ರಾಜಕೀಯ

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ

ಮಂಗಳೂರು : ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿ ಯಿಂದ 2ಎಗೆ ವರ್ಗಾಯಿಸಬೇಕು ಎಂಬ ಬೇಡಿಕೆಯ ಮನವಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‍ ಶೆಟ್ಟಿ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಮಂಗಳೂರಿನ ಬಂಟ್ಸ್ ಹಾಸ್ಟೇಲ್‍ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಲ್ಲಾ ಸಮಾಜಕ್ಕೂ ನಿಗಮ, ಸರಕಾರದಿಂದ ಸೌಲಭ್ಯ ದೊರೆಯುತ್ತಿದೆ. […]

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ Read More »

ಆರ್ಯಾಪು, ಕುಟ್ರುಪ್ಪಾಡಿ, ಅನಂತಾಡಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಚುನಾವಣೆ | ಬಿರುಸಿನ ಮತದಾನ | ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಹುದ್ದೆಗೆ ಶನಿವಾರ ಉಪಚುನಾವಣೆ ನಡೆಯುತ್ತಿದ್ದು, ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆಗುತ್ತಿದೆ. ಶಾಸಕ ಸಂಜೀವ ಮಠಂದೂರು ಸೇರಿದಂತೆ ರಾಜಕೀಯ ಪ್ರಮುಖರು ಭೇಟಿ ನೀಡಿ, ಚುನಾವಣಾ ಆಗುಹೋಗುಗಳನ್ನು ವೀಕ್ಷಿಸುತ್ತಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಗಿರೀಶ್ ಗೌಡ ಮರಿಕೆ ಅವರ ನಿಧನದಿಂದ ತೆರವಾಗಿದ್ದ ಹುದ್ದೆಗೆ ಉಪಚುನಾವಣೆ ನಡೆಯುತ್ತಿದೆ. ಸಾಮಾನ್ಯ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ  ಅಭ್ಯರ್ಥಿಯಾಗಿ ಯತೀಶ್ ಡಿ.ಬಿ. ಸಂಟ್ಯಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪ್ರಜ್ವಲ್ ರೈ ತೊಟ್ಲ ಸ್ಪರ್ಧಿಸುತ್ತಿದ್ದಾರೆ. ಕಡಬದ

ಆರ್ಯಾಪು, ಕುಟ್ರುಪ್ಪಾಡಿ, ಅನಂತಾಡಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಚುನಾವಣೆ | ಬಿರುಸಿನ ಮತದಾನ | ಶಾಸಕ ಸಂಜೀವ ಮಠಂದೂರು ಭೇಟಿ Read More »

ಆರ್ಯಾಪು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಂದ ಬಿರುಸಿನ ಚುನಾವಣಾ ಪ್ರಚಾರ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯತೀಶ ಡಿ.ಬಿ. ಅವರ ಪರವಾಗಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರು ಅಂತಿಮ ಹಂತದ ಚುನಾವಣಾ ಪ್ರಚಾರ ನಡೆಸಿದರು. ಆರ್ಯಾಪು ಗ್ರಾ.ಪಂ.ನ ೪ನೇ ವಾರ್ಡ್‌ನ ಮತದಾರರನ್ನು ಭೇಟಿಯಾದ ಬೂಡಿಯಾರ್ ರಾಧಾಕೃಷ್ಣ ರೈ ಅವರು, ಉಪಚುನಾವಣೆಯಲ್ಲಿ ಟೇಬಲ್ ಗುರುತಿಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು. ಮನೆ ಭೇಟಿ, ಅಂಗಡಿ ಮೊದಲಾದೆಡೆ ಮತದಾರರನ್ನು ಭೇಟಿಯಾದ ಅವರು, ಬಿರುಸಿನ ಪ್ರಚಾರ ನಡೆಸಿದರು.

ಆರ್ಯಾಪು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಂದ ಬಿರುಸಿನ ಚುನಾವಣಾ ಪ್ರಚಾರ Read More »

ಆರ್ಯಾಪು ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯತೀಶ ಡಿ.ಬಿ. ಮತಯಾಚನೆ

ಪುತ್ತೂರು: ಆರ್ಯಾಪು ಗ್ರಾಮದ ವಾರ್ಡ್ ಸಂಖ್ಯೆ ೪ಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯತೀಶ ಡಿ.ಬಿ. ಅವರು ಕಣಕ್ಕಿಳಿದಿದ್ದು, ವಾರ್ಡ್ ವ್ಯಾಪ್ತಿಯಲ್ಲಿ ಮತ ಯಾಚನೆಯ ಕಾರ್ಯ ನಡೆಸಿದರು. ತನ್ನ ಚುನಾವಣಾ ಗುರುತಾದ ಟೇಬಲ್ ಚಿಹ್ನೆಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು. ಜನರ ಬಳಿ ಮತಯಾಚನೆ ಮಾಡುತ್ತಾ ಮಾತನಾಡಿದ ಯತೀಶ ಡಿ.ಬಿ. ಅವರು, ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ತಾನು, ಇದೀಗ ಸಂಟ್ಯಾರ್‌ನಲ್ಲಿ ವಾಸವಾಗಿದ್ದೇನೆ. ಕಾರ್ಪೊರೇಟ್ ಜಗತ್ತಿನ ಜೊತೆಗೆ ಗ್ರಾಮೀಣ ಭಾಗದ ಆಗುಹೋಗುಗಳನ್ನು ಅರಿತುಕೊಂಡಿರುವುದರಿಂದ, ಜನರ

ಆರ್ಯಾಪು ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯತೀಶ ಡಿ.ಬಿ. ಮತಯಾಚನೆ Read More »

