ರಾಜಕೀಯ

ಮತಬೇಟೆಗೆ ಅಂತಿಮ ತಯಾರಿ | ಮಸ್ಟರಿಂಗ್ ಕೇಂದ್ರದಲ್ಲಿ ಅಧಿಕಾರಿಗಳು ರೆಡಿ

ಪುತ್ತೂರು: ಮೇ 10ರಂದು ನಡೆಯುವ ಪ್ರಜಾಪ್ರಭುತ್ವದ ಹಬ್ಬಕ್ಕೆ ಅಂತಿಮ ತಯಾರಿಗಳು ತೆಂಕಿಲ ವಿವೇಕಾನಂದ ಶಾಲೆಯಲ್ಲಿ ನಡೆಯುತ್ತಿವೆ. ವಿವೇಕಾನಂದ ಶಾಲೆಯನ್ನು ಮಸ್ಟರಿಂಗ್ ಕೇಂದ್ರವಾಗಿ ಪರಿವರ್ತಿಸಿದ್ದು, ಅಧಿಕಾರಿಗಳು ಮಸ್ಟರಿಂಗ್ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಂಜೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಿಗೆ ತೆರಳಲಿದ್ದಾರೆ. ನಾಳೆ ಅಂದರೆ ಮೇ 10ರಂದು ಮತಗಟ್ಟೆಗಳಲ್ಲಿ ಮತದಾನ ನಡೆಸಿಕೊಡಲಿದ್ದಾರೆ. 1 ಸಾವಿರಕ್ಕಿಂತ ಹೆಚ್ಚಿನ ಮತದಾರರಿರುವ ಬೂತ್ ಗಳಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಮಸ್ಟರಿಂಗ್ ಕೇಂದ್ರದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಬಂದೋಬಸ್ತಿನ ವ್ಯವಸ್ಥೆಗಳಲ್ಲಿ ನಿರತರಾಗಿದ್ದಾರೆ.

ಮತಬೇಟೆಗೆ ಅಂತಿಮ ತಯಾರಿ | ಮಸ್ಟರಿಂಗ್ ಕೇಂದ್ರದಲ್ಲಿ ಅಧಿಕಾರಿಗಳು ರೆಡಿ Read More »

ಬನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ಪರ ಮತ ಯಾಚನೆ

ಪುತ್ತೂರು: ಬನ್ನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ, ಸಾರ್ವಜನಿಕ ಸಭೆ ಈಶ್ವರ ಗೌಡ ಗೋಳ್ತಿಲ ಅವರ ಮನೆಯಲ್ಲಿ ನಡೆಯಿತು. ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸೂರಜ್ ಗೋಳ್ತಿಲ, ಚಂದ್ರ ಗೋಳ್ತಿಲ, ಹರೀಶ್ ಪ್ರಭು, ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್, ಹರಿಣಾಕ್ಷಿ, ಶೀನಪ್ಪ ಕುಲಾಲ್, ತಿಮ್ಮಪ್ಪ ಪೂಜಾರಿ, ಅಕ್ಷಯ್ ಗೋಳ್ತಿಲ, ರೇಷ್ಮಾ ಗೋಳ್ತಿಲ, ಕವನ ಗೋಳ್ತಿಲ  ಮತ್ತಿತರರು ಉಪಸ್ಥಿತರಿದ್ದರು.

ಬನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ಪರ ಮತ ಯಾಚನೆ Read More »

ಈಶ್ವರಮಂಗಲ ಪೇಟೆಯಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮತ ಯಾಚನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಈಶ್ವರಮಂಗಲ ಪೇಟೆಯಲ್ಲಿ ಬೃಹತ್ ರೋಡ್ ಶೋ ನಡೆಸಲಾಯಿತು. ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ರಮೇಶ್, ಪ್ರದೀಪ್ ಕಾರ್ನೂರ್, ದೀಪಕ್ ಮುಂಡ್ಯ, ಅಬ್ದುಲ್ ಖಾದರ್ ನರ್ಸಿನಡ್ಕ, ಅಬ್ದುಲ್ ರಝಾಕ್, ದೀಪಕ್, ಚಂದ್ರಹಾಸ್, ಎಪಿಎಂಸಿ ಸದಸ್ಯೆ ಮೋಹನಾಂಗಿ, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈಶ್ವರಮಂಗಲ ಪೇಟೆಯಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮತ ಯಾಚನೆ Read More »

