ರಾಜಕೀಯ

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ

ಪ್ರಧಾನಿ ಮೋದಿಯ ಕಟ್ಟಾ ಅಭಿಮಾನಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಹಿರಿಯ ನಟ ಅನಂತ್‌ ನಾಗ್‌ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ […]

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ Read More »

ಹಿಂದೂ ಸಂಘಟನೆಗಳ ಆಕ್ಷೇಪಕ್ಕೆ ದಾಳಿ ಎಂದ ಯು.ಟಿ.ಖಾದರ್: ಶಾಸಕ ಸಂಜೀವ ಮಠಂದೂರು ಆಕ್ಷೇಪ

ಪುತ್ತೂರು: ಅಡ್ಯನಡ್ಕದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ನೀಡಿದ ಘಟನೆಯನ್ನು ಖಂಡಿಸಿದ ಹಿಂದೂ ಸಂಘಟನೆಗಳ ಕ್ರಮವನ್ನು ದಾಳಿ ಎಂದು ಸದನದಲ್ಲಿ ಪ್ರಸ್ತಾಪಿಸಿರುವ ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರ ಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಾನು ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ಮಾತನಾಡಿ, ಘಟನೆಯ ಸತ್ಯಾಸತ್ಯತೆಯನ್ನು ತಿಳಿದುಕೊಂಡಿದ್ದೇನೆ. ಕರಾವಳಿ ಭಾಗದ ಓರ್ವ ಶಾಸಕನಾಗಿ, ಆ ಭಾಗದ ಕಾರ್ಯಕರ್ತರ ಜೊತೆ ತಾನು ಸದಾ ಇರುತ್ತೇನೆ ಎಂದು ತಿಳಿಸಿರುವ ಶಾಸಕ ಸಂಜೀವ ಮಠಂದೂರು ಅವರು,

ಹಿಂದೂ ಸಂಘಟನೆಗಳ ಆಕ್ಷೇಪಕ್ಕೆ ದಾಳಿ ಎಂದ ಯು.ಟಿ.ಖಾದರ್: ಶಾಸಕ ಸಂಜೀವ ಮಠಂದೂರು ಆಕ್ಷೇಪ Read More »

ಪಕ್ಷ ಚಟುವಟಿಕೆಯಲ್ಲೇ ತೃಪ್ತಿ ಕಂಡಿರುವ ಬಿಜೆಪಿ ದ.ಕ. ಜಿಲ್ಲಾಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ

ಪುತ್ತೂರು: ಎಂದೂ ಅಧಿಕಾರಕ್ಕೆ ಬಯಸದೇ, ಸದಾ ಪಕ್ಷ ಚಟುವಟಿಕೆಯಲ್ಲೇ ಸಕ್ರೀಯವಾಗಿ ತೊಡಗಿಸಿಕೊಂಡ ನಾಯಕ ಬೂಡಿಯಾರ್ ರಾಧಾಕೃಷ್ಣ ರೈ. ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ, ಕೆಎಂಎಫ್, ಮ್ಯಾಮ್ಕೋಸ್ ನಿರ್ದೇಶಕರಾಗಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಾಗಿ, ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿರುವ ಬೂಡಿಯಾರ್ ರಾಧಾಕೃಷ್ಣ ರೈ ಅವರು, ಇದೀಗ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ. ಕುರಿಯ ಗ್ರಾಮದ ಬೂಡಿಯಾರಿನಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ, ಸಾಮಾಜಿಕ ಚಟುವಟಿಕೆಯಲ್ಲೂ ಗುರುತಿಸಿಕೊಂಡಿದ್ದಾರೆ. ಇದರ ನಡುವೆ ಬಿಜೆಪಿಯನ್ನೇ ಉಸಿರಾಗಿಸಿಕೊಂಡು, ಪಕ್ಷದ ಕೆಲಸಗಳನ್ನು ಸದ್ದಿಲ್ಲದೇ

ಪಕ್ಷ ಚಟುವಟಿಕೆಯಲ್ಲೇ ತೃಪ್ತಿ ಕಂಡಿರುವ ಬಿಜೆಪಿ ದ.ಕ. ಜಿಲ್ಲಾಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ Read More »