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ

ಸದನಕ್ಕೆ ಸಚಿವ ಸುನಿಲ್‌ ಕುಮಾರ್‌ ಹೇಳಿಕೆ ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳ ಗೌರವ ಧನವನ್ನು ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ 1 ಸಾವಿರ ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಎಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಾ.ರಾ.ಮಹೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಪ್ರಸ್ತುತ ಮಾಸಿಕ 3,700 ರೂ. ಹಾಗೂ ಅಡುಗೆ ಸಹಾಯಕರಿಗೆ ಮಾಸಿಕ

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ Read More »

2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ಹೊಸದಿಲ್ಲಿ : 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ವಿಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ಕಾಂಗ್ರೆಸ್ ದೋಸ್ತಿ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸದರು ಜನರ ಪರವಾಗಿ ಧ್ವನಿ ಎತ್ತಲು ಹಾಗೂ ಅದಾನಿ- ಹಿಂಡೆನ್‌ಬರ್ಗ್ ವಿಚಾರವನ್ನು ಜೆಪಿಸಿ ತನಿಖೆಗೆ ಒಪ್ಪಿಸುವ ಬೇಡಿಕೆಗೆ ಒಪ್ಪದ ಸರ್ಕಾರ ಸಂಸತನ್ನು ರಬ್ಬರ್ ಸ್ಟಾಂಪ್ ಆಗಿ ಮಾಡಿದೆ ಎಂದು ಟೀಕಿಸಿರುವ ಅವರು ಪ್ರಜಾಪ್ರಭುತ್ವವನ್ನು ದಮನಿಸುವ ಸರಕಾರವನ್ನು ಮುಂದಿನ

2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ Read More »

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು: ಇದೇ ನನ್ನ ಕೊನೆ ಅಧಿವೇಶನ ಎನ್ನುವ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಿಸಿದ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ ಎನ್ನುತ್ತಲೇ ಭಾವುಕರಾದರು ಬಿ.ಎಸ್.ವೈ. ಇದೇ ಸಂದರ್ಭ ವಿಪಕ್ಷಗಳ ಆರೋಪಗಳಿಗೂ ಉತ್ತರ ನೀಡಿದ ಅವರು, ‘ಬಿಜೆಪಿ ನನ್ನನ್ನು ಕಡೆಗಣಿಸಿದೆ ಎಂದು ವಿಪಕ್ಷಗಳು

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ Read More »

ಕಾಂಗ್ರೆಸ್ – ಎಸ್.ಡಿ.ಪಿ.ಐ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ | ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದ ಷಡ್ಯಂತ್ರ ಬಯಲಿಗೆಳೆದ ಹಿಂಜಾವೇ, ಬಿಎಂಎಸ್ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಹರಿಪ್ರಸಾದ್ ಯಾದವ್

ಪುತ್ತೂರು: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಒಂದೇ ನಾಣ್ಯದ ಎರಡು ಮುಖಗಳಂತೆ ಎಂದು ಸಾಬೀತಾಗಿದ್ದು, ಈ ವಿಷಯದಲ್ಲಿ ಉಳ್ಳಾಲ ಕಾಂಗ್ರೆಸ್ ಶಾಸಕರು ಮತ್ತು ನಿಷೇಧಿತ ಪಿ.ಎಫ್.ಐ ಸಂಘಟನೆಯ ರಾಜಕೀಯ ಪಾರ್ಟಿಯಾದ ಎಸ್ ಡಿಪಿಐ ಮುಖಂಡ ನೀಡಿದ ಹೇಳಿಕೆಯಲ್ಲಿ ಸಾಮ್ಯತೆ ಇದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ತಿಳಿಸಿದ್ದಾರೆ. ಈ ಎರಡು ಪಾರ್ಟಿಗಳು ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರ ಪರವಾಗಿ ನಿಲ್ಲದೆ ಕಾರ್ಯಾಗಾರ ನಡೆಸಿದ ಸಂಘಟನೆ ಪರವಾಗಿ ನಿಂತಿರುವುದು

ಕಾಂಗ್ರೆಸ್ – ಎಸ್.ಡಿ.ಪಿ.ಐ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ | ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದ ಷಡ್ಯಂತ್ರ ಬಯಲಿಗೆಳೆದ ಹಿಂಜಾವೇ, ಬಿಎಂಎಸ್ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಹರಿಪ್ರಸಾದ್ ಯಾದವ್ Read More »

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ

ಚುನಾವಣಾ ತಂತ್ರಗಾರಿಕೆಗೆ ನಾಯಕರ ಜತೆ ಸಮಾಲೋಚನೆ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಮಾಡಿದ ಬೆನ್ನಲ್ಲೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಋಾಜ್ಯಕ್ಕೆ ಬರಲಿರುವ ಶಾ ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ. ಗುರುವಾರ ಅಮಿತ್‌ ಶಾ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ Read More »

ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್‌ ಪಾಸ್‌ ಸೌಲಭ್ಯ

ವಿದ್ಯಾರ್ಥಿನಿಯರು, ಮಹಿಳಾ ನೌಕರರು ಫಲಾನುಭವಿಗಳು ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ವಿದ್ಯಾರ್ಥಿನಿಯರ ಬಸ್‌ ಸೌಲಭ್ಯವನ್ನು ಏಪ್ರಿಲ್‌ 1ರಿಂದಲೇ ಜಾರಿಗೆ ತರಲು ಸರಕಾರ ಮುಂದಾಗಿದೆ. ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ

ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್‌ ಪಾಸ್‌ ಸೌಲಭ್ಯ Read More »

error: Content is protected !!
Scroll to Top