ರಾಜಕೀಯ

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು

ಗಾಂಧಿ ಕುಟುಂಬವನ್ನು ಮೆಚ್ಚಿಸಲು ಸಿದ್ದರಾಮಯ್ಯನವರ ಕೊಡುಗೆ ಎಂಬ ಆರೋಪ ಬೆಂಗಳೂರು: ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ 10 ಕೋ. ರೂ. ನೆರವು ನೀಡಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಕುಟುಂಬವನ್ನು ಮೆಚ್ಚಿಸಲು ಕರ್ನಾಟಕದ ಹಿತವನ್ನು ಕಡೆಗಣಿಸಿ ಪಕ್ಕದ ಕೇರಳಕ್ಕೆ ಕೋಟಿಗಟ್ಟಲೆ ನೆರವು ನೀಡಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ವಯನಾಡು ಪ್ರಿಯಾಂಕ ಗಾಂಧಿ ಗೆದ್ದಿರುವ ಲೋಕಸಭಾ ಕ್ಷೇತ್ರ. ನಮ್ಮ ದುಡ್ಡು ಕೇರಳಕ್ಕೆ ನೆರವು. ಇದು ರಾಜ್ಯ […]

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು Read More »

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ವಿಜೇತರ ವಿವರ ವಾರ್ಡ್ 1-ಕಳಾರ: ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ Read More »

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ಜನಸಂಪರ್ಕ ಕಾರ್ಯಕ್ರಮದಲ್ಲಿ ಕಪಾಲಕ್ಕೆ ಹೊಡೆದ ವ್ಯಕ್ತಿ ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆಂದು ದೆಹಲಿ ಬಿಜೆಪಿ ಘಟಕ ತಿಳಿಸಿದೆ. ಸಿವಿಲ್ ಲೈನ್ಸ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಜನ್ ಸುನ್‌ವಾಯಿ (ಜನಸಂಪರ್ಕ) ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, 30 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಖಾ ಗುಪ್ತಾಗೆ ಯಾವುದೇ ಗಾಯವಾಗದಿದ್ದರೂ, ಈ ಘಟನೆ ಅವರನ್ನು ಆಘಾತಕ್ಕೀಡು ಮಾಡಿದೆ. ದಾಳಿಕೋರನನ್ನು ಈಗ ದೆಹಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಜನಸಂಪರ್ಕ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ Read More »

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ?

ನವದೆಹಲಿ: ಸೆ. 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ‌ಮಾಜಿ ಜಡ್ಜ್ ಜಸ್ಟೀಸ್ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಎನ್.ಡಿ.ಎ. ಯು ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷ, ಮಹಾರಾಷ್ಟ್ರ ಗವರ್ನರ್ ಸಿ.ಪಿ.‌ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ವಿಪಕ್ಷಗಳು ‌ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದಾಗಿದೆ. ಆಗಸ್ಟ್ 21 ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ ಬಳಿಕ ನಾಮ ಪತ್ರ ಪರಿಶೀಲನೆ,

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ? Read More »

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗವು 65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿದೆ ಮತ್ತು ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಆರಂಭ ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಸಮಯದಲ್ಲಿ ಅಳಿಸಿ ಹಾಕಲಾದ 65 ಲಕ್ಷ ಮತದಾರರ ಹೆಸರುಗಳನ್ನು ಬಹಿರಂಗ ಮಾಡಿರುವುದಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ Read More »

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ

ತಮಿಳುನಾಡಿನ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೆ ಒಲಿದು ಬಂದ ಭಾಗ್ಯ ನವದೆಹಲಿ: ಜಗದೀಪ್‌ ಧನ್‌ಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನು ಆಯಕೆ ಮಾಡುವಲ್ಲೂ ಬಿಜೆಪಿ ಅಚ್ಚರಿಯೆ ನಡೆ ತೋರಿಸಿದೆ. ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಹಿತ ಹಲವು ಪ್ರಮುಖರು ಉಪರಾಷ್ಟ್ರಪತಿ ರೇಸ್‌ನಲ್ಲಿ ಇದ್ದರೂ ಕೊನೆಗೆ ಆಯ್ಕೆಯಾಗಿರುವುದು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌. ಅಷ್ಟರ ತನಕ ರಾಧಾಕೃಷ್ಣನ್‌ ಹೆಸರು ಉಲ್ಲೇಖದಲ್ಲೇ ಇರಲಿಲ್ಲ ಎನ್ನುವುದು ಗಮನಾರ್ಹ ಅಂಶ. ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಿನ್ನೆ

