ರಾಜಕೀಯ

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟ‌ರ್ ಮಳೆಯಾಗುತ್ತಿದ್ದು ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ ಸಪ್ಟೆಂಬ‌ರ್ ತನಕವು ನಿರಂತರವಾಗಿ ಸುರಿಯುತ್ತಿದ್ದು ಜಿಲ್ಲೆಯಲ್ಲಿ ಅತೀವೃಷ್ಟಿಯಾಗಿದ್ದು ಪ್ರಮುಖವಾಗಿ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕು ಎಂದು ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ, […]

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ Read More »

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ

ಪೊಲೀಸರ ಜೊತೆ ವಾಗ್ವಾದ, ಹಲವು ಕಾರ್ಯಕರ್ತರು ವಶಕ್ಕೆ ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಪಾದಯಾತ್ರೆಯನ್ನು ಪೊಲೀಸರು ತಡೆದು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ Read More »

ಇಂದು ಉಪರಾಷ್ಟ್ರಪತಿ ಚುನಾವಣೆ : ರಾಧಾಕೃಷ್ಣನ್‌-ಸುದರ್ಶನ್‌ ರೆಡ್ಡಿ ನಡುವೆ ಸ್ಪರ್ಧೆ

ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್‌ ಗೆಲುವು ಬಹುತೇಕ ಖಚಿತ ನವದೆಹಲಿ: ಜಗದೀಪ್ ಧನ್‌ಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್, ಇಂಡಿ ಒಕ್ಕೂಟದ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ

ಇಂದು ಉಪರಾಷ್ಟ್ರಪತಿ ಚುನಾವಣೆ : ರಾಧಾಕೃಷ್ಣನ್‌-ಸುದರ್ಶನ್‌ ರೆಡ್ಡಿ ನಡುವೆ ಸ್ಪರ್ಧೆ Read More »

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ

ಲಾಠಿ ಚಾರ್ಜ್‌ ಮಾಡಿ ಪ್ರತಿಭಟನೆಕಾರರನ್ನು ಚದುರಿಸಿದ ಪೊಲೀಸರು ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟನಡೆದ ಬಳಿಕ ಮಂಡ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಕಲ್ಲು ತೂರಾಟ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ಉಂಟಾಗಿದ್ದು, ಈ ವೇಳೆ ಮತ್ತೆ ಕಲ್ಲು ತೂರಲಾಗಿದೆ. ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ Read More »

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ

ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ ಎಂದು ಪ್ರಶ್ನಿಸಿದ ರವಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ದಿನದ ಹಿಂದೆಯಷ್ಟೇ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿರುವ ಸಿ.ಟಿ.ರವಿ, ಮಾನ್ಯ ಮುಖ್ಯಮಂತ್ರಿಗಳೇ ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಾಗರದಲ್ಲಿ

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ Read More »

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು?

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ದೊರೆತಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚೆನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆ 25% ಗಳಷ್ಟು ಮಾತ್ರವೇ ಪೂರ್ಣವಾಗಿದ್ದು, ಇದು ಮತ್ತಷ್ಟು ಆಳವಾಗಿ, ಇನ್ನಷ್ಟು ದಿನಗಳ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು? Read More »

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು?

ನವದೆಹಲಿ: ಅಮೆರಿಕಾ ಜೊತೆಗಿನ ಭಾರತದ ಸಂಬಂಧದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿಕೆಯ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತನಾಡಿದ್ದಾರೆ. ಅಮೆರಿಕಾದೊಂದಿಗೆ ಭಾರತದ ಪಾಲುದಾರಿಕೆಯ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಾಮುಖ್ಯತೆ ನೀಡುತ್ತಾರೆ. ಅಮೆರಿಕಾದ ಅಧ್ಯಕ್ಷ ಟ್ರಂಪ್ ಜೊತೆಗೆ ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಉತ್ತಮ ಸಮೀಕರಣ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರ ಭಾವನೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಸಕಾರಾತ್ಮಕ ಮೌಲ್ಯಮಾಪನವನ್ನು ಅವರು ಆಳವಾಗಿ ಮೆಚ್ಚುತ್ತಾರೆ

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು? Read More »

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದು ಸಂಪೂರ್ಣ ಕಳಪೆಯಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ರಸ್ತೆಯಲ್ಲಿ ಸುಮಾರು 40 ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, 50% ಸಹ ಸಂಪೂರ್ಣವಾಗಿ ಕಾಮಗಾರಿ ನಡೆಯದೇ ಇದ್ದು, ವಾಹನ ಸಂಚಾರ ಆರಂಭವಾದ ಎರಡನೇ ದಿನದಲ್ಲಿ ಇಂಟರ್ಲಾಕ್ ಕಿತ್ತುಕೊಂಡು ಬರುತ್ತಿದೆ. ಇದರಿಂದ ವಾಹನ ಸವಾರರು ಪೇಚಾಡುವ ಪರಿಸ್ಥಿತಿ ಉಂಟಾಗಿದೆ. ಇದು ಕಳಪೆ ಕಾಮಗಾರಿ ಎನ್ನುವುದಕ್ಕೆ

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ

136 ಶಾಸಕರು ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದು ಸವಾಲು ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರಗಳ ಬದಲಾಗಿ ಹಿಂದಿನ ಕಾಲದ ಮತಪತ್ರಗಳನ್ನು ಬಳಸುವ ರಾಜ್ಯ ಸರ್ಕಾರದ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಇದು ನಮ್ಮ ಅನುಭವದ ಮೇಲೆ ಕೈಗೊಂಡ ನಿರ್ಧಾರ ಎಂದು ಸಮರ್ಥಿಸಿದ್ದರೂ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸಿದ್ದರಾಮಯ್ಯ ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ಬಿಜೆಪಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ Read More »

error: Content is protected !!
Scroll to Top