ರಾಜಕೀಯ

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಗಣಿ ಗುತ್ತಿಗೆಯಲ್ಲಿ 500 ಕೋ.ರೂ. ಕಿಕ್‌ಬ್ಯಾಕ್‌ ಪಡೆದ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೆಂಗಳೂರು: ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋ. ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಇಂತಹ ಅಪಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.2015ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು […]

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ Read More »

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ

ಕಾಂಗ್ರೆಸ್‌ ಪಾಲಿಗೆ ವರವಾದ ನಿರ್ಧಾರ ಮಂಗಳೂರು : ಬೆಲೆ ಏರಿಕೆಯನ್ನು ಪ್ರಧಾನ ವಿಷಯವಾಗಿಟ್ಟುಕೊಂಡು ಜನಾಕ್ರೋಶ ಯಾತ್ರೆ ಪ್ರಾರಂಭಿಸಿರುವ ರಾಜ್ಯ ಬಿಜೆಪಿಗೆ ಕೇಂದ್ರ ಸರಕಾರ ನಿನ್ನೆ ಕೈಗೊಂಡ ನಿರ್ಧಾರವೊಂದು ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ನಿನ್ನೆ ದಿಢೀರ್‌ ಎಂದು ಕೇಂದ್ರ ಸರಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಇದರ ಜೊತೆಗೆ ಪೆಟ್ರೋಲು ಮತ್ತು ಡೀಸೆಲ್‌ ಮೇಲಿನ ಸುಂಕವನ್ನು ತಲಾ 2 ರೂ.ಯಂತೆ ಹೆಚ್ಚಿಸಿದೆ. ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರದ ವತಿಯಿಂದ ಆಗಿರುವ

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ Read More »

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ

ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿಂದ ನಡೆಯುತ್ತಿರುವ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರಾರಂಭಿಸಿರುವ ಜನಾಕ್ರೋಶ ಯಾತ್ರೆ ಏ.9ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಕಾಂಗ್ರೆಸ್‌ ಸರಕಾರದ ವಿರುದ್ಧ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಏ.9ರಂದು ಮಧ್ಯಾಹ್ನ

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ Read More »

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸರಕಾರ ಒಂದೆಡೆ ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಮರೆತು, ಇನ್ನೊಂದೆಡೆ ನೆಲ-ಜಲ ಎಲ್ಲವನ್ನೂ ಬಿಡದೆ ದರ ಏರಿಕೆ ಮೂಲಕ ಜನಸಾಮಾನ್ಯರನ್ನು ಲೂಟುತ್ತಿದ್ದು, ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿಯನ್ನು ಖಂಡಿಸಿ ಏ.9 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು ಮೂರು ಸಾವಿರ ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಬಜೆಟ್

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ Read More »

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ

ನವದೆಹಲಿ : ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ನಿರ್ಧರಿಸಿದೆ. ವಕ್ಫ್‌ ಮಸೂದೆ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್‌ ನ್ಯಾಯಾಂಗ ಹೋರಾಟದ ನಿರ್ಧಾರಕ್ಕೆ ಬಂದಿದೆ. ಕೇಂದ್ರದ ಈ ನಿರ್ಧಾರದ ಶೀಘ್ರದಲ್ಲಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ. ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತದಿಂದ ಪಾಸ್‌ ಆಗಿದೆ.ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಕಾಯಿದೆಯಾಗಿ ಜಾರಿಗೆ ಬರಲಿದೆ. ವಕ್ಫ್ ಮಸೂದೆ ಬಗ್ಗೆ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

error: Content is protected !!
Scroll to Top