ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ : ಅಮಿತ್‌ ಶಾ ವಿಶ್ವಾಸ

ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಹೊಸದಿಲ್ಲಿ : ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಕರ್ನಾಟಕಕ್ಕೆ ಎರಡು ತಿಂಗಳಲ್ಲಿ ಐದು ಬಾರಿ ಹೋಗಿದ್ದೇನೆ. ಅಲ್ಲಿನ ಜನರ ನಾಡಿಮಿಡಿತ ಅರಿತಿದ್ದೇನೆ. ನರೇಂದ್ರ ಮೋದಿ ಅವರು ಜನಪ್ರಿಯತೆಯನ್ನು ಕರ್ನಾಟಕ ಕಣ್ಣಾರೆ ಕಂಡಿದೆ. ಅಲ್ಲಿ ತುಂಬ ದೊಡ್ಡ ಮಟ್ಟದ ಬಹುಮತ ಬಿಜೆಪಿಗೆ […]

ಕರ್ನಾಟಕದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ : ಅಮಿತ್‌ ಶಾ ವಿಶ್ವಾಸ Read More »

ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ 

ತರಾತುರಿಯಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಆರೋಪ ಬೆಂಗಳೂರು : ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲ ಇಲಾಖೆಗಳಲ್ಲಿ ತರಾತುರಿಯಿಂದ ಟೆಂಡರ್ ಕರೆಯಲಾಗುತ್ತಿದೆ. 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪಿಸಿದ್ದಾರೆ.ಡಿಕೆಶಿ ಮನೆಯಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದು ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು

ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ  Read More »

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ

ಪುತ್ತೂರು : ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಹಾಗೂ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರ – ಬಿ.ಎಲ್.ಎ. ಗಳ ತರಬೇತಿ ಶಿಬಿರ ನಗರದ ಪುರಭವನದಲ್ಲಿ ಮಂಗಳವಾರ ನಡೆಯಿತು. ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡ ತರಬೇತಿ ಶಿಬಿರವನ್ನು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ನಡೆದ ತರಬೇತಿ ಶಿಬಿರದಲ್ಲಿ ತರಬೇತುದಾರ ಎಂ.ಜಿ.ಹೆಗಡೆ ತರಬೇತು ನೀಡಿ, ಬದಲಾವಣೆ ಜಗದ ನಿಯಮವಾಗಿದ್ದು, ಸಾಮಾಜಿಕ, ರಾಜಕೀಯವಾಗಿ ಬದಲಾವಣೆಗಳು ನಡೆಯುತ್ತಾ ಇರುತ್ತವೆ. ರಾಜಕೀಯ

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ Read More »

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಲ್ಲೋರ್ವನಾದ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಎಸ್.ಡಿ.ಪಿ.ಐ. ಪಕ್ಷ ತನ್ನ ನಿಜರೂಪವನ್ನು ಜನರೆದುರು ತೆರೆದಿಟ್ಟಿದ್ದು, ಚುನಾವಣಾ ಆಯೋಗ ಶಾಫಿ ಬೆಳ್ಳಾರೆಯ ಉಮೇದುವಾರಿಕೆಯನ್ನು ಪರಿಗಣಿಸದಂತೆ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಲುವನ್ನು ಹಂಚಿಕೊಂಡಿರುವ ಶಾಸಕರು, ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಎನ್ನುವ ನೆಲೆಯಲ್ಲಿ ಸೂಕ್ತ ಸಾಕ್ಷ್ಯವನ್ನು ಮುಂದಿಟ್ಟುಕೊಂಡೇ ಎನ್‍.ಐ.ಎ. ಶಾಫಿ ಬೆಳ‍್ಳಾರೆಯನ್ನು ಬಂಧಿಸಿದೆ. ಇದೀಗ ಜೈಲು ಸೇರಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು Read More »