ಆಶಾ ತಿಮ್ಮಪ್ಪ ಪರವಾಗಿ ಉಪ್ಪಿನಂಗಡಿಯಲ್ಲಿ ಮತಯಾಚಿಸಿದ ಕೋಟಾ, ಕುಂಟಾರು ರವೀಶ ತಂತ್ರಿ

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಉಪ್ಪಿನಂಗಡಿಯಲ್ಲಿ ಬೃಹತ್ ರೋಡ್ ಶೋ ಸೋಮವಾರ ಬೆಳಿಗ್ಗೆ ಜರಗಿತು. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಪುತ್ತೂರಿನಲ್ಲಿ ಸಮರ್ಥ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕೆ ಇಳಿಸಲಾಗಿದೆ. ಅಪಪ್ರಚಾರಗಳು ಏನೇ ನಡೆದರೂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಆಶಾ ತಿಮ್ಮಪ್ಪ ಅವರು ಕಾರ್ಯವೈಖರಿ ಮೆಚ್ಚುವಂತಹದ್ದೇ ಆಗಿತ್ತು. ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸಿದ್ದಲ್ಲದೇ, ಸಂಘಟನಾತ್ಮಕವಾಗಿಯೂ ಗುರುತಿಸಿಕೊಂಡವರು. ಕಳೆದ ಮೂರುವರೆ ವರ್ಷದಲ್ಲಿ ಬಿಜೆಪಿ ಸರಕಾರದ ಅಭಿವೃದ್ಧಿ ಪರ ಆಡಳಿತ, ಹಿಂದುತ್ವದ ಪರವಾಗಿ ಸರಕಾರ ಕೈಗೊಂಡ

ಆಶಾ ತಿಮ್ಮಪ್ಪ ಪರವಾಗಿ ಉಪ್ಪಿನಂಗಡಿಯಲ್ಲಿ ಮತಯಾಚಿಸಿದ ಕೋಟಾ, ಕುಂಟಾರು ರವೀಶ ತಂತ್ರಿ Read More »

ಪುತ್ತೂರು ಪೇಟೆಯಲ್ಲಿ ಸಾಗಿದ ಕಾಂಗ್ರೆಸ್ ರೋಡ್ ಶೋ

ಪುತ್ತೂರು: ನಟಿ ರಮ್ಯಾ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಸೋಮವಾರ ಸಂಜೆ ನಡೆಯಿತು. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ರೋಡ್ ಶೋ ನಡೆದ ಸ್ವಲ್ಪ ಹೊತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ರೋಡ್ ಶೋ ನಡೆಯಿತು. ಚಿತ್ರನಟಿ ರಮ್ಯಾ ಆಗಮಿಸುತ್ತಾರೆ ಎಂದು ಹೇಳಲಾಗಿತ್ತಾದರೂ, ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಕಲ್ಲಡ್ಕ ಗೊಂಬೆ ಬಳಗ, ಕೋಲು ನಡಿಗೆಯ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕಿದರೆ, ಹಿಂಬದಿಯಲ್ಲಿ ಅಶೋಕ್ ಕುಮಾರ್

ಪುತ್ತೂರು ಪೇಟೆಯಲ್ಲಿ ಸಾಗಿದ ಕಾಂಗ್ರೆಸ್ ರೋಡ್ ಶೋ Read More »

ಪುತ್ತೂರು: ಕೇಸರಿ ರಂಗಿನ ನಡುವೆ ಪುತ್ತಿಲ ರೋಡ್ ಶೋ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ರೋಡ್ ಶೋ ನಡೆಸಿದರು. ಬೊಳುವಾರಿನಿಂದ ಆರಂಭಗೊಂಡ ರೋಡ್ ಶೋ ಪುತ್ತೂರು ಪೇಟೆಯಾಗಿ ಸಾಗಿ ದರ್ಬೆಯಲ್ಲಿ ಸಮಾಪನಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ರೋಡ್ ಶೋಗೆ ಹೊಸ ಮೆರುಗು ತಂದರು. ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಸಂಜೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಜೊತೆ ರೋಡ್ ಶೋ ನಡೆಯಿತು.

