ರಾಜಕೀಯ

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ಈ ಗೆಲುವು ನನ್ನದಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದೆ. ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದ್ದು, ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಹೇಳಿದರು. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ,ಜನರ ಸಮಸ್ಯೆಗಳನ್ನು ಬೂತ್‌ಮಟ್ಟದಲ್ಲೇ ಅರಿಯುವ […]

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ.

ರಾಮಕುಂಜ: ವಿಧಾನ ಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ಅಭ್ಯರ್ಥಿ ವಿಜಯಶಾಲಿಯಾದ ಮೇಲೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರಾಮಕುಂಜ ಬೂತ್ ನಂ.6 ರಲ್ಲಿನ ಮತ ಎಣಿಕೆಯೇ ನಡೆಸಿಲ್ಲ ಎನ್ನುವ ಅಂಶ ಬೆಳಕಿಗೆ ಬಂದಿದೆ. ಮಾದರಿ ಮತ ಡಿಲೀಟ್ ಮಾಡದೇ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಪರಿಣಾಮ ಬೂತ್‌ನಲ್ಲಿ 713 ಮತ ಚಲಾವಣೆಯಾದರೂ  ಇವಿಎಂನ ಮತ ಎಣಿಕೆಯಾಗದೆ ಬಾಕಿ ಉಳಿದಿರುವುದು  ಮತದಾರರ ಅಸಮಾಧಾನಕ್ಕೆ ಎಡೆಯಾಗಿದೆ.  ಅಧಿಕಾರಿಗಳ ಅಸಡ್ಡೆಯ ಪರಮಾವಧಿ ಇದಾಗಿದೆ ಎಂದು ಅಕ್ರೋಶ ವ್ಯಕ್ತವಾಗಿದೆ. ಬೂತ್‌ನಲ್ಲಿ ಮತದಾನ

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ. Read More »

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ

ಸೋತ ನೋವಿನಲ್ಲಿ ಸ್ಪರ್ಧೆಗೆ ಗುಡ್‌ ಬೈ ಹೇಳಿದ ಹಳೇ ಹುಲಿ ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಸೋತಿರುವ ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಮಾನಾಥ ರೈ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ.

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ Read More »

ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು: ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಿಂದ ಬಿಜೆಪಿ ವಿಲವಿಲ ಒದ್ದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಬಿಜೆಪಿ ನಾಯಕರು ಹತಾಶರಾಗಿ ಏನೇನೋ ಹೇಳಲು ಹೊರಟಿದ್ದಾರೆ.ಯಾರಿಗೂ ಚಪ್ಪಲಿ ಹಾಕುವ ದುಸ್ಥಿತಿ ನಮಗೆ ಬಂದಿಲ್ಲ ಎಂದರು. ಆದರೂ ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ ಎಂದ ಅವರು,

ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ Read More »

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ!

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ. ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ! Read More »

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ. ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ನಾಯಕರಾದ ನಳಿನ್ ಕುಮಾರ್  ಕಟೀಲ್ ಹಾಗೂ ಡಿವಿ ಸದಾನಂದ ಗೌಡ

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು Read More »

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ ಭಾವಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು  ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ನೂತನ ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ.  ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಇದು ಯಾರ ಕೃತ್ಯ ಎಂಬುದನ್ನು

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ Read More »

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 70ರ ಗಡಿಯತ್ತಲೂ ಬರದಂತೆ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಕಗ್ಗಂಟಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು, ಇಬ್ಬರು ನಾಯಕರು ಇಂದು ದಿಲ್ಲಿಯತ್ತ ಹೋಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದಿಲ್ಲಿಗೆ ತೆರಳಿದ್ದಾರೆ. ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಎಚ್ಎಎಲ್ ನಿಂದ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ Read More »

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹೊಸದಿಲ್ಲಿ : ಬಜರಂಗದಳವನ್ನು ಪಿಎಫ್​ಐ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಬಜರಂಗದಳ ಸಂಘಟನೆಯನ್ನು ಪಿಎಫ್‌ಐ ಜತೆ ಹೋಲಿಕೆ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕ 100 ಕೋಟಿ ರೂ. ಮಾನಹಾನಿ ಪರಿಹಾರ ಕೋರಿ

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು

ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ‌ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು. ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು Read More »

error: Content is protected !!
Scroll to Top