ರಾಜಕೀಯ

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ

ಪಕ್ಷದ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ ಮಾಜಿ ಸಚಿವನಿಂದ ಗಂಭೀರ ಆರೋಪ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ ತಲಾ 5 ಕೋ. ರೂ. ವಸೂಲು ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಪಕ್ಷದ […]

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ Read More »

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್

ಜಾತಿ ನಿಂದನೆ ಕೇಸಿನಲ್ಲಿ ಬಂಧನಕ್ಕೆ ವಾರಂಟ್‌ ಜಾರಿ ಬೆಂಗಳೂರು : ಜಾತಿನಿಂದನೆ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ Read More »

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು

ಅಂಚೆ ಮತಪತ್ರದಲ್ಲಿ ಅಕ್ರಮ ಎಸಗಿದ ಕುರಿತು ಮೂವರ ವಿರುದ್ಧ ಕೇಸ್‌ ದಾಖಲು ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿ.ಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ ಎಜೆಂಟ್ ಆಗಿರುವ ಸುಧೀರ್ ಕುಮಾರ್ ಮುರೋಳ್ಳಿ ದೂರು ನೀಡಿದ್ದಾರೆ. ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಟ್ರಾಂಗ್ ರೂಂ ಸೀಲ್

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು Read More »

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ

ರಾತ್ರಿಯವರೆಗೂ ನಡೆದ ಎಣಿಕೆ, ತಡರಾತ್ರಿ ಸ್ಪಷ್ಟ ಫಲಿತಾಂಶ ಘೋಷಣೆ ನವದೆಹಲಿ : ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ. ನಡುರಾತ್ರಿಯವರೆಗೂ ಮತ

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ Read More »

ಯಾರಾಗಲಿದ್ದಾರೆ ಮುಖ್ಯಮಂತ್ರಿ? : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಯ್ಕೆ ಕಠಿಣ

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಹೀನಾಯ ಸೋಲು ನವದೆಹಲಿ: ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಿಗೆ ಎದುರಾಗುವ ದೊಡ್ಡ ಪ್ರಶ್ನೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಎನ್ನುವುದು. ಈ ಸಲ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಎಲುವು ಕಂಡಿರುವ ಬಿಜೆಪಿಯ ಎದುರು ಕೂಡ ಈ ಪ್ರಶ್ನೆ ಇದೆ. ಅಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ಯೋಗ್ಯರಾದ ಹಲವು ನಾಯಕರು ಇರುವುದರಿಂದ ಮುಖ್ಯಮಂತ್ರಿಯ ಆಯ್ಕೆ ಬಿಜೆಪಿ ಪಾಲಿಗೆ ಕಠಿಣವಾಗಲಿದೆ ಎನ್ನಲಾಗುತ್ತಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿ

ಯಾರಾಗಲಿದ್ದಾರೆ ಮುಖ್ಯಮಂತ್ರಿ? : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಯ್ಕೆ ಕಠಿಣ Read More »

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ

ಪಶ್ಚಿಮ ಬಂಗಾಳದಲ್ಲಿ ಮುನ್ನಡೆ ವಿಸ್ತರಿಸಿಕೊಂಡ ಬಿಜೆಪಿ ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲ ಲೆಕ್ಕಾಚಾರ ಬುಡಮೇಲಾಗುವ ಸಾಧ್ಯತೆ ಗೋಚರಿಸುತ್ತಿದೆ. ಇಲ್ಲಿ ಚಿತ್ರನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಎಲ್ಲ ಸಮೀಕ್ಷೆಗಳನ್ನು ತಲೆಕೆಳಗಾಗಿಸಿ ಮುನ್ನಡೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಅಚ್ಚರಿ ಹುಟ್ಟಿಸಿದೆ. ಇದಕ್ಕೂ ಹೆಚ್ಚಿನ ಅಚ್ಚರಿಯೆಂದರೆ ಆಡಳಿತರೂಢ ಡಿಎಂಕೆ ತೃತೀಯ ಸ್ಥಾನದಲ್ಲಿರುವುದು. ಬಿಜೆಪಿ ಒಳಗೊಂಡಿರುವ ಎಐಎಡಿಎಂಕೆ ದ್ವಿತೀಯ ಸ್ಥಾನದಲ್ಲಿದ್ದು, ಸದ್ಯದ ಮುನ್ನಡೆ ಯಾರ ಊಹೆಗೂ ನಿಲುಕದ ಫಲಿತಾಂಶವಾಗಿದೆ. ಯಾವ ಚುನಾವಣೋತ್ತರ ಸಮೀಕ್ಷೆಯೂ ಟಿವಿಕೆ ಪಕ್ಷವನ್ನು

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ Read More »

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ

ಕೇಸರಿ ಪಕ್ಷಕ್ಕೆ ಬೋನಸ್‌ ಆಗಿ ದಕ್ಕಿದ ಒಂದು ಸ್ಥಾನ ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್‌ ತಲುಪಿದಂತಾಗಿದೆ. ರಾಜ್ಯದ

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ Read More »

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌

ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಶೃಂಗೇರಿ ರಿಸಲ್ಟ್‌ ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಎಣಿಕೆಯ ಫಲಿತಾಂಶ ಈಗ ಮತ್ತೊಮ್ಮೆ ಕೋರ್ಟ್‌ ಅಂಗಳ ತಲುಪಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಜೇಗೌಡರು ಪಡೆದಿದ್ದ 569

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌ Read More »

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ

ರಾಜ್ಯದ ರಾಜಕಾರಣದಲ್ಲಿ ಅಭೂತಪೂರ್ವ ವಿದ್ಯಮಾನ ಮೂರು ವರ್ಷ ಶಾಸಕರಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡಿದೆ. ಮತ ಎಣಿಕೆಯ ಅಂತಿಮ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ 52 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಬಾಕಿ ಇದೆ. ಇದುವರೆಗೂ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡಿಲ್ಲ. ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ರವಾನೆ ಮಾಡಲಾಗಿದೆ. ಬಹಳ

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ Read More »

ನಾಳೆ ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ: ದೇಶದ ಚಿತ್ತ ಫಲಿತಾಂಶದತ್ತ

ಪಶ್ಚಿಮ ಬಂಗಾಳ ಕುತೂಹಲದ ಕುದಿಬಿಂದು ನವದೆಹಲಿ : ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಸೋಮವಾರ ನಡೆಯಲಿದೆ. ದೇಶದ ರಾಜಕೀಯದ ಭವಿಷ್ಯದ ದಿಕ್ಸೂಚಿ ಎಂದು ಭಾವಿಸಲಾಗಿರುವ ಈ ಪಂಚ ರಾಜ್ಯಗಳ ಫಲಿತಾಂಶದತ್ತ ಇಡೀ ದೇಶದ ದೃಷ್ಟಿ ನೆಟ್ಟಿದೆ. ಫಲಿತಾಂಶ ಸೋಮವಾರ ಬೆಳಗ್ಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ.

ನಾಳೆ ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ: ದೇಶದ ಚಿತ್ತ ಫಲಿತಾಂಶದತ್ತ Read More »

error: Content is protected !!
Scroll to Top