ಪುತ್ತೂರು: ಕೇಸರಿ ರಂಗಿನ ನಡುವೆ ಪುತ್ತಿಲ ರೋಡ್ ಶೋ Read More »

ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಈ ಬಾರಿ ಜೆಡಿಎಸ್ ಪಕ್ಷದಿಂದ ಜನ ಸಾಮಾನ್ಯರಿಗೆ ಸ್ಪಂದಿಸುವ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜನತೆ ನಮ್ಮನ್ನು ಗೆಲ್ಲಿಸಿದಲ್ಲಿ ಈಗಾಗಲೇ ಪ್ರಣಾಳಿಕೆಯನ್ನು ತಿಳಿಸಿದಂತೆ ನೂರಕ್ಕೆ ನೂರು ಈಡೇರಿಸಲಿದ್ದೇವೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಪಕ್ಷ ನೇತಾರ ದೇವೇಗೌಡರು ಪ್ರಧಾನಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದೇಶಕ್ಕೆ, ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಆದರ್ಶ ಮುಖ್ಯಮಂತ್ರಿಯಾಗಿದ್ದರು, ರೈತಾಪಿ, ದುಡಿಯುವ ವರ್ಗಕ್ಕೆ ಆಶಾವಾದಿಯಾಗಿದ್ದರು. ಎಂದು

ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ Read More »

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಶಾಂತಿಗೋಡು ಬೂತ್ ವತಿಯಿಂದ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ ನಡೆಯಿತು. ಜಿಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮನೆ ಮನೆ ಭೇಟಿ ಮಾಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಮ್ ಭಟ್, ಉಪಾಧ್ಯಕ್ಷ ದೇವರಾಜ್ ಕಲ್ಕಾರ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಲೆ, ಶಿವಪ್ರಸಾದ್ ಕೈಂದಾಡಿ, ಪ್ರವೀಣ್ ಶೆಟ್ಟಿ, ವಿಘ್ನೇಶ್ ಕುಕ್ಯನ ನಾರಾಯಣ ಗೌಡ ಪಾದೆ, ರಂಜಿತ್ ಕೈಂದಾಡಿ, ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಬಂಟ್ವಾಳ ತಾಲೂಕಿನ ಬಿಳಿಯೂರು-ಪಾದೆಬರಿಯಲ್ಲಿ ಮತ ಯಾಚನೆ ನಡೆಯಿತು. ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಮತ ಯಾಚನೆ ಸಭೆಯಲ್ಲಿ ಆಶಾ ತಿಮ್ಮಪ್ಪ ಅವರನ್ನು ಗೆಲ್ಲಿಸಿಕೊಂಡುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

ಹಿಂದೂಗಳ ರಕ್ಷಣೆಗೆ ಬಿಜೆಪಿ ಸರಕಾರ ಅವಶ್ಯ |ಭಜರಂಗದಳ ನಿಷೇಧ, ಗೋ ಹತ್ಯೆ ನಿಷೇಧ ವಾಪಾಸ್ ಮೊದಲಾದ ಕಾಂಗ್ರೆಸಿನ ಬೆದರಿಕೆಗೆ ಪ್ರತ್ಯುತ್ತರ ನೀಡಲೇಬೇಕು | ಪಾಂಗಲಾಯಿಯಲ್ಲಿ ನಡೆದ ಭಾರತ ಮಾತಾ ಪೂಜನಾದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರು: ಈಗಾಗಲೇ ಕಾಂಗ್ರೆಸ್ ತಿಳಿಸಿರುವಂತೆ ಅಧಿಕಾರಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುತ್ತಾರಂತೆ. ಗೋ ಹತ್ಯೆ ನಿಷೇಧ ಮಸೂದೆಯನ್ನು ವಾಪಾಸ್ ಮಾಡುವುದಾಗಿ ತಿಳಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ತಡೆಯುವ ಅವಶ್ಯಕತೆ ಇದೆ. ಇದನ್ನು ತಡೆಯಲು ವ್ಯಕ್ತಿಯೋರ್ವನಿಂದ ಅಸಾಧ್ಯ. ಸಂಘಟನೆಯ ಶಕ್ತಿಯಿರುವ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲೇಬೇಕು ಎಂದು ಭಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ಪಾಂಗಲಾಯಿಯ ಸಂತೋಷ್ ಬೋನಂತಾಯ ಅವರ ಮನೆಯಲ್ಲಿ ಭಾನುವಾರ ಸಂಜೆ ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ

ಹಿಂದೂಗಳ ರಕ್ಷಣೆಗೆ ಬಿಜೆಪಿ ಸರಕಾರ ಅವಶ್ಯ |ಭಜರಂಗದಳ ನಿಷೇಧ, ಗೋ ಹತ್ಯೆ ನಿಷೇಧ ವಾಪಾಸ್ ಮೊದಲಾದ ಕಾಂಗ್ರೆಸಿನ ಬೆದರಿಕೆಗೆ ಪ್ರತ್ಯುತ್ತರ ನೀಡಲೇಬೇಕು | ಪಾಂಗಲಾಯಿಯಲ್ಲಿ ನಡೆದ ಭಾರತ ಮಾತಾ ಪೂಜನಾದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ Read More »

error: Content is protected !!
Scroll to Top