ರಾಜಕೀಯ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ಜನಸಂಪರ್ಕ ಕಾರ್ಯಕ್ರಮದಲ್ಲಿ ಕಪಾಲಕ್ಕೆ ಹೊಡೆದ ವ್ಯಕ್ತಿ ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆಂದು ದೆಹಲಿ ಬಿಜೆಪಿ ಘಟಕ ತಿಳಿಸಿದೆ. ಸಿವಿಲ್ ಲೈನ್ಸ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಜನ್ ಸುನ್‌ವಾಯಿ (ಜನಸಂಪರ್ಕ) ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, 30 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಖಾ ಗುಪ್ತಾಗೆ ಯಾವುದೇ ಗಾಯವಾಗದಿದ್ದರೂ, ಈ ಘಟನೆ ಅವರನ್ನು ಆಘಾತಕ್ಕೀಡು ಮಾಡಿದೆ. ದಾಳಿಕೋರನನ್ನು ಈಗ ದೆಹಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಜನಸಂಪರ್ಕ […]

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ Read More »

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ?

ನವದೆಹಲಿ: ಸೆ. 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ‌ಮಾಜಿ ಜಡ್ಜ್ ಜಸ್ಟೀಸ್ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಎನ್.ಡಿ.ಎ. ಯು ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷ, ಮಹಾರಾಷ್ಟ್ರ ಗವರ್ನರ್ ಸಿ.ಪಿ.‌ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ವಿಪಕ್ಷಗಳು ‌ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದಾಗಿದೆ. ಆಗಸ್ಟ್ 21 ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ ಬಳಿಕ ನಾಮ ಪತ್ರ ಪರಿಶೀಲನೆ,

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ? Read More »

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗವು 65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿದೆ ಮತ್ತು ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಆರಂಭ ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಸಮಯದಲ್ಲಿ ಅಳಿಸಿ ಹಾಕಲಾದ 65 ಲಕ್ಷ ಮತದಾರರ ಹೆಸರುಗಳನ್ನು ಬಹಿರಂಗ ಮಾಡಿರುವುದಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ Read More »

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ

ತಮಿಳುನಾಡಿನ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೆ ಒಲಿದು ಬಂದ ಭಾಗ್ಯ ನವದೆಹಲಿ: ಜಗದೀಪ್‌ ಧನ್‌ಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನು ಆಯಕೆ ಮಾಡುವಲ್ಲೂ ಬಿಜೆಪಿ ಅಚ್ಚರಿಯೆ ನಡೆ ತೋರಿಸಿದೆ. ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಹಿತ ಹಲವು ಪ್ರಮುಖರು ಉಪರಾಷ್ಟ್ರಪತಿ ರೇಸ್‌ನಲ್ಲಿ ಇದ್ದರೂ ಕೊನೆಗೆ ಆಯ್ಕೆಯಾಗಿರುವುದು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌. ಅಷ್ಟರ ತನಕ ರಾಧಾಕೃಷ್ಣನ್‌ ಹೆಸರು ಉಲ್ಲೇಖದಲ್ಲೇ ಇರಲಿಲ್ಲ ಎನ್ನುವುದು ಗಮನಾರ್ಹ ಅಂಶ. ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಿನ್ನೆ

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ Read More »

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ

ಸದನದಲ್ಲಿ ಮಂಗಳೂರು ಎಂದು ನಾಮಕರಣ ಮಾಡುವುದಕ್ಕೆ ಒತ್ತಾಯಿಸಿದ ಶಾಸಕ ಹರೀಶ್‌ ಪೂಂಜ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಸಂಬಂಧ ಪರ-ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಗಮನ

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ Read More »

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು Read More »

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು?

