ರಾಜಕೀಯ

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ

ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ […]

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ Read More »

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು

ಸದ್ಯಕ್ಕೆ ಡಿನ್ನರ್‌ ಮೀಟಿಂಗ್‌ ನಡೆಸದಂತೆ ಸೂಚನೆ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಗುಂಪು ರಾಜಕೀಯ ಜೋರಾಗಿದೆ. ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಮೀಟಿಂಗ್‌ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ತನ್ನ ಶಕ್ತಿ ಪ್ರದರ್ಶಿಸಲು ಇಂದು ಡಿನ್ನರ್ ಸಭೆ ಕರೆದಿದ್ದರು. ಆದರೆ ಈ ಡಿನ್ನರ್‌ ಮೀಟಿಂಗ್‌ಗೆ ಹೈಕಮಾಂಡ್ ತಡೆ ಹಾಕಿದೆ. ಎಸ್‌ಸಿ/ಎಸ್‌ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು Read More »

ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಸಲ್ಲಿಕೆ | ಸಹಕಾರ ಭಾರತೀಯ ಅಭ್ಯರ್ಥಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲಾಯಿತು. ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿಗೆ ನಡೆಯುವ ಚುನಾವಣೆಗೆ ನರಿಮೊಗರು ವಲಯದಿಂದ ಅನುಸೂಚಿತ ಜಾತಿಯ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಯಾಗಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್. ಟಿ ಮೋರ್ಚ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಗ್ರಾಮಾಂತರ ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಯತೀಂದ್ರ ಕೊಚ್ಚಿ,

ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಸಲ್ಲಿಕೆ | ಸಹಕಾರ ಭಾರತೀಯ ಅಭ್ಯರ್ಥಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಕೆ Read More »

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು

ಉಪ್ಪಿನಂಗಡಿ : 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿ ಜ.8ರಂದು ಹಮ್ಮಿಕೊಂಡಿದ್ದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. 31ನೇ ನೆಕ್ಕಿಲಾಡಿ ಬೊಳುವಾರು ರಾಜ್ಯ ಹೆದ್ದಾರಿಯ 31 ನೆಕ್ಕಿಲಾಡಿಯಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಡಾಮರು ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿದೆ ಇದರಿಂದ ಜ.8 ರಂದು ನಡೆಯಬೇಕಾದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. ಕಳೆದ ಡಿ.2ರಂದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಹೆದ್ದಾರಿ ಕಾಮಗಾರಿಯ ವಿಳಂಬವನ್ನು

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು Read More »

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ

ಕುತೂಹಲ ಕೆರಳಿಸಿದ ರಾಷ್ಟ್ರ ರಾಜಧಾನಿಯ ಮತ ಸಮರ ಹೊಸದಿಲ್ಲಿ: ದೇಶ ಇನ್ನೊಂದು ಚುನಾವಣೆ ಕದನ ಕುತೂಹಲಕ್ಕೆ ಸಜ್ಜಾಗುತ್ತಿದೆ. ಚುನಾವಣಾ ಆಯೋಗ ಇಂದು ಮಧ್ಯಾಹ್ನ 2 ಗಂಟೆಗೆ ದಿಲ್ಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ರಾಷ್ಟ್ರ ರಾಜಧಾನಿಯಿರುವ ರಾಜ್ಯದ ಚುನಾವಣೆ ಆದ ಕಾರಣ ದಿಲ್ಲಿ ಸಮರ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ್ಟು ಕುತೂಹಲ ಕೆರಳಿಸಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ. ಈಗಾಗಲೇ ದಿಲ್ಲಿ ವಿಧಾನಸಭಾ ಚುನಾವಣೆಗಾಗಿ ಆಮ್

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾನುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ಕಾರ್ಯದರ್ಶಿ ನಾಗೇಶ್‍ ಪ್ರಭು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ Read More »

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ

ಶಿವಮೊಗ್ಗ: ಕೆಲವು ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.ಗುತ್ತಿಗೆದಾರ ಸಚಿವ್ ಪಾಂಚಾಳ್ ಡೆತ್‌ನೋಟ್‌ನಲ್ಲಿ ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬರೆದಿದ್ದಾರೆ. ಪ್ರಭಾವಿ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಸಚಿನ್ ಅವರು ಪ್ರಕರಣನ್ನು ಕೇಂದ್ರೀಯ ತನಿಖಾ

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ Read More »

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ

ಒಂದು ವರ್ಷದಿಂದ ಬಿಲ್‌ಗಾಗಿ ಅಲೆದಾಡುತ್ತಿರುವ ಗುತ್ತಿಗೆದಾರ ಬೆಂಗಳೂರು: ಬಿಲ್‌ ಪಾಸ್‌ ಆಗದೆ ಕಂಗಾಲಾಗಿರುವ ಸರಕಾರಿ ಗುತ್ತಿಗೆದಾರರೊಬ್ಬರು ಒಂದೋ ಬಿಲ್‌ ಪಾಸ್‌ ಮಾಡಿಸಿ ಇಲ್ಲವೇ ದಯಾಮರಣವನ್ನಾದರೂ ಕರುಣಿಸಿ ಎಂದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮನವರಿಗೆ ಪತ್ರ ಬರೆದಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗಿದ್ದು, ಕಾಮಗಾರಿ ಮಾಡಲು ಸರಕಾರದ ಬಳಿ ಹಣ ಇಲ್ಲ ಎಂಬ ಕೂಗು ಕೇಳಿಸುತ್ತಿರುವಾಗಲೇ ನಡೆದಿರುವ ಈ ಬೆಳವಣಿಗೆ ವಿಪಕ್ಷದ ಕೈಗೆ ಇನ್ನೊಂದು ಅಸ್ತ್ರವಾಗಿ ಸಿಕ್ಕಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಕ್ಲಾಸ್‌ ಒನ್‌ ಗುತ್ತಿಗೆದಾರ ಮೊಹಮ್ಮದ್‌ ಮಝರ್‌ ಎಂಬವರು ಈ

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ Read More »

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

ಡಿಕೆಶಿ ವಿದೇಶದಲ್ಲಿರುವಾಗ ಆಪ್ತರೊಂದಿಗೆ ಗೂಢಾಲೋಚನೆ ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ನಡೆಸಿದ ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಂಪುಟ ಪುನರ್‌ ರಚನೆಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ಪಡಸಾಲೆಯಲ್ಲಿ ಈ ಡಿನ್ನರ್‌ ಮೀಟಿಂಗ್‌ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಆಪ್ತರ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ Read More »

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ

ಕಾಂಗ್ರೆಸ್‌-ಎಸ್‌ಡಿಪಿಐ ಅಧಿಕಾರ ಸ್ವೀಕಾರ ವೇಳೆ ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಉಡುಪಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಮೂರು ದಶಕಗಳ ಬಳಿಕ ಕಾಂಗ್ರೆಸ್​ ಮತ್ತು ಎಸ್​ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್​ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದ್ದರೆ, ಎಸ್​ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ Read More »

error: Content is protected !!
Scroll to Top