ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಬೂತ್ ಮಟ್ಟದಲ್ಲಿ ಜಯ ಪಡೆದರೆ ಮಾತ್ರ ನಾವು ದೇಶದಲ್ಲಿ ಜಯ ಗಳಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಅದರಂತೆ ಆರ್ಯಾಪು ಗ್ರಾಮ ಪಂಚಾಯತ್ ಬೂತ್ ಮಟ್ಟದಲ್ಲಿ ನಾವು ಜಯ ಗಳಿಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ದಿಕ್ಸೂಚಿಯಾಗಿರಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಆರ್ಯಾಪು ಗ್ರಾಮ ಪಂಚಾಯತಿನ ಉಪಚುನಾವಣೆಯಲ್ಲಿ ಜಯ ಗಳಿಸಿದ ಯತೀಶ್ ದೇವ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಮೆಂಬರ್ ಆಫ್ ಪಾರ್ಲಿಮೆಂಟ್ ಅವರಿಗೂ ಎಂ.ಪಿ. […]










