ರಾಜಕೀಯ

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ

ಮಿತ್ರಪಕ್ಷಗಳ ಹಂಗಿನಲ್ಲಿದ್ದರೂ ದೇಶಕ್ಕೆ ಒಳಿತಾಗುವ ನಿರ್ಧಾರಗಳಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಮಿತ್ರಪಕ್ಷಗಳ ನೆರವಿನಿಂದ ಸರಕಾರ ರಚಿಸುವ ಅನಿವಾರ್ಯತೆಯಲ್ಲಿ ಸಿಲುಕಿದಾಗ ಈ ಅವಧಿಯಲ್ಲಿ ಬಿಜೆಪಿಯಿಂದ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಕ್ಕಿಲ್ಲ. ಎಲ್ಲ ವಿಚಾರಗಳಿಗೂ ಮಿತ್ರಪಕ್ಷಗಳ ಮನವೊಲಿಸಿ ಅಂಗಲಾಚಬೇಕಾಗಬಹುದು ಎಂಬ ಅಭಿಪ್ರಾಯವೊಂದು ಕೇಳಿಬಂದಿತ್ತು. ಆದರೆ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಯಶಸ್ವಿಯಾಗಿ ಅಂಗೀಕಾರಗೊಂಡಿರುವುದು ಈ ಅಭಿಪ್ರಾಯವನ್ನು ಸುಳ್ಳಾಗಿಸಿದೆ. ಪೂರ್ಣ ಬಹುಮತ ಇಲ್ಲದಿದ್ದರೂ ದೇಶಕ್ಕೆ ಒಳಿತಾಗುವ ದಿಟ್ಟ ನಿರ್ಧಾರ […]

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ Read More »

ಲೋಕಸಭೆಯಲ್ಲಿ ಪಾಸ್‌ ಆದ ವಕ್ಫ್‌ ಮಸೂದೆ : ಇಂದು ರಾಜ್ಯಸಭೆಯಲ್ಲಿ ಮಂಡನೆ

ಮಧ್ಯರಾತ್ರಿವರೆಗೂ ನಡೆದ ಬಿರುಸಿನ ಚರ್ಚೆ; ರಾತ್ರಿ 1.15ಕ್ಕೆ ಮತದಾನ ನವದೆಹಲಿ: ಲೋಕಸಭೆಯಲ್ಲಿ ಸತತ 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆಯಿತು. ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಲಿದೆ. ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಸದನವು ವಿರೋಧ ಪಕ್ಷದ ಎಲ್ಲ ತಿದ್ದುಪಡಿಗಳನ್ನು ಧ್ವನಿಮತದ ಮೂಲಕ ತಿರಸ್ಕರಿಸಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15ಕ್ಕೆ ಮತದಾನ

ಲೋಕಸಭೆಯಲ್ಲಿ ಪಾಸ್‌ ಆದ ವಕ್ಫ್‌ ಮಸೂದೆ : ಇಂದು ರಾಜ್ಯಸಭೆಯಲ್ಲಿ ಮಂಡನೆ Read More »

ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ?

ಜೆ.ಪಿ.ನಡ್ಡಾ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ ಉತ್ತರಾಧಿಕಾರಿಯ ಆಯ್ಕೆ ಈ ತಿಂಗಳಲ್ಲೇ ನಡೆಯಲಿದೆ ಎನ್ನಲಾಗಿದೆ. ಏ.4ಕ್ಕೆ ಸಂಸತ್‌ ಅಧಿವೇಶನ ಮುಗಿಯಲಿದ್ದು, ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಚುರುಕುಗೊಳಿಸಲಿದೆ. ಬಹುತೇಕ ಏಪ್ರಿಲ್‌ ಮೂರನೇ ವಾರದಲ್ಲಿ ಹೊಸ ಅಧ್ಯಕ್ಷರ ಘೋಷಣೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ಕೆಲವು ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿಯಿದ್ದು, ಅದನ್ನು ತ್ವರಿತವಾಗಿ ಮುಗಿಸಿದ ಬಳಿಕ ರಾಷ್ಟ್ರೀಯ

ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? Read More »

ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ಪಕ್ಷಗಳಿಂದ ವಿಪ್‌ ಜಾರಿ-ಭಾರಿ ಕೋಲಾಹಲದ ನಿರೀಕ್ಷೆ ನವದೆಹಲಿ: ಈಗಾಗಲೇ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಮಹತ್ವದ ವಕ್ಫ್‌ ಮಸೂದೆಯನ್ನು ಕೇಂದ್ರ ಸರಕಾರ ಇಂದು ವಿಪಕ್ಷಗಳು ಮತ್ತು ಮುಸ್ಲಿಮರ ವಿರೋಧದ ನಡುವೆ ಲೋಕಸಭೆಯಲ್ಲಿ ಮಂಡಿಸಲಿದೆ. ಮಧ್ಯಾಹ್ನ 12.15ಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಲಿದ್ದಾರೆ. ಮುಸ್ಲಿಮರು ವಕ್ಫ್‌ ಮಸೂದೆ ತಿದ್ದುಪಡಿಯನ್ನು ವಿರೋಧಿಸುತ್ತಿದ್ದು, ದೇಶದ ಹಲವೆಡೆ ಪ್ರತಿಭಟನೆಯೂ ನಡೆದಿದೆ. ವಕ್ಫ್ ಮಸೂದೆ ಮೇಲಿನ ವಿಸ್ತೃತ ಚರ್ಚೆಗಾಗಿ 8 ಗಂಟೆ ಮೀಸಲು ಇಡಲಾಗಿದೆ. ಈ ಮಸೂದೆಯನ್ನು ಎನ್‌ಡಿಎ

ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ Read More »

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ

ಆಡಿಯೋ ಬಹಿರಂಗವಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಬೆಂಗಳೂರು: ಸಚಿವ ಕೆ.ಎನ್‌. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ತುಣುಕೊಂದು ಬಹಿರಂಗವಾದ ಬೆನ್ನಿಗೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆಡಿಯೋದಲ್ಲಿದ್ದ ಪುಷ್ಪಾ ಎಂಬ ಮಹಿಳೆಯ ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ಎನ್ನಲಾದ ರೌಡಿಶೀಟರ್‌ ಸೋಮು ಎಂಬಾತನ ಕುರಿತು ರಾಕಿ ಹಾಗೂ ಪುಷ್ಪಾ ಎಂಬವರು ಮಾತುಕತೆ ನಡೆಸಿದ್ದ 18 ನಿಮಿಷದ

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ

ಏ.9ರಂದು ಮಂಗಳೂರು, 10ರಂದು ಉಡುಪಿಯಲ್ಲಿ ಜನಾಕ್ರೋಶ ಹೋರಾಟ ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಮುಂದಾಗಿದ್ದು, ಏಪ್ರಿಲ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಬಿಜೆಪಿಯ ಹೋರಾಟ ಪ್ರಾರಂಭವಾಗಲಿದೆ.ಏಪ್ರಿಲ್​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್​ 5ರಂದು ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ Read More »

ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ

ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ  ಬಹುಬೇಡಿಕೆಯ ರಸ್ತೆ  ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು  45ಲಕ್ಷದ  ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆ ನಡೆಯಿತು.  ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು. ಈ ಸಂದರ್ಭದಲ್ಲಿ ಸುಳ್ಯ ನಗರಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್, ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ  ವೆಂಕಟ ವಳಲಂಬೆ, ನಗರ ಮಹಾಶಕ್ತಿ ಕೇಂದ್ರ ಪ್ರಮುಖರಾದ A.T ಕುಸುಮಾಧರ

ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ Read More »

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌

ಆಡಿಯೊ ಕ್ಲಿಪ್ಪಿಂಗ್‌ನಿಂದ ಬಯಲಾಯಿತು ಸುಪಾರಿ ಹಿಂದಿನ ಮರ್ಮ ಬೆಂಗಳೂರು: ಸಚಿವ ಕೆ.ಎನ್‌ ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಅವರ ಮಗಳ ಬರ್ತ್‌ಡೇ ದಿನವೇ ಯತ್ನಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ತನ್ನ ಹತ್ಯಾಯತ್ನದ ಬಗ್ಗೆ ರಾಜೇಂದ್ರ ಅವರೇ ದೂರಿನ ಜೊತೆಗೆ ನೀಡಿದ್ದ ಆಡಿಯೊ ಕ್ಲಿಪ್ಪಿಂಗ್‌ ಈಗ ಬಯಲಾಗಿದ್ದು, ಇದರಲ್ಲಿ ಪುಷ್ಪಾ ಎಂದು ಹೇಳಿಕೊಂಡಿರುವ ಮಹಿಳೆ ರಾಕಿ ಎಂಬಾತನಿಗೆ ರಾಜೇಂದ್ರ ಅವರ ಹತ್ಯೆಯ ಪ್ಲ್ಯಾನ್‌ ವಿವರಿಸಿದ ಸಂಭಾಷಣೆಯಿದೆ. ರಾಜೇಂದ್ರ ತುಮಕೂರು ಎಸ್ಪಿಗೆ ನೀಡಿದ ಆಡಿಯೋದಲ್ಲಿ ಸುಪಾರಿ

ಮಗಳ ಬರ್ತ್‌ಡೇ ದಿನವೇ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಪ್ಲ್ಯಾನ್‌ Read More »

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ

ಸಾಯಿಸಲು ರೌಡಿಶೀಟರ್‌ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ. ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು.

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ Read More »

ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ

ಕೇಂದ್ರ ಸರಕಾರಿ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳಿಗೆ ಏ.14ರಂದು ರಜೆ ನವದೆಹಲಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನವಾದ ಏ.14ರಂದು ಸಾರ್ವತ್ರಿಕ ರಜೆ ಘೋಷಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಕೇಂದ್ರದ ಎಲ್ಲ ಸರ್ಕಾರಿ ಕಚೇರಿಗಳಿಗೆ ಅಂದು ರಜೆಯಿರುತ್ತದೆ.ಅಂಬೇಡ್ಕರರ ಜಯಂತಿ ದಿನದಂದು ರಾಷ್ಟ್ರೀಯ ರಜೆ ಇರಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ.ಭೀಮರಾವ್ ಅಂಬೇಡ್ಕರ್‌ಜಿ

ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ Read More »

error: Content is protected !!
Scroll to Top