ರಾಜಕೀಯ

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ […]

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ Read More »

ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ

ಪುತ್ತೂರು: ದೌರ್ಜನ್ಯಕ್ಕೆ ಒಳಗಾದ ಯುವಕರ ಫೊಟೋ ನೋಡಿ ಎದೆ ಝಲ್ಲೆನಿಸಿತು. ಪೊಲೀಸರ ಕೃತ್ಯ ಅಮಾನುಷ. ಇಂತಹ ಪರಿಸ್ಥಿತಿ ಬೇರಾರಿಗೂ ಬರಬಾರದು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪೊಲೀಸ್ ರಿಂದ ದೌರ್ಜನ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಕ್ರವರ್ತಿ ಸೂಲಿಬೆಲೆಯವರು ಪುತ್ತೂರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ, ಮಾತನಾಡಿದರು. ತೇಜೋವಧೆ, ಅವಮಾನ ಮಾಡುವುದನ್ನು ನಾವು ಸಹಿಸಿಕೊಳ್ಳಬೇಕಾದ ಸಂದರ್ಭಗಳು ಜೀವನದಲ್ಲಿ ಬರುತ್ತವೆ. ಅದರಲ್ಲೂ ಪಕ್ಷಕ್ಕೆ ಸೋಲಾದಾಗ ಇಂತಹ ಘಟನೆಗಳು ಸಹಜ. ಹಾಗೆಂದು ನೋವುಂಟಾದವರು ಎಲ್ಲರೂ ನರೇಂದ್ರ ಮೋದಿಯನ್ನು ನೋಡಬೇಕು. ಅವರಷ್ಟು

ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ Read More »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್|ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನೇಮಕವಾಗಿದ್ದು, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ನಡೆಯಲಿದೆ ಎಂದು ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ. ಇದೇ ಸಂದರ್ಭ ಕೆಲ ಸಚಿವರ ಪ್ರಮಾಣವಚನವೂ ನಡೆಯಲಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್|ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ Read More »

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ

ಪುತ್ತೂರು: ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಯತ್ನಾಳ್ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದ್ದು, ರಾಜ್ಯದಲ್ಲಿ ಭಾರೀ ಸುದ್ದಿಯಾಗುತ್ತಿದೆ.

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ Read More »

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್ Read More »

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ Read More »

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ Read More »

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ. ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ Read More »

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್‌ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್‌ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು

ಕಡಬ: ರಾಜ್ಯದಲ್ಲಿ ಬಿಜೆಪಿ ಸೋತು  ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಕಡಬ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು, ಹೊಸ ಹೊಸ ಕನಸುಗಳು ಚಿಗುರೊಡೆಯಲು ಪ್ರಾರಂಭವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ನಿಗಮ ಮಂಡಳಿ ಅಥವಾ ಎಂ.ಎಲ್‌ಸಿ ಸ್ಥಾನಗಳನ್ನು ನೀಡಿ ಪಕ್ಷ ಬಲವರ್ಧನೆಗೆ ಅವಕಾಶ ನೀಡಬೇಕು ಎನ್ನುವ ಹಕ್ಕೊತ್ತಾಯಗಳು ಕೇಳಿ ಬರುತ್ತಿವೆ. ಒಂದು ಕಾಲದಲ್ಲಿ ಕಡಬ ಕಾಂಗ್ರೇಸ್‌ನ ಭದ್ರಕೋಟೆಯಾಗಿತ್ತು. ಆದರೆ ಕಳೆದ 30 ವರ್ಷಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಾಂಗ್ರೇಸ್‌ನ ಶಾಸಕರನ್ನು ಕಾಣಲು ಸಾಧ್ಯವಾಗದೆ

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು Read More »

error: Content is protected !!
Scroll to Top