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ Read More »

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ

ಸದನದಲ್ಲಿ ಮಂಗಳೂರು ಎಂದು ನಾಮಕರಣ ಮಾಡುವುದಕ್ಕೆ ಒತ್ತಾಯಿಸಿದ ಶಾಸಕ ಹರೀಶ್‌ ಪೂಂಜ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಸಂಬಂಧ ಪರ-ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಗಮನ

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ Read More »

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು Read More »

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು?

ಮಂತ್ರಿ ಸ್ಥಾನ ಕಿತ್ತುಕೊಂಡ ಕ್ರಮದ ಹಿಂದೆ ದೊಡ್ಡದೊಂದು ಪಿತೂರಿ ಇದೆಯೇ? ಬೆಂಗಳೂರು: ಕಾಂಗ್ರೆಸ್‌ನೊಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ನೋಡ್ತಾ ಇರಿ ಎಂದಿದ್ದ ಕೆ.ಎನ್.ರಾಜಣ್ಣ ಅವರನ್ನು ಆಗಸ್ಟ್‌ನಲ್ಲೇ ಸಂಪುಟದಿಂದ ಕಿತ್ತು ಹಾಕಲಾಗಿದೆ. ಸದಾ ಪಕ್ಷದ ತಪ್ಪುಗಳ ಬಗ್ಗೆ ನೇರವಾಗಿ ಮಾತನಾಡುತ್ತಿದ್ದ ಹಿರಿಯ ನಾಯಕನ ತಲೆದಂಡವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪಡೆದುಕೊಂಡಿದೆ. ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್‌ ಕೈಗೊಂಡ ಈ ನಿರ್ಧಾರ ಪ್ರತಿಪಕ್ಷಗಳಿಗೆ ಸರ್ಕಾರವನ್ನು ಟೀಕಿಸಲು ಬಲವಾದ ಅಸ್ತ್ರವಾಗಿ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಉಳಿಗಾಲವಿಲ್ಲ ಎಂಬ ಸಂದೇಶವನ್ನು ರವಾನಿಸುವಲ್ಲಿ ವಿಪಕ್ಷ ಯಶಸ್ವಿಯಾಗಿದೆ. ರಾಷ್ಟ್ರಮಟ್ಟದಲ್ಲೂ

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು? Read More »

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್

ನವದೆಹಲಿ: ಭಾರತದ ಆರ್ಥಿಕ ಅಭಿವೃದ್ಧಿ ಕ್ರಿಯಾತ್ಮಕ ಮತ್ತು ವೇಗವಾದ ಬೆಳವಣಿಗೆ ಕಾಣುತ್ತಿದೆ. ಈ ಅಂಶ ಜಗತ್ತಿನ ಬಾಸ್ ಎಂದು ಕರೆಸಿಕೊಳ್ಳುವ ದೊಡ್ಡಣ್ಣನಿಗೆ ಸಹಿಸುವುದಕ್ಕೆ ‌ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕಾ ವಿರುದ್ಧ ರಕ್ಷಣಾ ಸಚಿವ ರಾಜ ನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಭಾರತದ ಮೇಲೆ ಸುಂಕ ಯುದ್ಧ ಹೇರಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ ‌ನಡೆಸಿದ ಅವರು, ಭಾರತದ ಆರ್ಥಿಕ‌ ಬೆಳವಣಿಗೆಯ ವೇಗ ಗಮನಿಸಿದರೆ ಜಗತ್ತಿನ ಮಹಾಶಕ್ತಿಯಾಗಿ ಹೊಮ್ಮುವುದನ್ನು ತಡೆಯಲು ಯಾವ ಜಾಗತಿಕ ಶಕ್ತಿಗೂ ‌ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್ Read More »

error: Content is protected !!
Scroll to Top