ರಾಜಕೀಯ

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ

ಮೈಸೂರು: ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ‌ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ. ಸಿಎಂ ಕೂಡ ಗ್ರೇಟ‌ರ್ […]

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ Read More »

RJD ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಆಕ್ರೋಶ

ಪಾಟ್ನಾ: ಬಿಹಾರದಲ್ಲಿ ‌ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಎನ್.ಡಿ.ಎ. ಸರ್ಕಾರ ಮೇಲಕ್ಕೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಬಿಹಾರದಲ್ಲಿ RJD ಯು ಮಹಿಳಾ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಸ್ಥಗಿತ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದು ನೋವಿನ ಸಂಗತಿ. ಬಿಹಾರದಲ್ಲಿ ಜನ ಧನ ಯೋಜನೆಯು 3 ಕೋಟಿಗೂ ಅಧಿಕ ಜನರಿಗೆ ಅನುಕೂಲಗಳನ್ನು ಒದಗಿಸಿದೆ. ಉಜ್ವಲ ಯೋಜನೆಯಡಿ 1.16 ಕೋಟಿಗೂ ಅಧಿಕ ಮಹಿಳೆಯರು ಪ್ರಯೋಜನಗಳನ್ನು ಪಡೆದಿದ್ದಾರೆ. ಪ್ರತಿ ಮನೆಗಳಲ್ಲೂ ಶೌಚಾಲಯ ನಿರ್ಮಾಣ ಕಾರ್ಯ

RJD ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಆಕ್ರೋಶ Read More »

ರೈತರ ಸಂಕಷ್ಟಕ್ಕೆ ‌ಕಿವಿಯಾಗುತ್ತಿಲ್ಲ ರಾಜ್ಯ ಸರ್ಕಾರ: ಬಿ. ವೈ. ವಿಜಯೇಂದ್ರ ಆರೋಪ

ಬೆಳಗಾವಿ: ರೈತರ ಸಂಕಷ್ಟಗಳನ್ನು ಆಲಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಟನ್‌ಗೆ 3,500 ರೂ. ನೀಡಬೇಕು ಎಂದು ಬೆಳೆಗಾರರು ಗುರ್ಲಾಪುರ ಬಳಿ ಹೋರಾಟ‌ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ ಸರ್ಕಾರ ಆ ಕೆಲಸ ಮಾಡಿಲ್ಲ. ಆದ್ದರಿಂದ ಆ ರೈತರ ನ್ಯಾಯಯುತ ಬೇಡಿಕೆಗಳಿಗೆ ಬೆಂಬಲ ಸೂಚಿಸಲು ತಾನು ಇಲ್ಲಿಗೆ ಬಂದಿದ್ದೇನೆ ಎಂದು ಅವರು

ರೈತರ ಸಂಕಷ್ಟಕ್ಕೆ ‌ಕಿವಿಯಾಗುತ್ತಿಲ್ಲ ರಾಜ್ಯ ಸರ್ಕಾರ: ಬಿ. ವೈ. ವಿಜಯೇಂದ್ರ ಆರೋಪ Read More »

ಜಾತಿ ಗಣತಿ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌

ಸಮೀಕ್ಷೆಯಿಂದ ಹೊರಗುಳಿದವರ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌ ಮಾಡಿದ ಆಯೋಗ ಬೆಂಗಳೂರು : ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಕ್ತಾಯಗೊಂಡಿದ್ದು, ನವೆಂಬರ್​​ 10ರ ವರೆಗೆ ಆನ್​ಲೈನ್​ನಲ್ಲಿ ಸ್ವಯಂಪ್ರೇರಿತರಾಗಿ ಭಾಗಿ ಆಗಲು ಅವಕಾಶವಿದೆ. ಮನೆ ಮನೆ ಸಮೀಕ್ಷೆ ವೇಳೆ ಸಾಕಷ್ಟು ಮಂದಿ ಗೊಂದಲ, ರಾಜಕೀಯ ಕೆಸರೆರೆಚಾಟದ ಹಿನ್ನೆಲೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿದ್ದರು. ಆದರೂ1.46 ಕೋಟಿ ಕುಟುಂಬಗಳ 6 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಸಮೀಕ್ಷೆ ಕವರ್​​ ಮಾಡಿದೆ. ಇನ್ನು ಮನೆ ಮನೆ

