ರಾಜಕೀಯ

ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ

ಪುತ್ತೂರು : ತಾನು ಗೆದ್ದು ಶಾಸಕನಾದಲ್ಲಿ ಸ್ವಂತ ದುಡ್ಡಿನಿಂದ ಜಾಗ ಖರೀದಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದದಲ್ಲಿ ಮನೆ ಕಟ್ಟಲು ಸ್ವಂತ ಜಾಗವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ವಿಟ್ಲ ಬೊಳಂತಿಮೊಗರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಕಳೆದ ಐದು ವರ್ಷದಿಂದ ಯಾವುದೇ ಮನೆಗಳನ್ನು ಬಡವರಿಗೆ ವಿತರಣೆ ಮಾಡಿಲ್ಲ. ಮನೆ ಸಿಗ್ತದೆ […]

ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ Read More »

ಅಸಂಘಟಿತ ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ರಿಕ್ಷಾ ಚಾಲಕ-ಮಾಲಕರು ಸಹಿತ ವಿವಿಧ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮಾಡಬೇಕಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆದ್ದು ನಿಮ್ಮೆಲ್ಲರ ವಿಶ್ವಾಸ ಪಡೆದು ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭರವಸೆ ನೀಡಿದರು. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸಾರಥಿ ಸಂಗಮದಲ್ಲಿ ಮಾತನಾಡಿದರು. ಕಾರ್ಮಿಕರ ಪ್ರೀತಿ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಪ್ರೀತಿ ವಿಶ್ವಾಸದ ರಾಜಕಾರಣ

ಅಸಂಘಟಿತ ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ Read More »

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಹಿಂದೂಗಳನ್ನು ಮಟ್ಟ ಹಾಕುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದ ಅವರು, ಈಗಾಗಲೇ

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು Read More »

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಕಡಬ: ಹಲವು ವರ್ಷಗಳಿದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ. ಈ ಬಾರಿ ಈ ಕೊರತೆಯನ್ನು ಕ್ಷೇತ್ರದ ಮತದಾರರು ನೀಗಿಸುತ್ತಾರೆ. ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ನಿವಾರಣೆಯಾಗಿದ್ದು, ಕಾಂಗ್ರೆಸ್ ಗೆಲುವು ನಿಶ್ಚಿತ, ಇಲ್ಲಿ ಗೆಲುವು ದಾಖಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ಕರ್ನಾಟಕದ ಮೇರು ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾರ್ಯಕರ್ತರು ಹಾಗೂ ಮತದಾರರು ಉಡುಗೊರೆ ನೀಡಲಿದ್ದಾರೆ ಎಂದು ಎಐಸಿಸಿ ಸದಸ್ಯ ಮಹಾರಾಷ್ಟ್ರ ಮಾಜಿ ಸಚಿವ, ಸುಳ್ಯ ವಿಧಾನಸಭಾ ಕಾಂಗ್ರೆಸ್ ವೀಕ್ಷಕ ಸುನಿಲ್ ಕೇದಾರ್ ಹೇಳಿದರು. ಅವರು ಕಡಬದಲ್ಲಿ ಮಂಗಳವಾರ ಸುಳ್ಯ

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್ Read More »

ಶಾಂತಿಗೋಡು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಮತ ಯಾಚನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಶಾಂತಿಗೋಡು ಗ್ರಾಮದಲ್ಲಿ ಬುಧವಾರ ಮತ ಯಾಚನೆ ಮಾಡಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೇತೃತ್ವದಲ್ಲಿ ಶಾಂತಿಗೋಡು ಗ್ರಾಮದ ಕೈಂದಾಡಿ, ಶಾಂತಿಗೋಡು, ಕುಕ್ಯಾನ, ಕರ್ಪುತಮೂಳೆ, ಪಜಿರೋಡಿ ಮುಂತಾದ ಕಡೆಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಕ್ತಿಕೇಂದ್ರದ ಅಧ್ಯಕ್ಷ ಶ್ಯಾಮ್ ಭಟ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ, ಕಾರ್ಯಕರ್ತರಾದ ಶಿವಪ್ರಸಾದ್ ಕೈಂದಾಡಿ, ವಿಘ್ನೇಶ್ ಕುಕ್ಯಾನ, ಹೊನ್ನಪ್ಪ

ಶಾಂತಿಗೋಡು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಮತ ಯಾಚನೆ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಕೀಲರ ಸಂಘದ ಕಚೇರಿಗೆ ಭೇಟಿ | ಮತ ಯಾಚನೆ