ನಾಳೆ (ಫೆ.20) : ಜಾತ್ಯಾತೀತ ಜನತಾದಳದ ಅಲ್ಯಸಂಖ್ಯಾತ, ಯುವ ಘಟಕದ ಕಾರ್ಯಕರ್ತರ ಸಭೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಜಾತ್ಯಾತೀಯ ಜನತಾದಳದ ಅಲ್ಪಸಂಖ್ಯಾತ ಘಟಕ, ಯುವ ಘಟಕ ಹಾಗೂ ನಗರದ ಜನತಾದಳದ ಕಾರ್ಯಕರ್ತರ ಸಭೆ ಫೆ.20 ಸೋಮವಾರ ಬೆಳಿಗ್ಗೆ 10.30 ಕ್ಕೆ ನಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಮುಂದಿನ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರದಲ್ಲಿ ಸಿದ್ಧತೆಗಳನ್ನು ನಡೆಸುವ ಹಿನ್ನಲೆಯಲ್ಲಿ ಸಭೆ ಅಯೋಜಿಸಲಾಗಿದೆ. ಜನತಾದಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜನತಾದಳ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಫೆ.20) : ಜಾತ್ಯಾತೀತ ಜನತಾದಳದ ಅಲ್ಯಸಂಖ್ಯಾತ, ಯುವ ಘಟಕದ ಕಾರ್ಯಕರ್ತರ ಸಭೆ Read More »

ಸದಸ್ಯರ ಗಮನಕ್ಕೆ ಬಾರದೆ ಬ್ಯಾನರ್‍ ತೆಗೆಸಿದ ವಿಚಾರ : ಬೆಟ್ಟಂಪಾಡಿ ಗ್ರಾಪಂ ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಸದಸ್ಯರು | ರದ್ದುಗೊಂಡ ಗ್ರಾಮಸಭೆ

ಪುತ್ತೂರು : ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಕಿರುವ ಬ್ಯಾನರ್ ಗಳನ್ನು ಪಂಚಾಯಿತಿ ಸದಸ್ಯರ ಗಮನಕ್ಕೆ ಬಾರದೆ ಪಿಡಿಒ ತೆಗೆಸಿದ ವಿಚಾರ ಮುಂದಿಟ್ಟುಕೊಂಡು ಸದಸ್ಯರು ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಘಟನೆ ಶುಕ್ರವಾರ ನಡೆದ ಬೆಟ್ಟಂಪಾಡಿ ಗ್ರಾಪಂನಲ್ಲಿ ನಡೆದಿದೆ. ಪಂಚಾಯಿತಿ ಅಧ್ಯಕ್ಷೆ ಪವಿತ್ರ ಡಿ. ಅಧ್ಯಕ್ಷತೆ ಸಭೆ ಆರಂಭಗೊಂಡು ಪಿಡಿಒ ಸೌಮ್ಯ ಲೆಕ್ಕಪತ್ರ ವರದಿ ಮಂಡಿಸಲು ಆರಂಭಿಸುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಸದಸ್ಯೆ ಉಮಾವತಿ, ಬ್ಯಾನರ್‍ ತೆಗೆಯಲು ಪಂಚಾಯಿತಿಗೆ ಸುತ್ತೋಲೆ ಬಂದಿದೆಯೇ ಎಂದು ಪ್ರಶ್ನಿಸಿ ಬಂದಿದ್ದರೆ ಅದನ್ನು ಸಭೆಯ

ಸದಸ್ಯರ ಗಮನಕ್ಕೆ ಬಾರದೆ ಬ್ಯಾನರ್‍ ತೆಗೆಸಿದ ವಿಚಾರ : ಬೆಟ್ಟಂಪಾಡಿ ಗ್ರಾಪಂ ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಸದಸ್ಯರು | ರದ್ದುಗೊಂಡ ಗ್ರಾಮಸಭೆ Read More »

