ರಾಜಕೀಯ

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ಕೈತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ . ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ […]

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್ Read More »

ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ನಾಮಪತ್ರ ಸಲ್ಲಿಕೆ

ಪುತ್ತೂರು: ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ನೀಡದ ಹಿನ್ನಲೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರ ತನ್ನ ಬೆಂಬಲಿಗರೊಂದಿಗೆ ತೆರಳಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ನಾಮಪತ್ರ ಸಲ್ಲಿಕೆ Read More »

ಪುತ್ತಿಲಗೋಸ್ಕರ ಮೋದಿಗೂ ಸವಾಲೆಸೆದರೇ!?

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಪರ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಪ್ರಚಾರದ ಭರದಲ್ಲಿ ತಮ್ಮ ಆರಾಧಕ ನರೇಂದ್ರ ಮೋದಿಯನ್ನೇ ನಿರ್ಲಕ್ಷಿಸಿದರೇ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಇದೀಗ ಕೇಳಿಬರುತ್ತಿದೆ. “ಈ ಬಾರಿ ಮೋದಿ ಬಂದು ಮತ ಕೇಳಿದರೂ, ನನ್ನ ಮನೆಯವರ ಮತ ಅರುಣ್ಣನಿಗೇ” ಹೀಗೆಂಬ ಒಕ್ಕಣೆಯ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನರೇಂದ್ರ ಮೋದಿ ದೇಶದ ಪಥವನ್ನೇ ಬದಲಿಸಿ, ಭಾರತವನ್ನು ವಿಶ್ವಗುರುವಾಗುವತ್ತ ಕೊಂಡೊಯ್ಯುವಲ್ಲಿ ಯಶ ಕಂಡವರು. ತನ್ನ ದೇಶಕ್ಕೆ ಬಾರದಂತೆ ತಡೆ ಹಾಕಿದ್ದ ಅಮೆರಿಕ,

ಪುತ್ತಿಲಗೋಸ್ಕರ ಮೋದಿಗೂ ಸವಾಲೆಸೆದರೇ!? Read More »

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ

ಪ್ರಚಾರದಲ್ಲಿ ಯೋಗಿ ಆದಿತ್ಯನಾಥ್‌ ಭಾಗಿಯಾಗುವ ನಿರೀಕ್ಷೆ ಬೆಂಗಳೂರು : ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಂಗಕ್ಕಿಳಿಯಲಿದ್ದಾರೆ. ಮೇ 6 ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮೂಲ್ಕಿಯಲ್ಲಿ ಮೋದಿ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ. ಬದಲಾಗುವ ಸಾಧ್ಯತೆಯೂ ಇದೆಎಂದು ಪಕ್ಷದ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ Read More »

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೆಲವು ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿರಬಹುದು. ಆದರೆ, ಅವರು ನಮ್ಮ ಮತದಾರರನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಬಿ.ಎಸ್. ಯಡಿಯೂರಪ್ಪ ಬಿಜೆಪಿ ಜತೆ ಇರುವವರೆಗೂ ಲಿಂಗಾಯತ ಮತಗಳು ಪಕ್ಷದಲ್ಲೇ ಇರುತ್ತವೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿಗಳಾದ ವೀರೇಂದ್ರ ಪಾಟೀಲ್, ಡಿ. ದೇವರಾಜ್

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ Read More »

ಸಚಿವ ಎನ್. ನಾಗರಾಜ್ ರಾಜ್ಯದ ನಂಬರ್‌ ಒನ್‌ ಒಡೆಯ : ದ್ವಿತೀಯ ಸ್ಥಾನದಲ್ಲಿ ಡಿ. ಕೆ. ಶಿವಕುಮಾರ್‌

ಬೆಂಗಳೂರು: ನಾಮಪತ್ರ ಸಲ್ಲಿಕೆ ಶುರುವಾಗುತ್ತಿದ್ದಂತೆ ಯಾವ ರಾಜಕಾರಣಿ ಎಷ್ಟು ಕೋಟಿಗಳ ಒಡೆಯ ಎಂಬ ಮಾಹಿತಿಯೂ ಬಹಿರಂಗವಾಗುತ್ತಿದೆ. ಇಷ್ಟರ ವರೆಗೆ ಲಭ್ಯವಾಗಿರುವ ಅಫಿಡವಿತ್‌ ಮಾಹಿತಿ ಪ್ರಕಾರ ರಾಜ್ಯದ ಕೋಟಿ ಕುಳಗಳಲ್ಲಿ ಸಚಿವ ಎನ್. ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅಗ್ರಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದ್ವಿತೀಯ ಸ್ಥಾನದಲ್ಲಿದ್ದಾರೆ. ಎಂಟಿಬಿ ಬರೋಬ್ಬರಿ 1,609 ಕೋಟಿ ರೂ. ಸಂಪತ್ತಿನ ಒಡೆಯ ಎಂದು ಅವರ ಅಫಿಡವಿತ್‌ ತಿಳಿಸುತ್ತದೆ. ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ. 2019ರ ಉಪಚುನಾವಣೆಗೆ ಸಲ್ಲಿಸಿದ

