ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ
ಮಧ್ಯರಾತ್ರಿ ಕಳೆದರೂ ಪ್ರಕಟವಾಗದ ಫಲಿತಾಂಶ ಚಿಕ್ಕಮಗಳೂರು : ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಶನಿವಾರ ತೀವ್ರ ಗೊಂದಲ ಮತ್ತು ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಮಧ್ಯರಾತ್ರಿ ಕಳೆದರೂ ಈ ಕುರಿತ ಗೊಂದಲ ಮುಗಿದಿಲ್ಲ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ 55 ಮತಗಳಿಂದ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. […]
ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ Read More »










