ರಾಜಕೀಯ

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಲ್ಲೋರ್ವನಾದ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಎಸ್.ಡಿ.ಪಿ.ಐ. ಪಕ್ಷ ತನ್ನ ನಿಜರೂಪವನ್ನು ಜನರೆದುರು ತೆರೆದಿಟ್ಟಿದ್ದು, ಚುನಾವಣಾ ಆಯೋಗ ಶಾಫಿ ಬೆಳ್ಳಾರೆಯ ಉಮೇದುವಾರಿಕೆಯನ್ನು ಪರಿಗಣಿಸದಂತೆ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಲುವನ್ನು ಹಂಚಿಕೊಂಡಿರುವ ಶಾಸಕರು, ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಎನ್ನುವ ನೆಲೆಯಲ್ಲಿ ಸೂಕ್ತ ಸಾಕ್ಷ್ಯವನ್ನು ಮುಂದಿಟ್ಟುಕೊಂಡೇ ಎನ್‍.ಐ.ಎ. ಶಾಫಿ ಬೆಳ‍್ಳಾರೆಯನ್ನು ಬಂಧಿಸಿದೆ. ಇದೀಗ ಜೈಲು ಸೇರಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ […]

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು Read More »

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಬಿಜೆಪಿಯಿಂದ ಯತೀಶ್ ಡಿ.ಬಿ ಸೋಮವಾರ ನಾಮಪತ್ರ ಸಲ್ಲಿಸಿದರು. ಆರ್ಯಾಪು ಚುನಾವಣಾಧಿಕಾರಿ ತ್ರಿವೇಣಿ ರಾವ್ ಅವರಿವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಆರ್ಯಾಪು

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಎಸ್ ಡಿಪಿಐ ಪಕ್ಷ ಕೂಡಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಪಕ್ಷದಿಂದ ಪುತ್ತೂರು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಘೋಷಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಎಸ್ ಡಿಪಿಐನ ಈ ನಡೆ ವಿವಾದ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್ಐಎ ಶಾಫಿ ಬೆಳ್ಳಾರೆಯವರನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್ Read More »

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ

ಪುತ್ತೂರು : ಮುಂದಿನ ಚುನಾವಣೆ ವ್ಯವಸ್ಥೆಯ ಹಿನ್ನಲೆಯಲ್ಲಿ ಶನಿವಾರ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಮಾಡಿದ್ದು, ಹೊರತು ಪುತ್ತೂರಿನ ಜನತೆಗೆ ಬೇರೆ ಯಾವುದೇ ವಿಚಾರದಲ್ಲಿ ಪರಿಣಾಮ ಬೀರಿಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಓರ್ವ ಪ್ರಮುಖ ವ್ಯಕ್ತಿ ಪುತ್ತೂರಿಗೆ ಬರುತ್ತಾರೆ ಎಂದ ಮೇಲೆ ರಸ್ತೆಗಳು ಶೀಘ್ರ ರಿಪೇರಿ, ಡಾಮರೀಕರಣ ಆಗುತ್ತದೆ. ಆದರೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಷ್ಟೋ

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ Read More »

ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ

ಪುತ್ತೂರು: ಅಮಿತ್ ಶಾ ಎಂಬ ರಾಜಕೀಯ ಚಾಣಕ್ಯ ಮುತ್ತಿನ ನಗರಿ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಸಾಲು ಸಾಲು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜೊತೆಜೊತೆಗೆ, ಮುಂಬರುವ ಚುನಾವಣೆಗೆ ಭರ್ಜರಿ ಮುನ್ನುಡಿಯನ್ನೇ ಬರೆದಿದ್ದಾರೆ. ಪುತ್ತೂರು ಬಿಜೆಪಿಯ ಭದ್ರ ಕೋಟೆ. ಹಲವಾರು ನಾಯಕರ ಪರಿಶ್ರಮದ ಫಲವಾಗಿ, ಬಿಜೆಪಿ ಪುತ್ತೂರಿನಲ್ಲಿ ಭದ್ರವಾಗಿ ತಳವೂರಿದೆ. ಇದಕ್ಕೆ ಸಾಥ್ ನೀಡುವಂತೆ ಅಮಿತ್ ಶಾ ಅವರು ಭೇಟಿ ನೀಡಿ, ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ‌ ಮಾಡಿದ್ದಾರೆ. ಶಾ ಭೇಟಿಯ ಬಳಿಕ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಂಡಿದೆ. ಬಿಜೆಪಿ ಪಾಳಯದಲ್ಲಿ

ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ Read More »

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಪುತ್ತೂರು: ಅಡಕೆಗೆ ಕೆಲವೊಂದು ಸವಾಲುಗಳಿದ್ದು, ಹಳದಿ ರೋಗ, ಎಲೆಚುಕ್ಕಿ ರೋಗ ಬಂದಿರುವುದು ಸಮಸ್ಯೆಯಾಗಿದೆ ಕಾಡಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿಯ ಬಜೆಟಿನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಭರವಸೆ ನೀಡಿದರು. ತೆಂಕಿಲ ವಿವೇಕಾನಂದ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ 6 ಲಕ್ಷ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಯುತ್ತಿದ್ದು, ಸಮಸ್ಯೆಗಳು ಅಷ್ಟೇ ಇದೆ. ಇದನ್ನು ಹೋಗಲಾಡಿಸಲು ಸರಕಾರ

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ Read More »

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಅವರ ಭಾಗವಹಿಸುವಿಕೆಯೊಂದಿಗೆ ಇಲ್ಲಿಯ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತಾ ಶಾ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ರಾಜ್ಯವನ್ನು ಎಟಿಎಂ ಆಗಿ ಮಾಡಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಬೇಕಾ ಎಂದು ನೆರೆದಿದ್ದವರನ್ನು ಪ್ರಶ್ನಿಸಿದ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ Read More »

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ Read More »

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ

ಪುತ್ತೂರು: ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾದ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಮಂಗಲದ ಅಮರಗಿರಿಯಿಂದ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಹನುಮಗಿರಿಯ ಧರ್ಮಶ್ರೀ ಪ್ರತಿಷ್ಠಾನದಲ್ಲಿ ಅಮರಗಿರಿಯಲ್ಲಿ ಕಾರ್ಯಕ್ರಮ ಮುಗಿಸಿ, ಪುತ್ತೂರಿನ ತೆಂಕಿಲಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕಾಫ್ಟರಿನಲ್ಲಿ ಇದೀಗ ಹೊರಟಿರುವ ಅಮಿತ್ ಶಾ ಅವರು ಕೆಲವೇ ಕ್ಷಣದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡಿನಲ್ಲಿ ಇಳಿಯಲಿದ್ದಾರೆ. ಹೆಲಿಪ್ಯಾಡಿನಿಂದ ಝೀರೋ ಟ್ರಾಫಿಕಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ Read More »

error: Content is protected !!
Scroll to Top