ರಾಜಕೀಯ

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪಟಾಕಿ ಸಿಡಿಸಲು ಹಲವು ನಿರ್ಬಂಧ ; ಮಾಲಿನ್ಯ ತಡೆಯಲು ಸೂಚನೆ ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಹೀಗಾಗಿ ಮಾಲಿನ್ಯ ರಹಿತವಾಗಿ ಆಚರಿಸಲು ಮನವಿ ಮಾಡಲಾಗಿದೆ. ಹಸಿರು ಪಟಾಕಿ ಮಾತ್ರ ಬಳಸಿ. ಪಟಾಕಿ ಬಾಕ್ಸ್‌ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ […]

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ Read More »

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ. ಯಾವುದೇ ಖಾಸಗಿ ಸಂಘ – ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಅದನ್ನು ನಮ್ಮ ಸರ್ಕಾರ ಈಗ ಅನುಷ್ಠಾನಕ್ಕೆ ತಂದಿದೆ. ಅವರು ಕ್ರಮ ಕೈಗೊಂಡ ಸಂದರ್ಭದಲ್ಲಿ ಯಾಕೆ ಆರೆಸ್ಸೆಸ್ ವಿರೋಧ

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ Read More »

ರಾಹುಲ್ ಗಾಂಧಿಗೆ ಪ್ರಧಾನಿಯಾಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ವ್ಯಂಗ್ಯ ಮಾಡಿದ ಅಮೆರಿಕಾದ ಗಾಯಕಿ

ವಾಷ್ಂಗ್ಟನ್: ಅಮೆರಿಕಾದ ಗಾಯಕಿ ಮೇರಿ ಮಿಲ್ಟೆನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ವ್ಯಂಗ್ಯವಾಡಿ ಹೇಳಿಕೆಯೊಂದನ್ನು ‌ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಪ್ರಶಂಸಿಸಿ ಆಗಾಗ್ಗೆ ಹೇಳಿಕೆ ನೀಡುವ ಮೇರಿ, ಮೋದಿ ಅವರನ್ನು ಟೀಕೆ ಮಾಡಿದ ರಾಹುಲ್ ವಿರುದ್ಧ ಹೇಳಿಕೆ ನೀಡಿರುವುದಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಆಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ಅವಹೇಳನ ಮಾಡಿದ್ದಾರೆ. ಪ್ರಧಾನಿ ಮೋದಿ ಅಮೆರಿಕಾದ ಅಧ್ಯಕ್ಷ ಟ್ರಂಪ್‌ಗೆ ಹೆದರುತ್ತಾರೆ ಎನ್ನುವ ಹೇಳಿಕೆಯನ್ನು ರಾಹುಲ್ ನೀಡಿದ ಬೆನ್ನಲ್ಲೇ, ರಾಹುಲ್‌ನನ್ನು ತರಾಟೆಗೆ ತೆಗೆದುಕೊಂಡಿರುವ ಮೇರಿ,

ರಾಹುಲ್ ಗಾಂಧಿಗೆ ಪ್ರಧಾನಿಯಾಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ವ್ಯಂಗ್ಯ ಮಾಡಿದ ಅಮೆರಿಕಾದ ಗಾಯಕಿ Read More »

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ

ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ಕೊಟ್ಟಿದೆ ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ ಎಂದು ಮಾಜಿ‌ ಲೋಕಾಯುಕ್ತ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೇಳಿದ್ದಾರೆ. ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ಕ್ರಮವಾಗುತ್ತದೆ ಎಂದರು. ಒಂದು ವೇಳೆ ಸರ್ಕಾರ ಆರ್.ಎಸ್.ಎಸ್ ಸಂಘಟನೆ ನಿಷೇಧ

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ Read More »

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ : ಗುತ್ತಿಗೆದಾರರ ಎಚ್ಚರ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮತ್ತೆ ಕಮಿಷನ್‌ ಆರೋಪ ಮಾಡಿದ ಗುತ್ತಿಗೆದಾರರು ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಈಗ ತಾನೇ ಕಮಿಷನ್‌ ಬಲೆಯಲ್ಲಿ ಸಿಕ್ಕಿಬಿದ್ದಿದೆ. ಗುತ್ತಿಗೆದಾರರು ಸರ್ಕಾರದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದು, ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ ಹೂಡುವುದಾಗಿ ಎಚ್ಚರಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ : ಗುತ್ತಿಗೆದಾರರ ಎಚ್ಚರ Read More »

ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ

ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಮುಖ್ಯಮಂತ್ರಿಗೆ ಬರೆದ ಪತ್ರ ಬೆಂಗಳೂರು : ಸರ್ಕಾರದ ಅನುಮತಿ ಪಡೆದುಕೊಳ್ಳದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್‌ಗೆ ಬ್ರೇಕ್​ ಹಾಕುವಂತೆ ಆಗ್ರಹಿಸಿ ಸರ್ಕಾರಕ್ಕೆ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್

ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ Read More »

ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರಿ ಸ್ಥಳದಲ್ಲಿ ಕಾರ್ಯಕ್ರಮ ನಡೆಸುವಂತಿಲ್ಲ: ಸಿ. ಎಂ. ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ಕಾರ್ಯಕ್ರಮ ನಡೆಸುವ ಹಾಗಿಲ್ಲ. ಈ ನಿಯಮ ಕೇವಲ RSS ಗೆ ಮಾತ್ರ ಅನ್ವಯವಲ್ಲ, ಎಲ್ಲಾ ಖಾಸಗಿ ಸಂಸ್ಥೆಗಳಿಗೂ ಅನ್ವಯ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ಸಂಪುಟದ ನಿರ್ಣಯದ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳ ಮೂಲಕವೂ ಸ್ಪಷ್ಟನೆ ನೀಡಿ ಪೋಸ್ಟ್ ಮಾಡಿದ್ದಾರೆ. ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ

ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರಿ ಸ್ಥಳದಲ್ಲಿ ಕಾರ್ಯಕ್ರಮ ನಡೆಸುವಂತಿಲ್ಲ: ಸಿ. ಎಂ. ಸಿದ್ದರಾಮಯ್ಯ Read More »

ಪ್ರಿಯಾಂಕ್ ಖರ್ಗೆ‌ಗೆ ಬೆದರಿಕೆ ಒಡ್ಡಿದ ವ್ಯಕ್ತಿ ಅರೆಸ್ಟ್: ಜಿ. ಪರಮೇಶ್ವರ್

ತುಮಕೂರು: RSS ನಿಷೇಧಕ್ಕೆ ಮನವಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದ್ದು, ಖರ್ಗೆ‌ಗೆ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದ್ದಾರೆ. ಖರ್ಗೆ ಗೆ ಬೆದರಿಕೆ ಒಡ್ಡಿದ ಪ್ರಕರಣದ ಹಿಂದೆ ಯಾರಾದರೂ ಇದ್ದಾರೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಖಾಸಗಿಯವರು ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಕಡ್ಡಾಯ. ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಖಾಸಗಿಯವರು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು

ಪ್ರಿಯಾಂಕ್ ಖರ್ಗೆ‌ಗೆ ಬೆದರಿಕೆ ಒಡ್ಡಿದ ವ್ಯಕ್ತಿ ಅರೆಸ್ಟ್: ಜಿ. ಪರಮೇಶ್ವರ್ Read More »

ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಲ್ಲರದ್ದು: ಅಮಿತ್ ಶಾ

ನವದೆಹಲಿ: ಬಿಹಾರ ದಲ್ಲಿ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, 14 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಚುನಾವಣಾ ನಂತರದಲ್ಲಿ ಶಾಸಕಾಂಗ ಪಕ್ಷದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಂದಿನ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲಿ ನಾವು ಎದುರಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಬಿಹಾರದ ಈ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ನಿತೀಶ್ ಸಿ.ಎಂ. ಆಗುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರ

ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಲ್ಲರದ್ದು: ಅಮಿತ್ ಶಾ Read More »

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ

ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಗುರುವಾರ ಉತ್ತರ ನೀಡಿದರು. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಗಣತಿದಾರರಿಗೆ ಮಾಹಿತಿ ನೀಡಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಮನೆ ಸಮೀಕ್ಷೆ ಬಳಿಕ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಮೀಕ್ಷೆಗಾಗಿ ನನ್ನ ಮನೆಗೆ

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ Read More »

error: Content is protected !!
Scroll to Top