ರಾಜಕೀಯ

ಜಾತಿ ಗಣತಿಗಾಗಿ ಶಾಲಾ ಸಮಯವೇ ಬದಲು : ಬೆಳಗ್ಗೆ 8 ಗಂಟೆಗೆ ಶುರು

ಮಧ್ಯಾಹ್ನದ ತನಕ ಪಾಠ ಬಳಿಕ ಗಣತಿಗಾಗಿ ಮನೆ ಮನೆಗೆ ಭೇಟಿ ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನ​ ಜಾತಿ ಗಣತಿ ಮುಗಿಯದ ಹಿನ್ನೆಲೆ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ 1 ವಾರ ತಡವಾಗಿಶುರುವಾಗಿರುವ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ. […]

ಜಾತಿ ಗಣತಿಗಾಗಿ ಶಾಲಾ ಸಮಯವೇ ಬದಲು : ಬೆಳಗ್ಗೆ 8 ಗಂಟೆಗೆ ಶುರು Read More »

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌

ಸಂಜೆ ಚುನಾವಣೆ ದಿನಾಂಕ ಘೋಷಿಸಲಿರುವ ಚುನಾವಣಾ ಆಯೋಗ ನವದೆಹಲಿ: ಬಿಹಾರ ವಿಧಾನ ಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಭಾರತೀಯ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು. ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌ Read More »

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌

ಪ್ರಶ್ನೆಗಳನ್ನು ʼಸಿದ್ದʼಪಡಿಸಿರುವುದು ನಿಮ್ಮದೇ ಸರ್ಕಾರ ಎಂಬುದನ್ನು ಮರೆಯದಿರಿ ಎಂದು ಕಾಲೆಳೆದ ವಿಪಕ್ಷ ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಜಾತಿ ಗಣತಿಯಲ್ಲಿ ಕೇಳುತ್ತಿರುವ ಪ್ರಶ್ನೆಗಳಿಗೆ ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಜಾತಿ ಗಣತಿಯನ್ನು ಟೀಕಿಸಲು ಬಿಜೆಪಿ ಪಾಲಿಗೆ ಹೊಸ ಅಸ್ತ್ರವೊಂದು ಸಿಕ್ಕಿದಂತಾಗಿದೆ. ಆರಂಭದಿಂದಲೂ ಬಿಜೆಪಿ ಇದು ರಾಜಕೀಯ ಉದ್ದೇಶದ ಜಾತಿ ಗಣತಿ ಎಂದು ಟೀಕಿಸುತ್ತಿದೆ. ಸರ್ಕಾರ ಇದು ಜನರ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಈ ನಡುವೆ ಶನಿವಾರ

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌ Read More »

ಮುಂದಿನ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ: ಜಮೀರ್ ಅಹ್ಮದ್

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ. ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿರುತ್ತಾರೆ ಎಂದು ಡಿ.ಸಿ.ಎಂ. ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು

ಮುಂದಿನ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ: ಜಮೀರ್ ಅಹ್ಮದ್ Read More »

ರೈತರ ಬಾಳಿಗೆ ಕಾಂಗ್ರೆಸ್ ಸರ್ಕಾರ ಬೆಂಕಿ ಹಚ್ಚುತ್ತಿದೆ: R. ಅಶೋಕ್ ಆಕ್ರೋಶ

ಬೆಂಗಳೂರು: ರೈತರಿಗೆ ಭೂಮಿ ತೋರಿಸುವ ಸರ್ಕಾರವಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರ ಬದಲಾಗಿ ಆಕಾಶ ತೋರಿಸುವ ಸರ್ಕಾರ. ರೈತರ ಬಾಳಿಗೆ ಬೆಂಕಿ ಇಡುವ ಸರ್ಕಾರ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಭೀಮಾನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರಿಗೆ ಕಾಂಗ್ರೆಸ್ ಸರ್ಕಾರ ಈ ವರೆಗೂ ಬೆಳೆಹಾನಿ ಪರಿಹಾರ ನೀಡಿಲ್ಲ.‌ ಕಾಂಗ್ರೆಸ್ ಸರ್ಕಾರ ತೆರೆದಂತಹ ಗಂಜಿ ಕೇಂದ್ರಗಳು ಮುಚ್ಚಿಕೊಂಡು ಹೋಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರೈತರಿಗೆ ಸರಿಯಾದ

ರೈತರ ಬಾಳಿಗೆ ಕಾಂಗ್ರೆಸ್ ಸರ್ಕಾರ ಬೆಂಕಿ ಹಚ್ಚುತ್ತಿದೆ: R. ಅಶೋಕ್ ಆಕ್ರೋಶ Read More »

ಬೈಕ್‌-ಕಾರು ತೂಕದ ಉದಾಹರಣೆ ನೀಡಿ ನಗೆಪಾಟಲಿಗೀಡಾದ ರಾಹುಲ್‌ ಗಾಂಧಿ

ವಿದೇಶದಲ್ಲಿ ರಾಗಾ ಮತ್ತೆ ಅಪ್ರಬುದ್ಧ ಭಾಷಣ ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಿದೇಶದಲ್ಲಿ ಮತ್ತೊಮ್ಮೆ ತನ್ನ ಅಪ್ರಬುದ್ಧ ಭಾಷಣದಿಂದ ನಗೆಪಾಟಲಿಗೀಡಾಗಿದ್ದಾರೆ. ಕಾರು ಮತ್ತು ಬೈಕ್‌ಗಳ ತೂಕದ ಕುರಿತು ಅವರು ನೀಡಿದ ಉದಾಹರಣೆ ಸಿಕ್ಕಾಪಟ್ಟೆ ಲೇವಡಿಗೆ ಗುರಿಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಲಕ್ಷಾಂತರ ಜನರು ಇದಕ್ಕೆ ನಾನಾ ಪ್ರತಿಕ್ರಿಯೆ ನೀಡಿ ರಾಹುಲ್‌ ಮತ್ತು ಕಾಂಗ್ರೆಸ್‌ನ ಕಾಲೆಲೆದಿದ್ದಾರೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯ ಲಾಭಗಳ ಕುರಿತು ಕೊಲಂಬಿಯಾ ವಿವಿಯ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ವಿವರಿಸಲು ಲೋಕಸಭೆ

