ರಾಜಕೀಯ

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ

ಭಾರಿ ಹಗ್ಗ ಜಗ್ಗಾಟದ ಬಳಿಕ ನಾಲ್ವರ ನಾಮನಿರ್ದೇಶನಕ್ಕೆ ಹೈಕಮಾಂಡ್‌ ಒಪ್ಪಿಗೆ ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಹಲವು ತಿಂಗಳಿಂದ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್‌ ಒಪ್ಪಿಗೆ ನೀಡಿದೆ. ಈ ಹಿಂದೆ ಫೈನಲ್ ಆಗಿದ್ದ ನಾಲ್ವರ ನಾಮನಿರ್ದೇಶನ ಪಟ್ಟಿ ಬದಲಾಗಿದ್ದು, ಇಬ್ಬರನ್ನು ಕೈಬಿಟ್ಟು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಕರಾವಳಿಯ ದಿನೇಶ್‌ ಅಮೀನ್‌ ಮಟ್ಟು ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದೆ. ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ […]

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ

ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿ ದೌರ್ಜನ್ಯ ಎಸಗಿದ್ದೀರಿ ಎಂಬ ಹೇಳಿಕೆಗೆ ಟೀಕೆ ಬೆಂಗಳೂರು: ಕರ್ನಾಟಕದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಂಬಿಕೆಯ ನೆಲೆಗಟ್ಟಿನಲ್ಲಿ ಬಾನು ಮುಷ್ತಾಕ್‌ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ Read More »

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ

ತಲೆಬುರುಡೆ ಕುರಿತು ಆರಂಭದಲ್ಲಿ ಯಾಕೆ ತನಿಖೆ ಮಾಡದಿರುವುದು ಲೋಪ ಎಂದ ರಾಜಣ್ಣ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಆರಂಭದಲ್ಲೇ ತಪ್ಪು ಹೆಜ್ಜೆಯಿಟ್ಟಿತ್ತು ಎಂದು ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ. ಭೂಮಿಯಲ್ಲಿ ಹೂತ ಮೃತದೇಹವನ್ನು ಹೊರತೆಗೆಯಲು ಕಾನೂನಿನಲ್ಲಿ ನಿರ್ದಿಷ್ಟ ನಿಯಮಗಳಿವೆ. ತಾಲೂಕು ಮ್ಯಾಜಿಸ್ಟ್ರೇಟ್ ಅನುಮತಿ

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ Read More »

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ

ಡಿಕೆಶಿ ಹಾಡಿದ ಆರ್‌ಎಸ್‌ಎಸ್‌ ಗೀತೆಯಿಂದ ಕೈ ಪಡೆಯಲ್ಲಿ ಕಿಡಿ ಬೆಂಗಳೂರು : ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಡಿದ ಆರ್‌ಎಸ್‌ಎಸ್‌ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೇ… ಕಾಂಗ್ರೆಸ್‌ನೊಳಗೆ ವಿವಾದದ ಕಿಡಿ ಹೊತ್ತಿಸಿದೆ. ಬಿಜೆಪಿಯವರು ಡಿಕೆಶಿ ನಡೆಯನ್ನು ವ್ಯಂಗ್ಯವಾಗಿಯಾದರೂ ಸ್ವಾಗತಿಸಿದ್ದರೆ, ಸದಾ ಆರ್‌ಎಸ್‌ಎಸ್‌ನ್ನು ದ್ವೇಷಿಸುತ್ತಿರುವ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಚರ್ಚೆ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ನಮಸ್ತೇ ಸದಾ ವತ್ಸಲೇ… ಎಂದು ಆರ್​​ಎಸ್​ಎಸ್ ಗೀತೆ ಹಾಡಿದ್ದಾರೆ. ಅದು ಸಾಂದರ್ಭಿಕವಾಗಿ

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ Read More »

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ

ಎಡಿಆರ್‌ ಪ್ರಕಟಿಸಿದ ಪಟ್ಟಿಯಲ್ಲಿದೆ ಮುಖ್ಯಮಂತ್ರಿಗಳ ಸಂಪತ್ತಿನ ಕುತೂಹಲಕಾರಿ ಮಾಹಿತಿ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದೇಶದ ಮೂರನೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿಯಿದೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಹಾಲಿ ಮುಖ್ಯಮಂತ್ರಿಗಳ ಆಸ್ತಿ ಮಾಹಿತಿ ಇದರಲ್ಲಿದೆ. ಮುಖ್ಯಮಂತ್ರಿಗಳು ಚುನಾವಣೆ ಸಮಯದಲ್ಲಿ ಸಲ್ಲಿಸಿರುವ ಪ್ರಮಾಣಪತ್ರಗಳ ಆಧಾರದಲ್ಲೇ ಅಸೋಸಿಯೇಷನ್ ಫಾರ್

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ Read More »

