ರಾಜಕೀಯ

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌

ಅಧಿಕಾರದಲ್ಲಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು […]

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌ Read More »

ಜುಲೈ 19: ಸರ್ವಪಕ್ಷ ಸಭೆಗೆ ಕೇಂದ್ರ ಸರ್ಕಾರ ತೀರ್ಮಾನ

ಮುಂಗಾರು ಅಧಿವೇಶನಕ್ಕೂ ಮೊದಲು ನಡೆಯಲಿದೆ ಈ ಸಭೆ ನವದೆಹಲಿ: ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂಮೊದಲು ಜುಲೈ 19 ರಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆಯಲಿರುವುದಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಿಜಿಜು ಅವರು, ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನವು ಜುಲೈ 21 ರಿಂದ ಆರಂಭವಾಗಲಿದ್ದು, ಆಗಸ್ಟ್ 21 ರ ವರೆಗೆ ನಡೆಯಲಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಆ. 15

ಜುಲೈ 19: ಸರ್ವಪಕ್ಷ ಸಭೆಗೆ ಕೇಂದ್ರ ಸರ್ಕಾರ ತೀರ್ಮಾನ Read More »

ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದ ಹಾಗೆ ಅವರ ಸಹೋದರ ಡಿ.ಕೆ. ಸುರೇಶ್ ಅವರು ತಮ್ಮ ಅನಿಸಿಕೆ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ನನಗೂ ಇದೆ. ಈ ಭರವಸೆ ಈಗಲೂ ಇದೆ. ಮುಂದೆಯೂ ಇರಲಿದೆ. ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ಫಲ ಸಿಕ್ಕೇ ‌ಸಿಗುತ್ತದೆ ಎಂದು ಅವರು ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ವ್ಯಕ್ತಿ ಡಿ.ಕೆ. ಶಿವಕುಮಾರ್ ಅವರು. ಪಕ್ಷದ ಅಧ್ಯಕ್ಷರಾಗಿ ಬಹಳಷ್ಟು ಶ್ರಮದಿಂದ,

ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್ Read More »

ಬೆಂಗಳೂರು ವಿವಿ‌ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು?

ಕಾಂಗ್ರೆಸ್ ಸರ್ಕಾರದ ಈ ಆಲೋಚನೆಗೆ ಜೆಡಿಎಸ್‌ ಹೇಳಿದ್ದೇನು? ಕನ್ನಡಿಗರಿಗೆ ದ್ರೋಹ ಎಸಗುತ್ತಿದೆಯೇ ಕಾಂಗ್ರೆಸ್? ಬೆಂಗಳೂರು: ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಇರಿಸಲು ಕಾಂಗ್ರೆಸ್ ಮುಂದಾಗಿದ್ದು, ಇದನ್ನು ಜೆಡಿಎಸ್ ಖಂಡಿಸಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, ಕರುನಾಡ ಜನತೆಗೆ ಕಾಂಗ್ರೆಸ್ ಸರ್ಕಾರ ದೊಡ್ಡ ದ್ರೋಹ ಮಾಡುತ್ತಿರುವುದಾಗಿ ಟೀಕಿಸಿದೆ. ಕಾಂಗ್ರೆಸ್ ಎಂಬ ಗುಲಾಮಿ ಪಕ್ಷದ ತುಘಲಕ್ ಆಡಳಿತ ರಾಜ್ಯದಲ್ಲಿ ನಡೆಯುತ್ತಿದೆ. ಜನರ ವಿರೋಧವನ್ನೂ ಗಣನೆಗೆ ತೆಗೆದುಕೊಳ್ಳದೆ ರಾಮನ ಹೆಸರಿದ್ದ ರಾಮನಗರವನ್ನು ಬೆಂಗಳೂರು

ಬೆಂಗಳೂರು ವಿವಿ‌ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು? Read More »

