ : ಇಂದೇ ನಿರ್ಧಾರವಾಗುತ್ತೇ ಮುಂದಿನ ಸಿಎಂ !

ಬೆಂಗಳೂರು: 224 ಕ್ಷೇತ್ರಗಳಲ್ಲಿ 135 ಕ್ಷೇತ್ರಗಳನ್ನು ಗೆದ್ದುಕೊಂಡು ಕ್ಲೀನ್ ಸ್ವೀಪ್ ಮಾಡಿರುವ ಕಾಂಗ್ರೆಸ್, ಮುಂದಿನ ಸಿಎಂ ಆಯ್ಕೆಗೆ ಮುಹೂರ್ತ ಫಿಕ್ಸ್ ಮಾಡಿದೆ ಎಂದು ಹೇಳಲಾಗಿದೆ. ಭಾನುವಾರ ಸಂಜೆ 5.30ಕ್ಕೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ಮುಂದಿನ ಸಿಎಂ ಆಯ್ಕೆ ಆಗಲಿದೆ ಎಂಬ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿ. ಅವರ ಹೆಸರು ಸಿಎಂ ರೇಸಿನಲ್ಲಿ ಮುಂಚೂಣಿಯಲ್ಲಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದ್ದಂತೆ ಕಾಂಗ್ರೆಸಿಗೆ ಗೆಲುವಿನ ಸುಳಿವು ಸಿಕ್ಕಿತು. ತಕ್ಷಣದಲ್ಲೇ ಶಾಸಕಾಂಗ ಸಭೆ ಕರೆದಿತ್ತು. ಮತ

ಶಾಸಕಾಂಗ ಪಕ್ಷದ ಸಭೆ : ಇಂದೇ ನಿರ್ಧಾರವಾಗುತ್ತೇ ಮುಂದಿನ ಸಿಎಂ ! Read More »

6 ಬಾರಿ ಮತ ಎಣಿಕೆ : ಕೊನೆಗೂ ಜಯ ದಾಖಲಿಸಿದ ಬಿಜೆಪಿ

ಪುತ್ತೂರು: ಜಯನಗರ ಕ್ಷೇತ್ರದಲ್ಲಿಕೊನೆಗೂ ಬಿಜೆಪಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಜಯ ಗಳಿಸಿದ್ದಾರೆ. ತಡರಾತ್ರಿವರೆಗೂ ಮರುಮತ ಎಣಿಕೆ ಕಾರ್ಯ ನಡೆಯಿತು. ಮೊದಲಿಗೆ 10 ಮತಗಳಿಂದ ಕಾಂಗ್ರೆಸಿನ ಸೌಮ್ಯ ರೆಡ್ಡಿ ಅವರು ಮುನ್ನಡೆ ಸಾಧಿಸಿದ್ದು, ಇದನ್ನು ಕೆ.ಸಿ. ರಾಮಮೂರ್ತಿ ಪ್ರಶ್ನಿಸಿ ಮರು ಮತ ಎಣಿಕೆಗೆ ಮನವಿ ಮಾಡಿದರು. ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿ, ಇಬ್ಬರು ಅಭ್ಯರ್ಥಿಗಳನ್ನು ಕರೆಸಿ ಅವರ ಸಮ್ಮುಖದಲ್ಲೇ ಮರು ಮತ ಎಣಿಕೆ ನಡೆಸಿದರು. 5 ಬಾರಿಯ ಮತ ಎಣಿಕೆಯಲ್ಲೂ ಸೂಕ್ತ ಫಲಿತಾಂಶ ಪಡೆಯಲು ಸಾಧ‍್ಯವಾಗಲಿಲ್ಲ. 6ನೇ ಬಾರಿಯ ಮತ

6 ಬಾರಿ ಮತ ಎಣಿಕೆ : ಕೊನೆಗೂ ಜಯ ದಾಖಲಿಸಿದ ಬಿಜೆಪಿ Read More »

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು. ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪುತ್ತೂರು ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ,ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಶುಭಕೋರಿದರು. ಬಳಿಕ ಚರ್ಚ್ ಹಾಗೂ ಮಸೀದಿಗೆ ಭೇಟಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ Read More »

ಕಾಂಗ್ರೆಸ್​​ಗೆ ಭರ್ಜರಿ ಗೆಲುವು; ಭಾವುಕರಾದ ಡಿಕೆ ಶಿವಕುಮಾರ್ | ಕಾಂಗ್ರೆಸ್ 136, ಬಿಜೆಪಿಗೆ 64, ಜೆಡಿಎಸ್ 20 ಕ್ಷೇತ್ರ

ಬೆಂಗಳೂರು: ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವುಕರಾದರು. ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಬಿಜೆಪಿ 64 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಜೆಡಿಎಸ್ 20 ಸ್ಥಾನಗಳಿಗೆ ಸೀಮಿತಗೊಂಡಿದೆ. ಉಳಿದಂತೆ 4 ಕ್ಷೇತ್ರಗಳಲ್ಲಿ ಪಕ್ಷೇತರರು ಜಯ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸಿಗೆ ರಾಜ್ಯದಲ್ಲಿ 136 ಕ್ಷೇತ್ರಗಳಲ್ಲಿ