`ಡೂ ಆರ್ ಡೈ’ ಬ್ಯಾಟಲ್ ಘೋಷಣೆ ಮಾಡಿದ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಹಲವು ಬಾರಿ ಕಾಂಗ್ರೆಸ್‌ನಿAದ ಟಿಕೇಟ್ ವಂಚಿತರಾದ ಕಾವು ಹೇಮನಾಥ ಶೆಟ್ಟಿ ಅವರು, ಈ ಬಾರಿಯೂ ಶಾಸಕ ಅಭ್ಯರ್ಥಿ ಸ್ಥಾನದ ಆಕಾಂಕ್ಷಿ. ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ ಅನುಭವ ಇವರದ್ದು. ಹಾಗಿದ್ದು, ಆಡಳಿತದ ವಿಚಾರಕ್ಕೆ ಬಂದಾಗ ಮಾತ್ರ ಅವಕಾಶ ಸಿಕ್ಕಿಲ್ಲ ಎನ್ನುವುದು ಯಕ್ಷ ಪ್ರಶ್ನೆ. ಜನಸಾಮಾನ್ಯರ ಒಡನಾಟ, ಹೈಕಮಾಂಡ್ ಲೀಡರ್‌ಗಳ ಸ್ನೇಹ ಎಲ್ಲವೂ ಇದ್ದರೂ ಅವಕಾಶ ಮಾತ್ರ ಇನ್ನೂ ಅರಸಿ ಬಂದಿಲ್ಲ. ಆದ್ದರಿಂದ ಹೇಮನಾಥ ಶೆಟ್ಟಿ ಅವರು ಈ ಬಾರಿ `ಡೂ ಆರ್ ಡೈ’ ಬ್ಯಾಟಲ್

`ಡೂ ಆರ್ ಡೈ’ ಬ್ಯಾಟಲ್ ಘೋಷಣೆ ಮಾಡಿದ ಕಾವು ಹೇಮನಾಥ ಶೆಟ್ಟಿ Read More »

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ

ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘ ಅಗ್ರಹ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಎರಡು ಕ್ಷೇತ್ರಗಳಲ್ಲಿ ಸಾಧ್ಯವಾಗದಿದ್ದರೆ ಕನಿಷ್ಠ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಗೌಡ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಮಂಗಳೂರು ಪ್ರೆಸ್ಕ್ಲಬ್ನಲ್ಲಿ

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ Read More »

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್

ಬೆಂಗಳೂರು : 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುವೆಂಪು ಕವನದ ಮೂಲಕ ಬಜೆಟ್‌ ಮಂಡನೆ ಪ್ರಾರಂಭಿಸಿದರು. 25 ವರ್ಷಗಳ ದೂರದೃಷ್ಟಿಯ ಬಜೆಟ್‌ ಎಂದು ಸಿಎಂ ಹೇಳಿಕೆ ನೀಡಿದ್ದು, ಆದ್ಯತಾ ವಲಯಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಹೈಲೈಟ್ಸ್ ಇಂತಿದೆ:

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ Read More »

ಚುನಾವಣಾ ತಯಾರಿ ಬಗ್ಗೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮಾತು

ಪುತ್ತೂರು: ಚುನಾವಣಾ ದಿನ ಹತ್ತಿರ ಬರುತ್ತಿದೆ. ಜನಪ್ರತಿನಿಧಿಗಳ ತಯಾರಿಯೂ ಜೋರಾಗಿಯೇ ಇದೆ. ಕಾಂಗ್ರೆಸ್ ಪಾಳಯದಲ್ಲೂ ತಯಾರಿಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈಗಾಗಲೇ 13-14 ಹೆಸರುಗಳು ಮುನ್ನೆಲೆಗೂ ಬಂದಿವೆ. ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ನಾಯಕಿ. ಈ ಹಿಂದೆ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಿದ ಅನುಭವಿ. ಸಾಕಷ್ಟು ಬಾರಿ ಪುತ್ತೂರಿನ ಶಾಸಕ ಸ್ಥಾನದ ಟಿಕೇಟ್ ನೀಡಬೇಕೆಂದು ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕಾಗಿ ನಾಯಕರ ಜೊತೆ ಮಾತುಕತೆ ನಡೆಸಿದ್ದು ಮಾತ್ರವಲ್ಲ, ತಳಮಟ್ಟದಲ್ಲೂ ಕೆಲಸ ನಿರ್ವಹಿಸಿದ್ದಾರೆ. ಸಾಕಷ್ಟು ಓಡಾಟಗಳನ್ನು

ಚುನಾವಣಾ ತಯಾರಿ ಬಗ್ಗೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮಾತು Read More »

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಬೆಂಗಳೂರು : ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು. ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ Read More »

error: Content is protected !!
Scroll to Top