ಬಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆ ಜೇನುಗೂಡಿಗೆ ಕಲ್ಲೆಸೆದಂತೆ | ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿ
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದ್ದು, ಹತಾಶ ಮನೋಸ್ಥಿತಿಯಿಂದ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಮೂಲಕ ಜೇನು ಗೂಡಿಗೆ ಕಲ್ಲು ಎಸೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಮ ಮಂದಿರ ಹೋರಾಟದಿಂದ ಹುಟ್ಟಿಕೊಂಡಿರುವ ಬಜರಂಗದಳವನ್ನು ಕೆರಳಿಸುವ ಕೆಲಸಕ್ಕೆ ಕೈಹಾಕಿದ್ದು, ಕೋವಿಡ್ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರು ತಮ್ಮ ಮನೆ ಮಠಗಳನ್ನು ಬಿಟ್ಟು ಯಾವುದೇ ಫಲಾಪೇಕ್ಷೆಯಿಲ್ಲದೆ ಜನರ ಆರೋಗ್ಯ […]










