ರಾಜಕೀಯ

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಆರೋಪಿಗಳಾಗಿರುವ ಪ್ರಕರಣ ನವದೆಹಲಿ : ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 600 ಕೋಟಿ ರೂ.ಗೂ ಮಿಕ್ಕಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಾರಂಭಿಸಿದೆ.ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾಗಿರುವ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬಯಿಯ […]

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು Read More »

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ

1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು?

ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು? Read More »

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ

ಬೆಲೆ ಏರಿಕೆ, ದುರಾಡಳಿತ ವಿರುದ್ಧ ಜೆಡಿಎಸ್‌ ವಿನೂತನ ಹೋರಾಟ ಬೆಂಗಳೂರು: ಒಂದೆಡೆ ಬಿಜೆಪಿ ಬೆಲೆ ಏರಿಕೆ ಹಾಗೂ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದರೆ ಇನ್ನೊಂದೆಡೆ ಬಿಜೆಪಿಯ ಮಿತ್ರಪಕ್ಷ ಜೆಡಿಎಸ್‌ ತಾನೂ ಹೋರಾಟಕ್ಕಿಳಿಯಲು ಮುಂದಾಗಿದೆ. ಏ.12ರಿಂದ ಜೆಡಿಎಸ್‌ನ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ ಎಂಬ ವಿನೂತನ ಅಭಿಯಾನ ಶುರುವಾಗಲಿದೆ. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ Read More »

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಗಣಿ ಗುತ್ತಿಗೆಯಲ್ಲಿ 500 ಕೋ.ರೂ. ಕಿಕ್‌ಬ್ಯಾಕ್‌ ಪಡೆದ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೆಂಗಳೂರು: ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋ. ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಇಂತಹ ಅಪಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.2015ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ Read More »

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ

ಕಾಂಗ್ರೆಸ್‌ ಪಾಲಿಗೆ ವರವಾದ ನಿರ್ಧಾರ ಮಂಗಳೂರು : ಬೆಲೆ ಏರಿಕೆಯನ್ನು ಪ್ರಧಾನ ವಿಷಯವಾಗಿಟ್ಟುಕೊಂಡು ಜನಾಕ್ರೋಶ ಯಾತ್ರೆ ಪ್ರಾರಂಭಿಸಿರುವ ರಾಜ್ಯ ಬಿಜೆಪಿಗೆ ಕೇಂದ್ರ ಸರಕಾರ ನಿನ್ನೆ ಕೈಗೊಂಡ ನಿರ್ಧಾರವೊಂದು ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ನಿನ್ನೆ ದಿಢೀರ್‌ ಎಂದು ಕೇಂದ್ರ ಸರಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಇದರ ಜೊತೆಗೆ ಪೆಟ್ರೋಲು ಮತ್ತು ಡೀಸೆಲ್‌ ಮೇಲಿನ ಸುಂಕವನ್ನು ತಲಾ 2 ರೂ.ಯಂತೆ ಹೆಚ್ಚಿಸಿದೆ. ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರದ ವತಿಯಿಂದ ಆಗಿರುವ

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ Read More »

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ

ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿಂದ ನಡೆಯುತ್ತಿರುವ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರಾರಂಭಿಸಿರುವ ಜನಾಕ್ರೋಶ ಯಾತ್ರೆ ಏ.9ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಕಾಂಗ್ರೆಸ್‌ ಸರಕಾರದ ವಿರುದ್ಧ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಏ.9ರಂದು ಮಧ್ಯಾಹ್ನ

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ Read More »

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸರಕಾರ ಒಂದೆಡೆ ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಮರೆತು, ಇನ್ನೊಂದೆಡೆ ನೆಲ-ಜಲ ಎಲ್ಲವನ್ನೂ ಬಿಡದೆ ದರ ಏರಿಕೆ ಮೂಲಕ ಜನಸಾಮಾನ್ಯರನ್ನು ಲೂಟುತ್ತಿದ್ದು, ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿಯನ್ನು ಖಂಡಿಸಿ ಏ.9 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು ಮೂರು ಸಾವಿರ ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಬಜೆಟ್

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

error: Content is protected !!
Scroll to Top