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ

ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿಗೆ ಅವಮಾನ ಮಾಡಿದ್ದ ಸಿಎಂ ಬೆಂಗಳೂರು: ಕಾಂಗ್ರೆಸ್‌ನ ಸಮಾವೇಶದ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಪ್ರಸ್ತುತ ಧಾರವಾಡದ ಎಎಸ್‌ಪಿ ಆಗಿರುವ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿಗೆ ಮನವಿ ಮಾಡಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಕೆಲ ಸಮಯದ ಹಿಂದೆ ನಡೆದ ಕಾಂಗ್ರೆಸ್‌ನ ಸಾಧನಾ ಸಮಾವೇಶದ ವೇದಿಕೆಯಲ್ಲಿ ಆಗ ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ನಾರಾಯಣ ಬರಮಣ್ಣಿ ಅವರಿಗೆ ಹೊಡೆಯಲು ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ವೀಡಿಯೊ ಭಾರಿ ವೈರಲ್‌ ಆಗಿ

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ Read More »

ಸಿಎಂ ಬದಲಾವಣೆ ವಿಷಯದಲ್ಲಿ ನನ್ನ ಮಾತಿಗೆ ನಾನು ಬದ್ಧ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ಬೆಂಗಳೂರು: ನನಗೆ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡದಂತೆ ಪಕ್ಷ ನೊಟೀಸ್ ನೀಡಿದೆ. ನಾನು ಬೇರೆಯವರಿಗೂ ಹೇಳುವಂತೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ. ನನ್ನ ಮಾತಿಗೆ ನಾನು ಬದ್ಧ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ. ನಾನು ಪಕ್ಷದ ವರಿಷ್ಠರ ಜೊತೆಗೆ ನಾವೆಲ್ಲರೂ ಬದಲಾವಣೆ ಬಯಸುತ್ತಿರುವುದಾಗಿ ಹೇಳಿದ್ದೇನೆ. ಅವರಿಂದಲೂ ನಮಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದು ಮನ್ ನಲ್ಲಿನ ಅಶಾ ಭಾವನೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದಿದ್ದಾರೆ. ನಾನು ಸಿದ್ದರಾಮಯ್ಯ ಅವರ ಅಭಿಮಾನಿ ಹೌದು. ಆದರೆ ಅವರು ಈಗಾಗಲೇ ಎರಡೂವರೆ

ಸಿಎಂ ಬದಲಾವಣೆ ವಿಷಯದಲ್ಲಿ ನನ್ನ ಮಾತಿಗೆ ನಾನು ಬದ್ಧ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ Read More »

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ

ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರೊಂದಿಗೆ ಎರಡನೆಯ ದಿನವೂ ದೂರುಗಳ ಸುರಿಮಳೆದೈದಿದ್ದಾರೆ. ಕಾಂಗ್ರೆಸ್ ನಾಯಕರುಗಳ ಜೊತೆಗೆ ಸುರ್ಜೇವಾಲಾ ನಡೆಸಿದ ಮ್ಯಾರಥಾನ್ ಮುಖಾಮುಖಿ ಸಭೆಯಲ್ಲಿ ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೂರುಗಳ ಮಳೆಯನ್ನೇ ಸುರಿಸಿದ್ದಾರೆ. ಸುಮಾರು 20 ಕ್ಕೂ ಅಧಿಕ ಕಾಂಗ್ರೆಸ್ ಶಾಸಕರುಗಳ ಜೊತೆಗೆ ಸಭೆ ನಡೆಸಿದ್ದು, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸಾಕಷ್ಟು ಅನುದಾನ ನೀಡುವಂತೆ, ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ವಿನಂತಿಸಿದ್ದಾರೆ. ಹಾಗೆಯೇ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿ ಆಗುತ್ತಿರುವ

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ Read More »

