ರಾಜಕೀಯ

ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ

ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ ನಡೆಯಿತು. ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿ, ಹಿಂದುತ್ವ ಹಾಗೂ ಅಭಿವೃದ್ಧಿಯ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಪಕ್ಷ ಬಿಜೆಪಿ. ಹಿಂದುತ್ವ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿರುವ ಬಿಜೆಪಿ ಸರಕಾರ, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ನೀಡಿದೆ. ಆದ್ದರಿಂದ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ವಿನಂತಿಸಿದರು. ಅಭ್ಯರ್ಥಿ ಆಶಾ […]

ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ Read More »

ಪುತ್ತಿಲ ಪರ ಸೀತಾ ಪರಿವಾರ | ಪುತ್ತೂರು ಬದಲಾಯಿಸಲು ಪರ್ವ ಕಾಲ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ ಶುಕ್ರವಾರ ಸಂಜೆ ಸುಭದ್ರ ಸಭಾಮಂದಿರದಲ್ಲಿ ಜರಗಿತು. ದಿಕ್ಸೂಚಿ ಭಾಷಣ ಮಾಡಿದ ಅಕ್ಷಯ ಗೋಖಲೆ, ಪುತ್ತೂರಿನ ಮಹಿಳೆಯರು ಮನಸು ಮಾಡಿದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಜಯಶಾಲಿಯಾಗುವರು. ಪುತ್ತೂರನ್ನು ಬದಲಾಯಿಸಲು ಬೇಕಾದ ಸಮಯ ಬಂದಿದೆ. ಈಗ ಬೇಕಾಗಿರುವುದು ಮನಸ್ಸು ಮತ್ತು ಹೃದಯ ಎಂದರು. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಅಧಿಕಾರಕ್ಕಾಗಿ ಚುನಾವಣೆಗೆ ನಿಂತದಲ್ಲ. ಸಮಾಜದ ಅಸ್ಮಿತೆಯ ಪ್ರತೀಕವಾದ

ಪುತ್ತಿಲ ಪರ ಸೀತಾ ಪರಿವಾರ | ಪುತ್ತೂರು ಬದಲಾಯಿಸಲು ಪರ್ವ ಕಾಲ Read More »

ಹಣ ನೀಡಿದರೆ ಮಾತ್ರ ಕಾಂಗ್ರೆಸಿನಲ್ಲಿ ಅಭ್ಯರ್ಥಿ : ಮೋನಪ್ಪ ಭಂಡಾರಿ ಆರೋಪ | ರಾಜ್ಯದಲ್ಲಿ ಬಿಜೆಪಿಗೆ 130ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ

ಪುತ್ತೂರು: ಹಣ ನೀಡಿದರೆ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯಾಗಲು ಸಾಧ್ಯ. ಹೀಗಿದ್ದರೂ ಬಿಜೆಪಿ ಸರಕಾರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಕಾಂಗ್ರೆಸ್ ಪಕ್ಷ ಒಂದು ಮುಳುಗುವ ಹಡಗು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಸ, ವಂಚನೆ, ಭ್ರಷ್ಟಾಚಾರ ಕಾಂಗ್ರೆಸ್ ನ ಜನ್ಮಸಿದ್ಧ ಹಕ್ಕು, ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೆಸ್ ಪಕ್ಷಕ್ಕೆ ಹಣ ಕೊಡಬೇಕು ಎಂದು ಅವರ ಪಕ್ಷದವರೇ ಬಹಿರಂಗವಾಗಿ ಆರೋಪ

ಹಣ ನೀಡಿದರೆ ಮಾತ್ರ ಕಾಂಗ್ರೆಸಿನಲ್ಲಿ ಅಭ್ಯರ್ಥಿ : ಮೋನಪ್ಪ ಭಂಡಾರಿ ಆರೋಪ | ರಾಜ್ಯದಲ್ಲಿ ಬಿಜೆಪಿಗೆ 130ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ Read More »