ಕಾಂಗ್ರೆಸ್​​ಗೆ ಭರ್ಜರಿ ಗೆಲುವು; ಭಾವುಕರಾದ ಡಿಕೆ ಶಿವಕುಮಾರ್ | ಕಾಂಗ್ರೆಸ್ 136, ಬಿಜೆಪಿಗೆ 64, ಜೆಡಿಎಸ್ 20 ಕ್ಷೇತ್ರ Read More »

ಪುತ್ತೂರು ಕೈ ಪಾಲು : ತ್ರಿಕೋನ ಸ್ಪರ್ಧೆಯಲ್ಲಿ ಅಶೋಕ್ ರೈ ಮೇಲು | ಸ್ಪರ್ಧೆ ಇದ್ದದ್ದೇ ಅಶೋಕ್ – ಅರುಣ್ ನಡುವೆ ಎನ್ನುವುದನ್ನು ಸಾಬೀತುಪಡಿಸಿದ ಫಲಿತಾಂಶ | ಸೋತರೂ ಮತದಾರರ ಮನಗೆದ್ದ ಪುತ್ತಿಲ | “ಛೆ! ಗೆಲ್ಲುತ್ತಾರೆಂದಿದ್ದರೆ ಪುತ್ತಿಲರಿಗೆ ಮತ ಹಾಕುತ್ತಿದ್ದೆವು”

ಪುತ್ತೂರು: ಬಿಜೆಪಿ ಭದ್ರಕೋಟೆಯನ್ನು ಮತ್ತೊಮ್ಮೆ ಕಾಂಗ್ರೆಸ್ ಭೇದಿಸಿದೆ. ಒಗ್ಗಟ್ಟಿನ ಮಂತ್ರಕ್ಕೆ ಕಾಂಗ್ರೆಸ್ ಗೆಲುವು ದಾಖಲಿಸಿದ್ದು, ಮತ್ತೊಮ್ಮೆ ಗದ್ದುಗೆಗೆ ಏರಲು ಸಿದ್ಧತೆ ನಡೆಸಿದೆ. ಭಾರೀ ಪೈಪೋಟಿ ನಡುವೆಯೂ ಅಶೋಕ್ ಕುಮಾರ್ ರೈ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಭದ್ರಕೋಟೆಯಾದರೂ, ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಪೈಪೋಟಿ ನೀಡಿದ್ದು ಪಕ್ಷೇತರ ಅಭ್ಯರ್ಥಿ ಎನ್ನುವುದು ಈ ಬಾರಿಯ ವಿಶೇಷ. ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವಿನ ಪೈಪೋಟಿಯಿಂದಾಗಿ ಮತ ವಿಭಜನೆಯಾಗಿದ್ದು, ಕಾಂಗ್ರೆಸ್ ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಚುನಾವಣಾ ಪೂರ್ವದಲ್ಲಿ ತ್ರಿಕೋನ ಸ್ಪರ್ಧೆ

ಪುತ್ತೂರು ಕೈ ಪಾಲು : ತ್ರಿಕೋನ ಸ್ಪರ್ಧೆಯಲ್ಲಿ ಅಶೋಕ್ ರೈ ಮೇಲು | ಸ್ಪರ್ಧೆ ಇದ್ದದ್ದೇ ಅಶೋಕ್ – ಅರುಣ್ ನಡುವೆ ಎನ್ನುವುದನ್ನು ಸಾಬೀತುಪಡಿಸಿದ ಫಲಿತಾಂಶ | ಸೋತರೂ ಮತದಾರರ ಮನಗೆದ್ದ ಪುತ್ತಿಲ | “ಛೆ! ಗೆಲ್ಲುತ್ತಾರೆಂದಿದ್ದರೆ ಪುತ್ತಿಲರಿಗೆ ಮತ ಹಾಕುತ್ತಿದ್ದೆವು” Read More »

ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್

ಪುತ್ತೂರು: ಸಣ್ಣ ಅಂತರದ ಸೋಲಿನ ಬಳಿಕ ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಹೆಸರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಳಿಬರತೊಡಗಿದೆ. ಅಭಿಮಾನಿಗಳು ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಮುಂದಿನ ನಮ್ಮ ಎಂಪಿ ಅರುಣ್ ಕುಮಾರ್ ಪುತ್ತಿಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 62458 ಮತ ಪಡೆದಿದ್ದಾರೆ. ಓರ್ವ ಪಕ್ಷೇತರ ಅಭ್ಯರ್ಥಿಯಾಗಿ ಇಷ್ಟು ಮತಗಳನ್ನು ಪಡೆದುಕೊಂಡಿರುವ ಇದೇ ಮೊದಲು. 4149 ಮತಗಳ ಅಂತರದಿಂದ

ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್ Read More »

error: Content is protected !!
Scroll to Top