ಸಚಿವ ಎನ್. ನಾಗರಾಜ್ ರಾಜ್ಯದ ನಂಬರ್‌ ಒನ್‌ ಒಡೆಯ : ದ್ವಿತೀಯ ಸ್ಥಾನದಲ್ಲಿ ಡಿ. ಕೆ. ಶಿವಕುಮಾರ್‌ Read More »

ರಾಜ್ಯದಲ್ಲಿ ಗುಜರಾತ್‌ ಮೋಡೆಲ್‌ ಅನುಷ್ಠಾನ : ಬಿಜೆಪಿಯಿಂದ 73 ಹೊಸ ಅಭ್ಯರ್ಥಿಗಳು ಕಣಕ್ಕೆ

ಪುತ್ತೂರು : ರಾಜ್ಯ ಬಿಜೆಪಿಯಲ್ಲಿ ಈ ಸಲ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚು ಮನ್ನಣೆ ಸಿಕ್ಕಿದೆ. ಬಿಜೆಪಿ ಬರೋಬ್ಬರಿ 73 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಯೋಗ ಮಾಡಿದೆ. ಇದು ಕಳೆದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಪ್ರಯೋಗದ ಫಲ. ಅಲ್ಲಿ ಹಳಬರನ್ನು ಸಾರಾಸಗಟು ಬದಿಗೆ ಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿತ್ತು. ಇದರ ಫಲವಾಗಿ ಗುಜರಾತಿನಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದು ದಾಖಲೆ ಮಾಡಿದೆ. ಈಗ ಕರ್ನಾಟಕದಲ್ಲೂ ಇದೇ ಗುಜರಾತ್‌ ಮೋಡೆಲ್‌ ಅನುಷ್ಠಾನವಾಗುತ್ತಿರುವುದು ನಿಚ್ಚಳವಾಗಿ

ರಾಜ್ಯದಲ್ಲಿ ಗುಜರಾತ್‌ ಮೋಡೆಲ್‌ ಅನುಷ್ಠಾನ : ಬಿಜೆಪಿಯಿಂದ 73 ಹೊಸ ಅಭ್ಯರ್ಥಿಗಳು ಕಣಕ್ಕೆ Read More »

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಸಿದರು. ಸುಳ್ಯದ ಶ್ರೀರಾಮ ಪೇಟೆಯಲ್ಲಿ ಮಾಜಿ ಸಚಿವ ಡಿ.ವಿದಾನಂದ ಗೌಡ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಸುಳ್ಯ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆ Read More »

ಆಶಾ ತಿಮ್ಮಪ್ಪ ಆಶಾದಾಯಕ ಮಾತು | ಅಭಿವೃದ್ಧಿ ಕೆಲಸ, ಹಿಂದುತ್ವಕ್ಕಾಗಿ ಕೆಲಸ ಮಾಡಿದ ಅನುಭವ | ಜನಸಂಘದ ಕಾಲದಿಂದಲೂ ಜನರ ಒಡನಾಡಿ

ಪುತ್ತೂರು ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕೀಯ ತಿರುಗಿ ನೋಡುವಂತೆ ಮಾಡಿದೆ. ರಾಷ್ಟ್ರ ನಾಯಕರು ಪುತ್ತೂರಿಗೆ ಬರುವ ಸೂಚನೆಗಳು ಇವೆ. ಈ ಎಲ್ಲಾದರ ನಡುವೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕೆಲಸ, ಆಲೋಚನೆ, ಭವಿಷ್ಯದ ಯೋಜನೆಗಳು ಬಹಳ ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಅವರೊಂದಿಗೆ ಮಾತುಕತೆ ನಡೆಸಿದ್ದು, ಅದರ ವಿವರ ಇಲ್ಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿರೀಕ್ಷಿತವೇ? ಆಶ್ಚರ್ಯ. ನಿರೀಕ್ಷೆಯೇ ಮಾಡಿರಲಿಲ್ಲ ಹಾಗೂ ಇರಲಿಲ್ಲ. ಬೆಳ್ತಂಗಡಿಯಲ್ಲಿ ಚುನಾವಣಾ ಪ್ರಭಾರಿಯ ಜವಾಬ್ದಾರಿ

ಆಶಾ ತಿಮ್ಮಪ್ಪ ಆಶಾದಾಯಕ ಮಾತು | ಅಭಿವೃದ್ಧಿ ಕೆಲಸ, ಹಿಂದುತ್ವಕ್ಕಾಗಿ ಕೆಲಸ ಮಾಡಿದ ಅನುಭವ | ಜನಸಂಘದ ಕಾಲದಿಂದಲೂ ಜನರ ಒಡನಾಡಿ Read More »

ನಾಳೆ (ಏ.19) ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನಾಮಪತ್ರ ಸಲ್ಲಿಕೆ.

ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಏ.19 ಬುಧವಾರ  ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ದರ್ಬೆ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿ ಮುಖ್ಯರಸ್ತೆಯಲ್ಲಿ ಆಗಮಿಸಿ ಪುತ್ತೂರು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಪಕ್ಷದ ಕಾರ್ತಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು  ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಏ.19) ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನಾಮಪತ್ರ ಸಲ್ಲಿಕೆ. Read More »

error: Content is protected !!
Scroll to Top