ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!?
ಪುತ್ತೂರು: ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಿಡಕ್ಕೆ ನೇತು ಹಾಕಿದ್ದ 1 ಕೋಟಿ ರೂ.ವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಸಹೋದರ ಕೆ. ಸುಬ್ರಹ್ಮಣ್ಯ ರೈ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!? Read More »