ಸಂಘಟನೆಗಿಂತ ನಾನೇ ಮಿಗಿಲು ಎಂದವರನ್ನು ಸಂಘ ಸಾಕಷ್ಟು ನೋಡಿದೆ: ಭಜರಂಗದಳ | ಸಂಘಟನೆ ಹೋರಾಟಕ್ಕೆ ಬಿಜೆಪಿ ಸರಕಾರ ಧ್ವನಿ: ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು  ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗ ದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಆದರೆ ಸಂಘದ ಚೌಕಟ್ಟನ್ನು ಮೀರಿ ಸಂಘದಿಂದ ಹೊರ ನಡೆದ ಹಲವಾರು ಮಹಾನ್ ನಾಯಕರು ದೇಶದಲ್ಲಿದ್ದಾರೆ. ಕಲ್ಯಾಣ್ ಸಿಂಗ್ ,

ಸಂಘಟನೆಗಿಂತ ನಾನೇ ಮಿಗಿಲು ಎಂದವರನ್ನು ಸಂಘ ಸಾಕಷ್ಟು ನೋಡಿದೆ: ಭಜರಂಗದಳ | ಸಂಘಟನೆ ಹೋರಾಟಕ್ಕೆ ಬಿಜೆಪಿ ಸರಕಾರ ಧ್ವನಿ: ಮುರಳೀಕೃಷ್ಣ ಹಸಂತಡ್ಕ Read More »

ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ

ಪುತ್ತೂರು: ಕಾಂಗ್ರೆಸಿನೊಳಗಡೆಯಿದ್ದ ಬಂಡಾಯ, ಕೆಸರೆರಚಾಟ ಈ ಬಾರಿ ಬಿಜೆಪಿಗೆ ಶಿಫ್ಟ್ ಆಗಿದೆ. ಶಿಸ್ತಿಗೆ ಹೆಸರಾಗಿದ್ದ ಪಕ್ಷ ಬಿಜೆಪಿ. ಇಲ್ಲಿ ಎಲ್ಲದಕ್ಕೂ ಒಂದು ಚೌಕಟ್ಟು ಇದೆ. ನಿಯಮ ಇದೆ. ಹೈಕಮಾಂಡ್ ಹೇಳಿದ್ದಕ್ಕೆ ಇಲ್ಲ ಎನ್ನುವವರೇ ಇಲ್ಲ. ಆದರೆ ಈ ಬಾರಿ ಬಿಜೆಪಿ ಲಂಗು ಲಗಾಮಿಲ್ಲದ ಕುದುರೆಯಂತಾಗಿದೆ. ಹೇಳುವವರು – ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ. ಪ್ರತಿ ಬಾರಿಯೂ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದೊಳಗೆ ಕೆಸರೆರಚಾಟ ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಒಗ್ಗಟ್ಟೇ ಒಗ್ಗಟ್ಟು. ತಳಮಟ್ಟದಲ್ಲೇ ಭಾರೀ ಪ್ರಚಾರ ನಡೆಯುತ್ತಿದೆ.

ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ Read More »

ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ, ಗ್ರಾಮೀಣ ಪ್ರಚಾರ ಸಮಿತಿಗೆ ಆಯ್ಕೆ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಪ್ರಚಾರ ಸಮಿತಿಗೆ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ನಗರ ಸಮಿತಿ ಸಂಚಾಲಕರಾಗಿ ಪ್ರಸನ್ನ ಕುಮಾರ್ ಶೆಟ್ಟಿ, ಸಹಸಂಚಾಲಕರಾಗಿ ಶಿವನಾಥ ರೈ ಮೇಗಿನಗುತ್ತು ಹಾಗೂ ಹರ್ಷದ್ ದರ್ಬೆ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಪ್ರಚಾರ ಸಮಿತಿ ಸಹಸಂಚಾಲಕರಾಗಿ ಶಶಿಕಿರಣ್ ರೈ ನೂಜಿಬೈಲು, ಬೂಡಿಯಾರ್ ಪುರುಷೋತ್ತಮ ರೈ ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ

ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ, ಗ್ರಾಮೀಣ ಪ್ರಚಾರ ಸಮಿತಿಗೆ ಆಯ್ಕೆ Read More »

ಕಾಂಗ್ರೆಸ್ಸಿನ ಒಗ್ಗಟ್ಟಿನಿಂದ ಬಿಜೆಪಿ ಕೊತಕೊತ ಕುದಿಯುತ್ತಿದೆ

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಕಾಂಗ್ರೆಸ್ ನಾಯಕರ ಒಗ್ಗಟ್ಟು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್‌ನಲ್ಲಿ 14 ಮಂದಿ ಟಕೆಟ್ ಆಕಾಂಕ್ಷಿಗಳ ಪೈಕಿ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಕಾಂಗ್ರೆಸ್ಸಿಗರು ಎಲ್ಲರೂ ಬೆಂಬಲಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು

ಕಾಂಗ್ರೆಸ್ಸಿನ ಒಗ್ಗಟ್ಟಿನಿಂದ ಬಿಜೆಪಿ ಕೊತಕೊತ ಕುದಿಯುತ್ತಿದೆ Read More »

ದೇವಸ್ಥಾನದ ದುಡ್ಡು ಹೊಡೆದ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ | ದಿ. ಪ್ರವೀಣ್ ನೆಟ್ಟಾರು ಮನೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ದೇವಸ್ಥಾನದ ದುಡ್ಡು ಹೊಡೆದ, ಹಿಂದೂಗಳ ಮೇಲೆಯೇ ದೌರ್ಜನ್ಯ ನಡೆಸಿದ ಅರುಣ್ ಕುಮಾರ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ ಎಂದು ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸಿದ್ದಾರೆ. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ನೂತನ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ, ಮಾಧ್ಯಮದೊಂದಿಗೆ ಮಾತನಾಡಿದ ಅವರು ಅರುಣ್ ಕುಮಾರ್ ಪುತ್ತಿಲ ವಿರುದ್ಧ ಹರಿಹಾಯ್ದರು. ಹೆಣ್ಣು ಮಗಳೊಬ್ಬಳು ತನ್ನ ಕಾರಿನಡಿಗೆ ಬಿದ್ದು ಮೃತಪಟ್ಟಾಗ, ತಿರುಗಿ ನೋಡದೇ ಹೋದ ಅರುಣ್ ಪುತ್ತಿಲ ಯಾವ ಹಿಂದುತ್ವವಾದಿ. ಗೋ ಸಾಗಾಟವನ್ನು ಹಿಂದೂ

ದೇವಸ್ಥಾನದ ದುಡ್ಡು ಹೊಡೆದ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ | ದಿ. ಪ್ರವೀಣ್ ನೆಟ್ಟಾರು ಮನೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ Read More »

ಪೆರ್ಲಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ. ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ  ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಪೆರ್ಲಂಪಾಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ಬಂದಾಗ ಅನೇಕ ಮಂದಿ ಭೂಮಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡವರೆಲ್ಲರೂ ಇಂದಿಗೂ ಕಾಂಗ್ರೆಸ್ಸಲ್ಲೇ

ಪೆರ್ಲಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ವರದಿ | ಶಾಸಕ ಸಂಜೀವ ಮಠಂದೂರಿಗೆ 2ನೇ ಸ್ಥಾನ

ಪುತ್ತೂರು: ವಿಧಾನಸಭೆಯಲ್ಲಿ 2018ರಿಂದ 2022ರ ನಡುವೆ ನಡೆದಿರುವ ಅಧಿವೇಶನಗಳಲ್ಲಿ ಭಾಗಿಯಾದ ಶಾಸಕರ ಹಾಜರಾತಿಯ ವರದಿ ಪ್ರಕಟಗೊಂಡಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು 2ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2018ರಿಂದ 2022ರ ತನಕ ನಡೆದ 15 ಅಧಿವೇಶನಗಳಲ್ಲಿ ಶಾಸಕರ ಹಾಜರಾತಿ ಬಗ್ಗೆ ಕೇಳಲಾದ ಪ್ರಶ್ನೆಗಳು, ಮಸೂದೆಗಳ ಮಂಡನೆ, ಹಾಗೂ ಅಂಗೀಕಾರ ಸೇರಿ ಇತರ ಮಾಹಿತಿ ಒಳಗೊಂಢ ಅಂಶಗಳು ಈ ವರದಿಯಲ್ಲಿವೆ. ಶಾಸಕರ ಕಾರ್ಯಕ್ಷಮತೆ ಬಗ್ಗೆ ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರೀಫಾರ್ಮ್ಸ್ ವರದಿ ಮಾಡಿದೆ. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೀವ್ರವಾಗಿ

ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ವರದಿ | ಶಾಸಕ ಸಂಜೀವ ಮಠಂದೂರಿಗೆ 2ನೇ ಸ್ಥಾನ Read More »

error: Content is protected !!
Scroll to Top