ರಾಜಕೀಯ

ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!?

ಪುತ್ತೂರು: ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಿಡಕ್ಕೆ ನೇತು ಹಾಕಿದ್ದ 1 ಕೋಟಿ ರೂ.ವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಸಹೋದರ ಕೆ. ಸುಬ್ರಹ್ಮಣ್ಯ ರೈ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!? Read More »

ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈ ಮುಟ್ಟಿನೋಡಲಿ  : ಆಶಾ ತಿಮ್ಮಪ್ಪ

ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದು, ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗುಡುಗಿದ್ದಾರೆ. ಬಜರಂಗದಳ, ವಿಹಿಂಪ, ಹಿಂಜಾವೇ ಇವೆಲ್ಲ ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿದ್ದು, ಹಿಂದೂಗಳ ರಕ್ಷಣ ಮಾಡುವ ಇಂತಹಾ ಸಂಘಟನೆಗಳನ್ನು ಕಾಂಗ್ರೆಸ್ ನಿಷೇಧ ವಿಚಾರ ಎತ್ತಿರುವುದು

ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈ ಮುಟ್ಟಿನೋಡಲಿ  : ಆಶಾ ತಿಮ್ಮಪ್ಪ Read More »

ಬಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆ ಜೇನುಗೂಡಿಗೆ ಕಲ್ಲೆಸೆದಂತೆ | ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದ್ದು, ಹತಾಶ ಮನೋಸ್ಥಿತಿಯಿಂದ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಮೂಲಕ ಜೇನು ಗೂಡಿಗೆ ಕಲ್ಲು ಎಸೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಮ ಮಂದಿರ ಹೋರಾಟದಿಂದ ಹುಟ್ಟಿಕೊಂಡಿರುವ ಬಜರಂಗದಳವನ್ನು ಕೆರಳಿಸುವ ಕೆಲಸಕ್ಕೆ ಕೈಹಾಕಿದ್ದು, ಕೋವಿಡ್ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರು ತಮ್ಮ ಮನೆ ಮಠಗಳನ್ನು ಬಿಟ್ಟು ಯಾವುದೇ ಫಲಾಪೇಕ್ಷೆಯಿಲ್ಲದೆ ಜನರ ಆರೋಗ್ಯ

ಬಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆ ಜೇನುಗೂಡಿಗೆ ಕಲ್ಲೆಸೆದಂತೆ | ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿ Read More »

ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆದ ಡಬಲ್ ಇಂಜಿನ್  ಸರಕಾರ : ಸುನೀಲ್ ಕುಮಾರ್ ಬಜಾಲ್

ಪುತ್ತೂರು: ಕಾರ್ಮಿಕ ವರ್ಗದ ಹಕ್ಕು ಸವಲತ್ತುಗಳನ್ನು ಕಿತ್ತು ಹಾಕಿದ್ದಲ್ಲದೆ,  ಮಾಲಕರ ಪರ ಕಾನೂನು ತಿದ್ದುಪಡಿ ಮಾಡಿ ತ್ಯಾಗ ಬಲಿದಾನಗಳಿಂದ ಪಡೆದ ಹಕ್ಕಾದ 8 ಗಂಟೆ ಕೆಲಸವನ್ನು 12 ಗಂಟೆ ಕೆಲಸಕ್ಕೆ ಏರಿಸಿ ಡಬಲ್ ಇಂಜಿನ್ ಸರಕಾರ ಕಾರ್ಮಿಕ ವರ್ಗಕ್ಕೆ ದ್ರೋಹ ಎಸಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದರು. ಅವರು ಮಂಗಳವಾರ ಸಿಐಟಿಯು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಮಾಜಿ ಸೈನಿಕರ ಭವನದಲ್ಲಿ ನಡೆದ ಮೇ ದಿನಾಚರಣೆಯನ್ನು ಉದ್ಘಾಟಿಸಿ

ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆದ ಡಬಲ್ ಇಂಜಿನ್  ಸರಕಾರ : ಸುನೀಲ್ ಕುಮಾರ್ ಬಜಾಲ್ Read More »

ಪುತ್ತೂರಿನ ಅಮರನಾಥ್ ಗೌಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ ನೇಮಕ

ಪುತ್ತೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ ಅಮರನಾಥ್ ಗೌಡ ಅವರನ್ನು ನೇಮಿಸಲಾಗಿದೆ. ಸ್ಥಳೀಯ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ನೇಮಕ ಮಾಡಿದ್ದು, ಬ್ಲಾಕ್ ಅಧ್ಯಕ್ಷರು ಹಾಗೂ ಅಭ್ಯರ್ಥಿಗಳ ನಿರ್ದೇಶನದಂತೆ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನ ಮಾಡಲಾಗಿದೆ. ಅಮರನಾಥ ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.