ಗ್ಯಾರಂಟಿಗೆ ಪರಿಶಿಷ್ಟರ ನಿಧಿಯಿಂದ 13,433 ಕೋ.ರೂ. ಬಳಕೆ

ಉಪಯೋಜನೆ ಮೀಸಲು ಅನುದಾನ ಬಳಸಿರುವುದನ್ನು ಒಪ್ಪಿಕೊಂಡ ಸರ್ಕಾರ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನದಲ್ಲಿ 13,433 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ ಮಹದೇವಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟರ ಕಲ್ಯಾಣಕ್ಕೆ ಉಪಯೋಜನೆಯ ಸೆಕ್ಷನ್ 7ಸಿ ಅಡಿ ಸಮುದಾಯದ ಕಾರ್ಯಕ್ರಮಗಳನ್ನು ರೂಪಿಸುವ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಹಣ ಬಳಕೆಗೆ ಅವಕಾಶವಿದೆ. ಅದರಂತೆ ಗ್ಯಾರಂಟಿ ಯೋಜನೆಗಳಿಗೆ

ಗ್ಯಾರಂಟಿಗೆ ಪರಿಶಿಷ್ಟರ ನಿಧಿಯಿಂದ 13,433 ಕೋ.ರೂ. ಬಳಕೆ Read More »

ಮತಕಳ್ಳತನ ಸಿಐಟಿ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಆಗ್ರಹ ನವದೆಹಲಿ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್‌ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿದ್ದಾರೆ. ಅತ್ಯಂತ ಸೂಕ್ಷ್ಮ ಮತ್ತು

ಮತಕಳ್ಳತನ ಸಿಐಟಿ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ Read More »

ಮೋದಿ ಫ್ರಾಡ್‌ ಎಂದ ಕಾಂಗ್ರೆಸ್‌ ಸದಸ್ಯ : ವಿಧಾನ ಪರಿಷತ್‌ನಲ್ಲಿ ತಡರಾತ್ರಿ ತನಕ ಕೋಲಾಹಲ

ಬಿಜೆಪಿಯ ಭಾರಿ ಪ್ರತಿಭಟನೆಗೆ ಮಣಿದು ಕ್ಷಮೆ ಕೇಳಿದ ನಜೀರ್‌ ಅಹ್ಮದ್‌ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹ್ಮದ್‌ ಹೇಳಿದ ನಿಂದನೆಯ ಮಾತು ನಿನ್ನೆ ತಡರಾತ್ರಿ ತನಕ ವಿಧಾನ ಪರಿಷತ್‌ನಲ್ಲಿ ಹೈಡ್ರಾಮಾಕ್ಕೆ ಕಾರಣವಾಯಿತು. ಪ್ರಧಾನಿ ನರೇಂದ್ರ ಮೋದಿ ಈ ದೇಶದ ದೊಡ್ಡ ಫ್ರಾಡ್‌ ಎಂದು ನಜೀರ್‌ ಅಹ್ಮದ್‌ ನಿಂದಿಸಿದ್ದು, ಬಿಜೆಪಿಯ ಆಕ್ರೋಶಭರಿತ ಪ್ರತಿಭಟನೆಯಿಂದಾಗಿ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ನಡುವೆ ಭಾರಿ ವಾಗ್ವಾದ ನಡೆದು ತಡರಾತ್ರಿವರೆಗೂ ಬಿಜೆಪಿ

ಮೋದಿ ಫ್ರಾಡ್‌ ಎಂದ ಕಾಂಗ್ರೆಸ್‌ ಸದಸ್ಯ : ವಿಧಾನ ಪರಿಷತ್‌ನಲ್ಲಿ ತಡರಾತ್ರಿ ತನಕ ಕೋಲಾಹಲ Read More »

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು

ಗಾಂಧಿ ಕುಟುಂಬವನ್ನು ಮೆಚ್ಚಿಸಲು ಸಿದ್ದರಾಮಯ್ಯನವರ ಕೊಡುಗೆ ಎಂಬ ಆರೋಪ ಬೆಂಗಳೂರು: ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ 10 ಕೋ. ರೂ. ನೆರವು ನೀಡಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಕುಟುಂಬವನ್ನು ಮೆಚ್ಚಿಸಲು ಕರ್ನಾಟಕದ ಹಿತವನ್ನು ಕಡೆಗಣಿಸಿ ಪಕ್ಕದ ಕೇರಳಕ್ಕೆ ಕೋಟಿಗಟ್ಟಲೆ ನೆರವು ನೀಡಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ವಯನಾಡು ಪ್ರಿಯಾಂಕ ಗಾಂಧಿ ಗೆದ್ದಿರುವ ಲೋಕಸಭಾ ಕ್ಷೇತ್ರ. ನಮ್ಮ ದುಡ್ಡು ಕೇರಳಕ್ಕೆ ನೆರವು. ಇದು ರಾಜ್ಯ

ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು Read More »

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ವಿಜೇತರ ವಿವರ ವಾರ್ಡ್ 1-ಕಳಾರ: ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ Read More »

error: Content is protected !!
Scroll to Top