ರಾಜಕೀಯ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ […]

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ Read More »

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ. ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು ಬರೆಯಲಾಗಿದೆ. ಬ್ಯಾನರಿನ ಎರಡು ಬದಿಗಳಲ್ಲಿ

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ Read More »

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ

ಬೆಂಗಳೂರು: ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲಿನಲ್ಲಿ ನಡೆದ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನಷ್ಟೇ ತೆಗೆದುಕೊಳ್ಳಲು ಸಭೆ ಸಫಲವಾಯಿತು. ಎಐಸಿಸಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ ಎಂದು ಶಾಸಕರು ಏಕ ಸ್ವರದಲ್ಲಿ ಹೇಳುವ ಮೂಲಕ ಸಭೆ ಮುಕ್ತಾಯ ಕಂಡಿತು. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಸಿಎಂ ಆಯ್ಕೆ ವಿಚಾರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರು ನಾಳೆ ಬೆಳಿಗ್ಗೆ ಸಿಸೋಡಿಯಾ ಅವರನ್ನು ಭೇಟಿಯಾಗಲಿದ್ದಾರೆ.

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ Read More »

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!?

ಬೆಂಗಳೂರು: ಪ್ರಖರ ಮಾತಿನಿಂದಲೇ ಖ್ಯಾತರಾದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಳಿನ್ ಕುಮಾರ್ ಕಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ತಕ್ಷಣದಲ್ಲೇ ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲವಾದರೂ, ಬಿಜೆಪಿ ಮೂಲಗಳು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೋಡಲು ಉತ್ಸುಕರಾಗಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!? Read More »

ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!?

ಪುತ್ತೂರು: ರಾಜ್ಯ ಬಿಜೆಪಿಯ ಸೋಲಿನ ಹೊಣೆ ಹೊತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದರ ನಡುವೆ ನೈತಿಕ ಹೊಣೆ ಹೊತ್ತವರ ರಾಜೀನಾಮೆ ಯಾವಾಗ? ಎಂಬಿತ್ಯಾದಿ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಕಾಮೆಂಟ್ ಗಳನ್ನು ನೀಡಲಾಗುತ್ತಿದೆ. ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟ್ರೋಲ್ ಮಾಡಲು ನೆಟ್ಟಿಗರು ಶುರು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!? Read More »

ಸಿಎಂ ಪಟ್ಟಕ್ಕಾಗಿ ಡಿಕೆ, ಸಿದ್ದರಾಮಯ್ಯ ಪೈಪೋಟಿ | ಡಿಕೆ ಪರವಾಗಿ ಒಕ್ಕಲಿಗ ಸ್ವಾಮೀಜಿಗಳ ಸಭೆ

ಬೆಂಗಳೂರು: ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿರುವ ಕಾಂಗ್ರೆಸ್, ಇದೀಗ ಸಿಎಂ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿದೆ. ಬೆಳಿಗ್ಗೆಯಿಂದಲೇ ಟೆಂಪಲ್ ರನ್ ಶುರುವಿಟ್ಟುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರ ಪರವಾಗಿ ಒಕ್ಕಲಿಗ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಒಕ್ಕಲಿಗ ಸಮುದಾಯ ಸ್ವಾಮೀಜಿಗಳು ಸಭೆ ಕರೆದು, ಡಿಕೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆ ನಡೆಯುತ್ತಿದೆ. ಕಾಂಗ್ರೆಸ್ ವೀಕ್ಷಕರು ಸಭೆಯಲ್ಲಿ

ಸಿಎಂ ಪಟ್ಟಕ್ಕಾಗಿ ಡಿಕೆ, ಸಿದ್ದರಾಮಯ್ಯ ಪೈಪೋಟಿ | ಡಿಕೆ ಪರವಾಗಿ ಒಕ್ಕಲಿಗ ಸ್ವಾಮೀಜಿಗಳ ಸಭೆ Read More »