ಪುತ್ತೂರಿನ ಅಮರನಾಥ್ ಗೌಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ ನೇಮಕ Read More »

ಸ್ವಯಂಘೋಷಿತ ಖಲಿಸ್ತಾನ ಕಮಾಂಡರ್ ಗಳಂತ ಸ್ವತಂತ್ರ ನಾಯಕರು ನಮಗೆ ಬೇಡ | ಸವಾಲುಗಳಿಗೆ ಪುತ್ತೂರಿನಲ್ಲಿ ಉತ್ತರಿಸಿದ ಡಿ.ವಿ. ಸದಾನಂದ ಗೌಡ | ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ |  ಗೂಂಡಾ ರಾಜ್ಯಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ

ಪುತ್ತೂರು: ಪ್ರಚಾರ – ಅಪಪ್ರಚಾರಗಳಿಂದಲೇ ತಾನು ಇಲ್ಲಿಯವರೆಗೆ ಬೆಳೆದು ಬಂದಿದ್ದೇನೆ. ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳಿಂದ ಸಂತೃಪ್ತನಾಗಿದ್ದೇನೆ. ಪುತ್ತೂರು ಸೇರಿದಂತೆ ರಾಜ್ಯದಲ್ಲಿ 130 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪುತ್ತೂರು ಬಿಜೆಪಿಯ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗೂಂಡಾ ರಾಜ್ಯವಾಗಿದ್ದ ಪುತ್ತೂರಲ್ಲಿ ಶಾಂತಿ ನೆಲೆಸಲು ಬಿಜೆಪಿ ಕಾರಣ. 90ರ ದಶಕದಲ್ಲಿ ಪುತ್ತೂರು ಹೇಗಿತ್ತು. ಸಂಜೆ 6 ಗಂಟೆ ನಂತರ ಪುತ್ತೂರಲ್ಲಿ ನಡೆದಾಡಲು ಸಾಧ್ಯವಿರಲಿಲ್ಲ. ಅಡಕೆ

ಸ್ವಯಂಘೋಷಿತ ಖಲಿಸ್ತಾನ ಕಮಾಂಡರ್ ಗಳಂತ ಸ್ವತಂತ್ರ ನಾಯಕರು ನಮಗೆ ಬೇಡ | ಸವಾಲುಗಳಿಗೆ ಪುತ್ತೂರಿನಲ್ಲಿ ಉತ್ತರಿಸಿದ ಡಿ.ವಿ. ಸದಾನಂದ ಗೌಡ | ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ |  ಗೂಂಡಾ ರಾಜ್ಯಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ Read More »

ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೊಂದು ಕವಿಗೋಷ್ಠಿ

ಪುತ್ತೂರು: ಪುತ್ತೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ, ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್, ರೋಟರಿ ಪುತ್ತೂರು ಯುವ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸಹಯೋಗದಲ್ಲಿ ಮತದಾರರ ಜಾಗೃತಿಗೊಂದು ಕವಿಗೋಷ್ಠಿ ಕಾರ್ಯಕ್ರಮ ಮಂಗಳವಾರ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಕಾರ್ಯನಿ‍ರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ 5371 ಯುವ ಮತದಾರರಿದ್ದು, ಶೇ.100 ರಷ್ಟು ಮತದಾನ ಆಗುವ ಮೂಲಕ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ

ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೊಂದು ಕವಿಗೋಷ್ಠಿ Read More »