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಬಿಜೆಪಿಯಿಂದ ಯತೀಶ್ ಡಿ.ಬಿ ಸೋಮವಾರ ನಾಮಪತ್ರ ಸಲ್ಲಿಸಿದರು. ಆರ್ಯಾಪು ಚುನಾವಣಾಧಿಕಾರಿ ತ್ರಿವೇಣಿ ರಾವ್ ಅವರಿವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಆರ್ಯಾಪು

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಎಸ್ ಡಿಪಿಐ ಪಕ್ಷ ಕೂಡಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಪಕ್ಷದಿಂದ ಪುತ್ತೂರು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಘೋಷಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಎಸ್ ಡಿಪಿಐನ ಈ ನಡೆ ವಿವಾದ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್ಐಎ ಶಾಫಿ ಬೆಳ್ಳಾರೆಯವರನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್ Read More »

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ

ಪುತ್ತೂರು : ಮುಂದಿನ ಚುನಾವಣೆ ವ್ಯವಸ್ಥೆಯ ಹಿನ್ನಲೆಯಲ್ಲಿ ಶನಿವಾರ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಮಾಡಿದ್ದು, ಹೊರತು ಪುತ್ತೂರಿನ ಜನತೆಗೆ ಬೇರೆ ಯಾವುದೇ ವಿಚಾರದಲ್ಲಿ ಪರಿಣಾಮ ಬೀರಿಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಓರ್ವ ಪ್ರಮುಖ ವ್ಯಕ್ತಿ ಪುತ್ತೂರಿಗೆ ಬರುತ್ತಾರೆ ಎಂದ ಮೇಲೆ ರಸ್ತೆಗಳು ಶೀಘ್ರ ರಿಪೇರಿ, ಡಾಮರೀಕರಣ ಆಗುತ್ತದೆ. ಆದರೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಷ್ಟೋ

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ Read More »

ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ

ಪುತ್ತೂರು: ಅಮಿತ್ ಶಾ ಎಂಬ ರಾಜಕೀಯ ಚಾಣಕ್ಯ ಮುತ್ತಿನ ನಗರಿ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಸಾಲು ಸಾಲು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜೊತೆಜೊತೆಗೆ, ಮುಂಬರುವ ಚುನಾವಣೆಗೆ ಭರ್ಜರಿ ಮುನ್ನುಡಿಯನ್ನೇ ಬರೆದಿದ್ದಾರೆ. ಪುತ್ತೂರು ಬಿಜೆಪಿಯ ಭದ್ರ ಕೋಟೆ. ಹಲವಾರು ನಾಯಕರ ಪರಿಶ್ರಮದ ಫಲವಾಗಿ, ಬಿಜೆಪಿ ಪುತ್ತೂರಿನಲ್ಲಿ ಭದ್ರವಾಗಿ ತಳವೂರಿದೆ. ಇದಕ್ಕೆ ಸಾಥ್ ನೀಡುವಂತೆ ಅಮಿತ್ ಶಾ ಅವರು ಭೇಟಿ ನೀಡಿ, ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ‌ ಮಾಡಿದ್ದಾರೆ. ಶಾ ಭೇಟಿಯ ಬಳಿಕ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಂಡಿದೆ. ಬಿಜೆಪಿ ಪಾಳಯದಲ್ಲಿ

ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ Read More »

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಪುತ್ತೂರು: ಅಡಕೆಗೆ ಕೆಲವೊಂದು ಸವಾಲುಗಳಿದ್ದು, ಹಳದಿ ರೋಗ, ಎಲೆಚುಕ್ಕಿ ರೋಗ ಬಂದಿರುವುದು ಸಮಸ್ಯೆಯಾಗಿದೆ ಕಾಡಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿಯ ಬಜೆಟಿನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಭರವಸೆ ನೀಡಿದರು. ತೆಂಕಿಲ ವಿವೇಕಾನಂದ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ 6 ಲಕ್ಷ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಯುತ್ತಿದ್ದು, ಸಮಸ್ಯೆಗಳು ಅಷ್ಟೇ ಇದೆ. ಇದನ್ನು ಹೋಗಲಾಡಿಸಲು ಸರಕಾರ

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ Read More »

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

error: Content is protected !!
Scroll to Top