ರಾಜಕೀಯ

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ

ಕಾಂಗ್ರೆಸ್‌ ನಾಯಕನ ವಿರುದ್ಧ ಕೇಸು ದಾಖಲು ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆಯೊಡ್ಡಿದ್ದಾರೆ.ಮೋದಿ ಹೆಸರಿನವರೆಲ್ಲ ಕಳ್ಳರು ಎಂದು ಟೀಕಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾ. 23 ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. […]

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ Read More »

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಏ. 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅನುಮತಿ ಪಡೆಯದೆ

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ

ಬೆಂಗಳೂರು : 2 ದಿನಗಳ ಕಾಲ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಏ. 7 ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ

ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ Read More »

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ

ತುಮಕೂರು : ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಸ್ಫೋಟಗೊಂಡಿದೆ. 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿ ಬಿಜೆಪಿ, ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದ ಕಾಂಗ್ರೆಸ್‌ಗೆ 2ನೇ ಪಟ್ಟಿಯಲ್ಲಿ ಬಂಡಾಯದ ಬೇಗುದಿ ಅಪ್ಪಳಿಸಿದೆ. ಟಿಕೆಟ್ ಸಿಗದ್ದಕ್ಕೆ ರೊಚ್ಚಿಗೆದ್ದಿರುವ ಕೈ ಕಲಿಗಳು ಕಿಚ್ಚು ಹೊತ್ತಿಸಿದ್ದಾರೆ. ಅಲ್ಲದೇ ಟಿಕೆಟ್​ ಕೈತಪ್ಪಿದ್ದಕ್ಕೆ ಒಬ್ಬೊಬ್ಬರೇ ಕಾಂಗ್ರೆಸ್​ಗೆ ಗುಡ್ ಬೈ ಹೇಳುತ್ತಿದ್ದಾರೆ. ತಮಕೂರು, ಚಿತ್ರದುರ್ಗ, ಗೋಕಾಕ್, ಕಲ್ಲಘಟಗಿ ಸೇರಿದಂತೆ ಇತರೆ ಕೆಲ ಕ್ಷೇತ್ರಗಳಲ್ಲಿ ಸಂಭ್ರಮವಿರಬೇಕಾದ ಕಾಂಗ್ರೆಸ್ ಮನೆಯಲ್ಲಿ ಸಮರವೇ ಶುರುವಾಗಿದೆ. ಅದರಂತೆ

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ Read More »

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

ದೆಹಲಿ : ಅವಿಭಜಿತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಿರಣ್ ಕುಮಾರ್ ರೆಡ್ಡಿ ಅವರಿಗೆ ಕೇಸರಿ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ Read More »

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ

ಪುತ್ತೂರು: ಮಾನಹಾನಿಕರ ವರದಿ ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಮುದ್ರಣ, ವಿದ್ಯುನ್ಮಾನ, ಡಿಜಿಟಲ್ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ತಡೆಯಾಜ್ಞೆ ನೀಡುವಂತೆ ಶಾಸಕ ಮಠಂದೂರು ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಜೂನ್ 26ಕ್ಕೆ ವಿಚಾರಣೆ ಮುಂದೂಡಿದೆ. ತಾನು ವಿಧಾನಸಭಾ ಸದಸ್ಯನಾಗಿದ್ದು, ಕೆಲ‌ ಕಿಡಿಗೇಡಿಗಳು ತನ್ನ ಮಾನಹಾನಿಕರ ಛಾಯಾಚಿತ್ರವನ್ನು

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ Read More »

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು!

ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ.

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »

error: Content is protected !!
Scroll to Top