ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು
ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ನಾಗೇಶ್ ಅಮಾನತಾದ ಸಿಬ್ಬಂದಿ. ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದಲ್ಲಿ ನಾಗೇಶ್ ಭಾಗಿಯಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉಜಿರೆ ಪಿಡಿಓ ಪ್ರಕಾಶ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು Read More »










