ಯೋಗಿ ಆದಿತ್ಯನಾಥ್ ಆಗಮನಕ್ಕೆ ಕ್ಷಣಗಣನೆ | ಸಿದ್ಧಗೊಂಡ ರೋಡ್ ಶೋ ವಾಹನ
ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಆಗಮಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಅವರು ರೋಡ್ ಶೋ ಮಾಡುವ ವಾಹನ ಸಿದ್ಧಗೊಂಡಿದೆ. ಈಗಾಗಲೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಾಹನವನ್ನು ತರಲಾಗಿದೆ. ಯೋಗಿ ಆದಿತ್ಯನಾಥ್ ಅವರು ಇದೀಗ ಕೊಪ್ಪ ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಇನ್ನೇನು ಅಲ್ಲಿ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಆಗಮಿಸಲಿದ್ದಾರೆ. ರೋಡ್ ಶೋ ಹೊರಡುವ ಸ್ಥಳ ಸಹಿತ ಸುತ್ತಮುತ್ತಲು ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಬಂದೋ ಬಸ್ತ್ ನಲ್ಲಿ ತೊಡಗಿದ್ದಾರೆ.
ಯೋಗಿ ಆದಿತ್ಯನಾಥ್ ಆಗಮನಕ್ಕೆ ಕ್ಷಣಗಣನೆ | ಸಿದ್ಧಗೊಂಡ ರೋಡ್ ಶೋ ವಾಹನ Read More »