ಜಾತಿ ಗಣತಿ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌ Read More »

ಕಾಂಗ್ರೆಸ್‌ ಹೆಣೆಯುವ ಜಾಲಕ್ಕೆ ಬೀಳಬೇಡಿ : ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ

ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ಸಲಹೆ ಬೆಂಗಳೂರು: ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಹೆಣೆಯುವ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ ಮಾಡಿದೆ. ಪಥ ಸಂಚಲನ ಜಟಾಪಟಿ ನಡುವೆ ಬಿಜೆಪಿ ನಾಯಕರ ಜೊತೆ ಆರ್‌ಎಸ್‌ಎಸ್ ಸೋಮವಾರ ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ಪ್ರಸಕ್ತ ವಿದ್ಯಮಾನಗಳ ಕುರಿತು ಮಹತ್ವದ ಬೈಠಕ್ ನಡೆಸಿದ್ದು, ಇದರಲ್ಲಿ ರಾಜಕೀಯ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸಿದೆ. ಆರ್‌ಎಸ್‌ಎಸ್ ಮುಖಂಡರಾದ ತಿಪ್ಪೇಸ್ವಾಮಿ,

ಕಾಂಗ್ರೆಸ್‌ ಹೆಣೆಯುವ ಜಾಲಕ್ಕೆ ಬೀಳಬೇಡಿ : ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ Read More »

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು

ನಿಷೇಧ ಹೇಳಿಕೆಗಳಿಗೆ ಮೊದಲ ಬಾರಿ ಅಧಿಕೃತವಾಗಿ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ ನವದೆಹಲಿ: ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ಪದೇಪದೆ ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಮಾತನಾಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ. ಜಬಲ್‌ಪುರದಲ್ಲಿ ಮೂರು ದಿನಗಳ ಆರ್‌ಎಸ್‌ಎಸ್‌

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು Read More »

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ?

ಪಕ್ಷ ತೊರೆಯುವ ಕುರಿತು ಪರೋಕ್ಷವಾಗಿ ಮಾತನಾಡಿದ ಮಾಜಿ ಪೊಲೀಸ್‌ ಅಧಿಕಾರಿ ಚೆನ್ನೈ: ಬಿಜೆಪಿ ಜೊತೆಗಿನ ಅಣ್ಣಾಮಲೈ ನಂಟು ಹಳಸಿದೆಯೇ? ಹೀಗೊಂದು ವಿಚಾರ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷರಾಗಿರುವ ಕೆ.ಅಣ್ಣಾಮಲೈ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಈ ಚರ್ಚೆಗೆ ಕಾರಣ. ನಾನು ಪಕ್ಷದಲ್ಲಿ ಉಳಿಯಲು ಬಯಸಿದರೆ ಇರುತ್ತೇನೆ, ಇಲ್ಲದಿದ್ದರೆ ಕೃಷಿಗೆ ಮರಳುತ್ತೇನೆ. ಸಮಯ ಬಂದಾಗ ಮಾತನಾಡುತ್ತೇನೆ. ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೊಯಮತ್ತೂರಿನಲ್ಲಿ ಅಣ್ಣಾಮಲೈ ಶನಿವಾರ

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ? Read More »

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌

90 ದಿನಗಳಲ್ಲಿ ಕನ್ನಡ ಕಡ್ಡಾಯ ಆದೇಶ ಎಂದ ಸಚಿವ ಬೆಂಗಳೂರು: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌ Read More »

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ

ತನಿಖೆ ನಡೆಸಿ ಕಳಂಕ ಮುಕ್ತರಾಗಲಿ ಎಂದು ಸಲಹೆ ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್‌ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಯು.ಟಿ ಖಾದರ್ ಆಡಳಿತ ಸುಧಾರಣೆ ಭಾಗವಾಗಿ ಭ್ರಷ್ಟಾಚಾರದ ಪ್ರಕರಣ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸುವಂತೆ ನಾನು ಒತ್ತಾಯ ಮಾಡಿದ್ದೇನೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದಿದ್ದಾರೆ. ಸ್ಪೀಕರ್ ಸ್ಥಾನ

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ Read More »

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ

ಸರ್ಕಾರ ಸಭೆ, ಸಮಾರಂಭಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಆದೇಶ ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ Read More »

error: Content is protected !!
Scroll to Top