ಮಂತ್ರಿ ಸ್ಥಾನ ಕಿತ್ತುಕೊಂಡ ಕ್ರಮದ ಹಿಂದೆ ದೊಡ್ಡದೊಂದು ಪಿತೂರಿ ಇದೆಯೇ? ಬೆಂಗಳೂರು: ಕಾಂಗ್ರೆಸ್‌ನೊಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ನೋಡ್ತಾ ಇರಿ ಎಂದಿದ್ದ ಕೆ.ಎನ್.ರಾಜಣ್ಣ ಅವರನ್ನು ಆಗಸ್ಟ್‌ನಲ್ಲೇ ಸಂಪುಟದಿಂದ ಕಿತ್ತು ಹಾಕಲಾಗಿದೆ. ಸದಾ ಪಕ್ಷದ ತಪ್ಪುಗಳ ಬಗ್ಗೆ ನೇರವಾಗಿ ಮಾತನಾಡುತ್ತಿದ್ದ ಹಿರಿಯ ನಾಯಕನ ತಲೆದಂಡವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪಡೆದುಕೊಂಡಿದೆ. ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್‌ ಕೈಗೊಂಡ ಈ ನಿರ್ಧಾರ ಪ್ರತಿಪಕ್ಷಗಳಿಗೆ ಸರ್ಕಾರವನ್ನು ಟೀಕಿಸಲು ಬಲವಾದ ಅಸ್ತ್ರವಾಗಿ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಉಳಿಗಾಲವಿಲ್ಲ ಎಂಬ ಸಂದೇಶವನ್ನು ರವಾನಿಸುವಲ್ಲಿ ವಿಪಕ್ಷ ಯಶಸ್ವಿಯಾಗಿದೆ. ರಾಷ್ಟ್ರಮಟ್ಟದಲ್ಲೂ

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು? Read More »

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್

ನವದೆಹಲಿ: ಭಾರತದ ಆರ್ಥಿಕ ಅಭಿವೃದ್ಧಿ ಕ್ರಿಯಾತ್ಮಕ ಮತ್ತು ವೇಗವಾದ ಬೆಳವಣಿಗೆ ಕಾಣುತ್ತಿದೆ. ಈ ಅಂಶ ಜಗತ್ತಿನ ಬಾಸ್ ಎಂದು ಕರೆಸಿಕೊಳ್ಳುವ ದೊಡ್ಡಣ್ಣನಿಗೆ ಸಹಿಸುವುದಕ್ಕೆ ‌ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕಾ ವಿರುದ್ಧ ರಕ್ಷಣಾ ಸಚಿವ ರಾಜ ನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಭಾರತದ ಮೇಲೆ ಸುಂಕ ಯುದ್ಧ ಹೇರಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ ‌ನಡೆಸಿದ ಅವರು, ಭಾರತದ ಆರ್ಥಿಕ‌ ಬೆಳವಣಿಗೆಯ ವೇಗ ಗಮನಿಸಿದರೆ ಜಗತ್ತಿನ ಮಹಾಶಕ್ತಿಯಾಗಿ ಹೊಮ್ಮುವುದನ್ನು ತಡೆಯಲು ಯಾವ ಜಾಗತಿಕ ಶಕ್ತಿಗೂ ‌ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್ Read More »

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ

ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಬೆಂಗಳೂರು : ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಬಿಜೆಪಿ ನಾಯಕ ಸಿ .ಟಿ. ರವಿ ಆರೋಪಿಸಿದ್ದಾರೆ. ಕೋಟ್ಯಂತರ ಜನರ ಶ್ರದ್ಧೆ, ಭಕ್ತಿ, ನಂಬಿಕೆಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ. ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ Read More »

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ

ವಿಪಕ್ಷ ಬತ್ತಳಿಕೆಯಲ್ಲಿ ಧರ್ಮಸ್ಥಳ ಪ್ರಕರಣ, ಆರ್‌ಸಿಬಿ ಕಾಲ್ತುಳಿತ ಸಹಿತ ಹಲವು ಪ್ರಬಲ ಅಸ್ತ್ರಗಳು ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ ವಿಚಾರ ಮುಂದಿಟ್ಟು ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »

error: Content is protected !!
Scroll to Top