ಪ್ರಜಾಪ್ರಭುತ್ವದ ಹಬ್ಬಕ್ಕೆ ವಿದ್ಯುಕ್ತ ಚಾಲನೆ | ಮತ ಚಲಾಯಿಸಿದ ಹಿರಿಯ ನಾಗರಿಕರು, ವಿಕಲಚೇತನರು

ಪುತ್ತೂರು: ಪ್ರಜಾಪ್ರಭುತ್ವದ ಹಬ್ಬವಾದ ಮತದಾನಕ್ಕೆ ಸೋಮವಾರ ಚಾಲನೆ ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳು ಸೋಮವಾರ ತಾಲೂಕಿನ ವಿವಿಧ ಕಡೆಗಳ ಮನೆಗಳಿಗೆ ತೆರಳಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರಿಂದ ಮತದಾನ ಮಾಡಿಸಿದರು. ಇದೇ ಮೊದಲ ಬಾರಿಗೆ ಮತದಾನ ವ್ಯವಸ್ಥೆಯಲ್ಲಿ ಅಧಿಕಾರಿಗಳು ಸ್ವತಃ ಮನೆಗಳಿಗೆ ತೆರಳಿ ಮತದಾನ ನಡೆಸುತ್ತಿದ್ದಾರೆ. ಸೋಮವಾರ ಬೆಳಗ್ಗೆ ತಾಲೂಕು ಆಡಳಿತ ಸೌಧದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆದು, ಮತದಾನದ ಪ್ರಕ್ರಿಯೆ ನಡೆಯಿತು. ಸಂಜೆ ಡಿಮಸ್ಟರಿಂಗ್ ನಡೆಯಿತು.

ಪ್ರಜಾಪ್ರಭುತ್ವದ ಹಬ್ಬಕ್ಕೆ ವಿದ್ಯುಕ್ತ ಚಾಲನೆ | ಮತ ಚಲಾಯಿಸಿದ ಹಿರಿಯ ನಾಗರಿಕರು, ವಿಕಲಚೇತನರು Read More »

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಬಿರುಸಿನ ಮತ ಪ್ರಚಾರ

ಪುತ್ತೂರು: ಚುನಾವಣಾ ದಿನಾಂಕ ಹತ್ತಿರ ಬರುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರದ ವೇಗ ಮತ್ತಷ್ಟು ಹೆಚ್ಚುತ್ತಿದೆ. ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಚಿಲ್ತಡ್ಕ ಕಾರ್ಯಕರ್ತರೊಂದಿಗೆ ಫೀಲ್ಡ್ ಗೆ ಇಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಇಂದು ಬಡಗನ್ನೂರು, ಪಡುಮಲೆಯಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚನೆ ನಡೆಸಿದರು ಹಾಗೂ ಪಡುಮಲೆ ಕಿನ್ನಿಮಣಿ ಪೂಮಣಿ ದೈವಸ್ಥಾನ ಹಾಗೂ ಪಡುಮಲೆ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಬಿರುಸಿನ ಮತ ಪ್ರಚಾರ Read More »

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದೆ | ಬಿಜೆಪಿ ಎಸ್ ಸಿ ಮೋರ್ಚಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ

ಪುತ್ತೂರು: ಹಿಂದಿನ ಕಾಂಗ್ರೆಸ್ ಸರಕಾರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ನಡೆಸಿಕೊಂಡ ರೀತಿಯ ಕುರಿತು ಇಂದು ಪರಿಶಿಷ್ಟ ಜಾತಿ, ಪಂಗಡ ಸಮುದಾಯದವರು ಆಲೋಚನೆ ಮಾಡಬೇಕಾಗಿದ್ದು, ಘಟನೆಗೆ ಉತ್ತರ ನೀಡಲು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಾದ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು. ಅವರು ಸೋಮವಾರ ತೆಂಕಿಲ ಬೈಪಾಸ್ ಬಳಿಯ ದರ್ಶನ್ ಹಾಲ್ ನಲ್ಲಿ ಬಿಜೆಪಿ ಎಸ್ ಸಿ ಮೋರ್ಚಾ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಳೆದ 9 ದಶಕಗಳಿಂದ ಕಾಂಗ್ರೆಸ್ ದಲಿತರನ್ನು ಓಟ್

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದೆ | ಬಿಜೆಪಿ ಎಸ್ ಸಿ ಮೋರ್ಚಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ Read More »

error: Content is protected !!
Scroll to Top