ಪುತ್ತೂರು: ಪುತ್ತೂರು ಕೋರ್ಟು‌ಆವರಣದಲ್ಲಿರುವ ವಕೀಲರ ಸಂಘದ ಕಚೇರಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚಿಸಿದರು. ವಕೀಲರ ಜೊತೆ ಮಾತುಕತೆ ನಡೆಸಿದ ಅಶೋಕ್ ರೈಯವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೇಳಿಕೊಂಡರು. ಈ ಸಂದರ್ಭದಲ್ಲಿ ವಕೀಲರು ಆನಾಜೆಯಲ್ಲಿರುವ ನ್ಯಾಯಾಲಯ ಸಂಕೀರ್ಣದವರೆಗೆ ಸಿಟಿ ಬಸ್ ಸೌಕರ್ಯ ಕಲ್ಪಿಸಿದರೆ ಕಕ್ಷಿದಾರರಿಗೆ ಪ್ರಯೋಜನವಾಗಲಿದೆ. ಆನಾಜೆ ಕೋರ್ಟಿಗೆ ತೆರಳುವ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ಸೋಲಾರ್ ಅಳವಡಿಕೆಯ ಕುರಿತು ಚರ್ಚಿಸಿದರು. ಶಾಸಕನಾಗಿ ಆಯ್ಕೆಯಾದಲ್ಲಿ ತಮ್ಮ ಬೇಡಿಕೆಗಳ ಕಡೆ ಹೆಚ್ಚು ಒತ್ತು

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಕೀಲರ ಸಂಘದ ಕಚೇರಿಗೆ ಭೇಟಿ | ಮತ ಯಾಚನೆ Read More »

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಹಲವೆಡೆ ಮತ ಯಾಚನೆ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಚಿಲ್ತಡ್ಕ ರವರು ಇಂದು ಉಕ್ಕುಡ ಶ್ರೀ ಶಾರದಾ ಪ್ರೋಸೆಸರ್ಸ್ ಹಾಗೂ ಚಂದಳಿಕೆ ಶ್ರೀ ವೆಂಕಟೇಶ್ವರ ಪ್ರೋಸೆಸರ್ಸ್ ಗೇರು ಬೀಜ ಕಾರ್ಖಾನೆಗಳಿಗೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಸಿಬ್ಬಂದಿಗಳಲ್ಲಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ  ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಗಧಾದರ್ ಮಲಾರ್, ಜಾಫರ್ ಖಾನ್, ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೆಗ, ರಫೀಕ್ ಮನಿಯಾರ್ ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಹಲವೆಡೆ ಮತ ಯಾಚನೆ Read More »

ಕುಚ್ಚಲಕ್ಕಿ ಬೇಡಿಕೆ ಕಾಂಗ್ರೆಸ್ ನಿಂದ ಈಡೇರಲಿದೆ : ಅಶೋಕ್ ರೈ

ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈ ಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಗೆ ಕುಚ್ಚಲಕ್ಕಿ ನೀಡುವುದಾಗಿ ಕಳೆದ ಒಂದು ವರ್ಷದಿಂದ ಬಿಜೆಪಿ

ಕುಚ್ಚಲಕ್ಕಿ ಬೇಡಿಕೆ ಕಾಂಗ್ರೆಸ್ ನಿಂದ ಈಡೇರಲಿದೆ : ಅಶೋಕ್ ರೈ Read More »

ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!?

ಪುತ್ತೂರು: ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಿಡಕ್ಕೆ ನೇತು ಹಾಕಿದ್ದ 1 ಕೋಟಿ ರೂ.ವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಸಹೋದರ ಕೆ. ಸುಬ್ರಹ್ಮಣ್ಯ ರೈ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ | ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ!? Read More »

ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈ ಮುಟ್ಟಿನೋಡಲಿ  : ಆಶಾ ತಿಮ್ಮಪ್ಪ

ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದು, ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗುಡುಗಿದ್ದಾರೆ. ಬಜರಂಗದಳ, ವಿಹಿಂಪ, ಹಿಂಜಾವೇ ಇವೆಲ್ಲ ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿದ್ದು, ಹಿಂದೂಗಳ ರಕ್ಷಣ ಮಾಡುವ ಇಂತಹಾ ಸಂಘಟನೆಗಳನ್ನು ಕಾಂಗ್ರೆಸ್ ನಿಷೇಧ ವಿಚಾರ ಎತ್ತಿರುವುದು

ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈ ಮುಟ್ಟಿನೋಡಲಿ  : ಆಶಾ ತಿಮ್ಮಪ್ಪ Read More »

error: Content is protected !!
Scroll to Top