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆ ಕಾರ್ಯಕರ್ತರದ್ದು. ಅವರ ಭಾವನೆ ಯಾವ ರೀತಿ ಇದೆ ಎನ್ನುವುದನ್ನು ಅವರ ಜೊತೆ ಚರ್ಚಿಸಿಯೇ ಮುಂದೆ ಹೋಗಲಾಗುವುದು ಎಂದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಚುನಾವಣೆಯ ಬಗ್ಗೆ ಹಾಗೂ ನಂತರದ ಬೆಳವಣಿಗೆಯಲ್ಲಿ ಎಂಪಿ ಫಾರ್ ಪುತ್ತಿಲ ಅಭಿಯಾನದ ಬಗೆಗಿನ ಪ್ರಶ್ನೆಗೆ ಉತ್ತರಿಸಿದರು. ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ಜೊತೆಗೆ ನಿಂತಿದ್ದೇವೆ, ಹೋರಾಟ ಮಾಡಿದ್ದೇವೆ. ಹಿಂದುತ್ವವನ್ನು ಪ್ರತಿಪಾದನೆ ಮಾಡಬೇಕು. ಸ್ವಜನಪಕ್ಷಪಾತ, ಸರ್ವಾಧಿಕಾರಿ ಧೋರಣೆಯ ನಾಯಕರ ವಿಚಾರಧಾರೆಯ ವಿರುದ್ಧ ಹೋರಾಟ

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ Read More »

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗೆಲುವಿಗಾಗಿ ಎಲ್ಲರೂ ಶ್ರಮಿಸಿದ್ದಾರೆ. ಆದರೂ ಸೋಲಾಗಿದೆ. ಈ ಸೋಲು ತಾತ್ಕಾಲಿಕ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವವರೆಗೆ ನಾನು ವಿರಮಿಸುವುದಿಲ್ಲ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಹೇಳಿದರು. ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ತಮ್ಮ ಅನಿಸಿಕೆ ಹಂಚಿಕೊಂಡರು. ಮುಂದೆ ಲೋಕಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ಇವೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲೇಬೇಕು. ಪುತ್ತೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸುವುದಿಲ್ಲ

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು Read More »

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ

ಪುತ್ತೂರು: ಸೋಲನ್ನು ನಾನು ಒಪ್ಪಿಕೊಂಡಿದ್ದೇನೆ. ಈ ಸೋಲನ್ನು ನಾನು ಕಾರ್ಯಕರ್ತರ ಮೇಲೆ ಹಾಕುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಳಿಕ ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದರು. ಸಂಜೀವ ಮಠಂದೂರು ಅವರು ಶಾಸಕರಾಗಿ ಒಂದೂವರೆ ಸಾವಿರ ಕೋಟಿ ರೂ. ಅನುದಾನ ತಂದು, ಅಭಿವೃದ್ಧಿ ಕಾರ್ಯ ಮಾಡಿದರು. ಆದರೆ ಇದನ್ನು ಮತದಾರರು ಗುರುತಿಸದೇ ಇರುವುದು ವಿಪರ್ಯಾಸ. ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಗುರುತಿಸಿಲ್ಲ ಎನ್ನುವುದನ್ನು ಚುನಾವಣೆ ತೋರಿಸಿಕೊಟ್ಟಿದೆ.

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ Read More »

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಂಭ್ರಮಾಚರಿಸಲಾಯಿತು. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರ ಪರ ಘೋಷಣೆಗಳನ್ನು ಕೂಗುತ್ತಾ, ಬಾವುಟಗಳನ್ನು ಹಿಡಿದು ಕಾಂಗ್ರೆಸ್ ಜಿಂದಾಬಾದ್ ಘೋಷಣೆ ಕೂಗಿದರು. ಇದೇ ಸಂದರ್ಭ ಅಲ್ಲಿ ಸೇರಿದ್ದ ಭಾರತೀಯರು ಸಿಹಿ ಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ Read More »

error: Content is protected !!
Scroll to Top