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆ ನಡೆಸುತ್ತಿದೆ : ದಯಾನಂದ ಉಜಿರೆಮಾರು, ಪಿ.ಬಿ.ಶಿವಕುಮಾರ್ ಜಂಟಿ ಹೇಳಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಭ್ರಷ್ಟಾಚಾರ, ಬೆಲೆ ಏರಿಕೆ , ಜನವಿರೋಧಿ ನೀತಿಯ ವಿರುದ್ಧ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದ ಹೋರಾಟ ಪರಿಣಾಮಕಾರಿಯಾದ ಹಿನ್ನೆಲೆಯಲ್ಲಿ ಭಯದಿಂದ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಜನಜಾಗೃತಿ ಸಭೆಯನ್ನು ನಡೆಸುತ್ತಿದೆ. ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ತಳಮಟ್ಟದಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿಯ ತನಕ ಭ್ರಷ್ಟಾಚಾರ ತಾಂಡವವಾಡುತ್ತಿದೆ , ಆರೋಗ್ಯ

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆ ನಡೆಸುತ್ತಿದೆ : ದಯಾನಂದ ಉಜಿರೆಮಾರು, ಪಿ.ಬಿ.ಶಿವಕುಮಾರ್ ಜಂಟಿ ಹೇಳಿಕೆ Read More »

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆ ತಿರುಚಿ ತೇಜೋವಧೆ ಎಂದು ಸ್ಪಷ್ಟನೆ ಬೆಂಗಳೂರು: ಕಳೆದ ಕೆಲ ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪದೇ ಪದೆ ಮುಜುಗರವುಂಟು ಮಾಡುತ್ತಿರುವ ಆಳಂದದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ನಿನ್ನೆ ಸಿದ್ದರಾಮಯ್ಯ ಲಾಟರಿ ಸಿಎಂ ಎಂದು ಹೇಳಿದ್ದು ಭಾರಿ ವೈರಲ್‌ ಆಗಿದೆ. ಫೋನ್‌ನಲ್ಲಿ ಯಾರ ಜೊತೆಗೋ ಮಾತನಾಡುತ್ತಾ ಬಿ.ಆರ್‌ ಪಾಟೀಲ್‌ ಏಕವಚನದಲ್ಲೇ ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು ಎಂಬ ಹೇಳಿದ್ದರು. ಇದರಿಂದ ಪಕ್ಷಕ್ಕೆ ಮತ್ತು ಸಿದ್ದರಾಮಯ್ಯನವರಿಗೆ ತೀವ್ರ ಮುಜುಗರವಾಗಿದ್ದು, ಕೂಡಲೇ ಇದಕ್ಕೆ ಸ್ಪಷ್ಟನೆ ಕೊಟ್ಟ ಪಾಟೀಲ್‌

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌ Read More »

1.07 ಲಕ್ಷ ಕೋಟಿ ರೂ.ಗಳ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡುವ ಯೋಜನೆಗೆ ಪ್ರಧಾನಿ ಮೋದಿ ಸರ್ಕಾರ ಅಸ್ತು

ನವದೆಹಲಿ: ಕೇಂದ್ರದ ಪ್ರಧಾನಿ ಮೋದಿ ಸರ್ಕಾರವು ಉತ್ಪಾದನಾ ವಲಯದ ಮೇಲೆ ವಿಶೇಷ ದೃಷ್ಟಿ ಹರಿಸಿದ್ದು, ಎಲ್ಲಾ ವಲಯಗಳಿಗೆ ಸಂಬಂಧಿಸಿದ ಹಾಗೆ ಉದ್ಯೋಗ ಸೃಷ್ಟಿ ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಮಹತ್ವದ ನಿರ್ಣಯವೊಂದನ್ನು ಅನುಮೋದಿಸಿದೆ. ಉದ್ಯೋಗದ ಅವಕಾಶಗಳು ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚು ಮಾಡಲು 1.07 ಲಕ್ಷ ಕೋಟಿ ರೂ. ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆ ಇದಾಗಿದೆ. ಪಿಎಂ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ

1.07 ಲಕ್ಷ ಕೋಟಿ ರೂ.ಗಳ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡುವ ಯೋಜನೆಗೆ ಪ್ರಧಾನಿ ಮೋದಿ ಸರ್ಕಾರ ಅಸ್ತು Read More »

error: Content is protected !!
Scroll to Top