ಬೈಕ್‌-ಕಾರು ತೂಕದ ಉದಾಹರಣೆ ನೀಡಿ ನಗೆಪಾಟಲಿಗೀಡಾದ ರಾಹುಲ್‌ ಗಾಂಧಿ Read More »

ದಸರಾ ಮೆರವಣಿಗೆಯಲ್ಲಿ ಸಿಎಂ ಜೊತೆ ಸಚಿವರ ಮೊಮ್ಮಗ : ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು

ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಸಚಿವ ಮಹದೇವಪ್ಪನವರ ಮೊಮ್ಮಗ ಪ್ರೇಮ ಮೈಸೂರು: ದಸರಾ ಮೆರವಣಿಗೆಯ ವೇಳೆ ತೆರೆದ ಜೀಪಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಎಕ.ಶಿವಕುಮಾರ್‌ ಹಾಗೂ ಸಚಿವರ ಜೊತೆ ಸಚಿವ ಮಹದೇವಪ್ಪ ಅವರ ಮೊಮ್ಮಗ ಪ್ರಯಾಣಿಸಿದ್ದು ಭಾರಿ ಟೀಕೆಗೆ ಗುರಿಯಾಗಿದೆ. ಶಿಷ್ಟಾಚಾರ ಉಲ್ಲಂಘಿಸಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಚ್‌.ಸಿ.ಮಹದೇವಪ್ಪ ಮೊಮ್ಮಗನನ್ನು ಮೆರವಣಿಗೆಯಲ್ಲಿ ಕರೆದೊಯ್ದಿರುವುದರ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಧಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಶುಕ್ರವಾರ ನಗರಕ್ಕೆ ಆಗಮಿಸಿದ್ದ ರಾಜ್ಯ

ದಸರಾ ಮೆರವಣಿಗೆಯಲ್ಲಿ ಸಿಎಂ ಜೊತೆ ಸಚಿವರ ಮೊಮ್ಮಗ : ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು Read More »

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ: ಎಚ್.ಡಿ. ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಸರ್ಕಾರದ ಬಳಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ‌ಯನ್ನು ನಿರ್ವಹಣೆ ಮಾಡುವುದಕ್ಕೂ ಹಣವಿಲ್ಲ. ಒಂದು ವಾರದೊಳಗಾಗಿ ಕಲಬುರ್ಗಿ ಸೇರಿದಂತೆ ಇತರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಬಗ್ಗೆ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ: ಎಚ್.ಡಿ. ದೇವೇಗೌಡ Read More »

ವಿದೇಶದಲ್ಲಿ ನಿಂತು ಭಾರತ, RSS ವಿರುದ್ಧ ನಾಲಿಗೆ ಹರಿಯಬಿಟ್ಟ ರಾಹುಲ್ ಗಾಂಧಿ

ನವದೆಹಲಿ: ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಟೀಕೆ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಿವಾದ ಸೃಷ್ಟಿ ಮಾಡಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರಜಾಪ್ರಭುತ್ವದ ಮೇಲೆ ತೀವ್ರ ದಾಳಿ ನಡೆಸುತ್ತಿದ್ದು, ಇದು ದೇಶಕ್ಕೆ ಎದುರಾಗಿರುವ ಬಹುದೊಡ್ಡ ಬೆದರಿಕೆ ಎಂದು ನಾಲಿಗೆ ಹರಿಯ ಬಿಟ್ಟಿದ್ದು, ಆ ಮೂಲಕ ಭಾರತೀಯರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಭಾರತದ ವ್ಯವಸ್ಥೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈ ಅಪಾಯಗಳಿಂದ ದೇಶ ಹೊರಬರಬೇಕಿದೆ. ಅದರಲ್ಲಿ

ವಿದೇಶದಲ್ಲಿ ನಿಂತು ಭಾರತ, RSS ವಿರುದ್ಧ ನಾಲಿಗೆ ಹರಿಯಬಿಟ್ಟ ರಾಹುಲ್ ಗಾಂಧಿ Read More »

ಮೋದಿಯನ್ನು ರಾವಣ ಎಂದು ಕರೆದ ಕಾಂಗ್ರೆಸ್‌ ನಾಯಕ

ಮೋದಿಯನ್ನು ಸುಡಬೇಕೆಂದು ವಿವಾದಿತ ಹೇಳಿಕೆ ನೀಡಿದ ಉದಿತ್‌ ರಾಜ್‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ನಾಲಗೆ ಹರಿಬಿಟ್ಟಿದ್ದಾರೆ. ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು

ಮೋದಿಯನ್ನು ರಾವಣ ಎಂದು ಕರೆದ ಕಾಂಗ್ರೆಸ್‌ ನಾಯಕ Read More »

error: Content is protected !!
Scroll to Top