ರಾಜಕೀಯ

ರಾಜ್ಯ ಸರ್ಕಾರದ ಬಳಿ ಹಣವಿಲ್ಲ, ಕೇಂದ್ರದ ಬಳಿ ಕೇಳಿ: ವೈರಲ್ ಆಯ್ತು ಗೃಹ ಸಚಿವರ ಹೇಳಿಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ಸಿಡಿದೆದ್ದಿದ್ದು, ದಿನಕ್ಕೊಂದು ಹೈಡ್ರಾಮಾ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಯಾವುದೇ ಹಣವಿಲ್ಲ’ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ. ಅವರು ಬಾದಾಮಿಯ ಅಗ್ನಿ ಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ […]

ರಾಜ್ಯ ಸರ್ಕಾರದ ಬಳಿ ಹಣವಿಲ್ಲ, ಕೇಂದ್ರದ ಬಳಿ ಕೇಳಿ: ವೈರಲ್ ಆಯ್ತು ಗೃಹ ಸಚಿವರ ಹೇಳಿಕೆ Read More »

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ

ಮಂಗಳೂರು: ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ  ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ ಮಂಗಳೂರು ಕದ್ರಿ ದೇವಸ್ಥಾನದ ಗೋರಕ್ಷಕನಾಥ ಸಭಾಭವನದಲ್ಲಿ ಜು.25 (ನಾಳೆ) ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್‍ ಅಗರ್ವಾಲ್‍ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್‍ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಅಜ್ಜಾವರ ಗ್ರಾಪಂ ಎದುರು ಪ್ರತಿಭಟನೆ | ರಾಜ್ಯ ಸರಕಾರ ಜನರ ಜೀವನ ಹಾಳು ಮಾಡುತ್ತಿದೆ : ಸಂಜೀವ ಮಠಂದೂರು

ಸುಳ್ಯ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅಜ್ಜಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠoದೂರ್ ಭಾಗವಹಿಸಿ ಮಾತನಾಡಿ, ಕಳೆದ 2 ವರುಷದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ಜನವಿರೋಧಿ ನೀತಿ, ಸ್ವ ಪಕ್ಷಪಾತ ಇವತ್ತು ಕರ್ನಾಟಕದ ಜನರ ಜೀವನವನ್ನ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಗುಡುಗಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಅಜ್ಜಾವರ ಶಕ್ತಿ

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಅಜ್ಜಾವರ ಗ್ರಾಪಂ ಎದುರು ಪ್ರತಿಭಟನೆ | ರಾಜ್ಯ ಸರಕಾರ ಜನರ ಜೀವನ ಹಾಳು ಮಾಡುತ್ತಿದೆ : ಸಂಜೀವ ಮಠಂದೂರು Read More »

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎನ್ನುವ ಮೂಲಕ ಶಾಸಕ ಮತ್ತು ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ಸಂಬಂಧ ಎದ್ದಿದ್ದ ಎಲ್ಲಾ ರೀತಿಯ ಊಹಾಪೋಹಗಳಿಗೆ ಮುಕ್ತಾಯ ಹಾಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ ಎಂ ದವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳ ಕಾಲ ಕೆಎಂಎಫ್ ಅಧ್ಯಕ್ಷನಾಗಿ ಹೈನುಗಾರರಿಗೆ ಸಾಕಷ್ಟು ಪ್ರಯೋಜನ ಮಾಡಿಕೊಟ್ಟಿದ್ದೇನೆ. ನನ್ನ ಅವಧಿಯಲ್ಲಿ

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಬಾಲಚಂದ್ರ ಜಾರಕಿಹೊಳಿ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ | ಬೆಲೆ ಏರಿಕೆಯೊಂದೇ ಕಾಂಗ್ರೆಸ್‌ ಸರ್ಕಾರದ 2 ವರ್ಷದ ಸಾಧನೆ : ಕಿಶೋರ್‌ ಕುಮಾರ್‌ ಪುತ್ತೂರು

ಮಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಬಿಜೆಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಆಯೋಜಿಸಿದ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಮತ್ತು ಪುರಸಭೆ ಕಚೇರಿಗಳ ಎದುರು ನಡೆದ  ಪ್ರತಿಭಟನೆಗಳಲ್ಲಿ ಭಾಗವಹಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನಿರ್ಧಾರಗಳು, ಬೆಲೆ ಏರಿಕೆ ಹಾಗೂ ನಿರ್ಲಕ್ಷ್ಯ ನೀತಿಯ ವಿರುದ್ಧ ಸ್ಥಳೀಯ ಬಿಜೆಪಿ ಘಟಕಗಳು ಸಂಘಟಿತ ಧರಣಿ ಮತ್ತು ಪ್ರತಿಭಟನೆಯನ್ನು ಆಯೋಜಿಸಿತ್ತು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ | ಬೆಲೆ ಏರಿಕೆಯೊಂದೇ ಕಾಂಗ್ರೆಸ್‌ ಸರ್ಕಾರದ 2 ವರ್ಷದ ಸಾಧನೆ : ಕಿಶೋರ್‌ ಕುಮಾರ್‌ ಪುತ್ತೂರು Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು ರಾಜ್ಯ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ವತಿಯಿಂದ ಕೊಳ್ತಿಗೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸತ್ಯಪ್ರಕಾಶ್ ಕುಂಟಿಕಾನ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತೀರ್ಥನಂದ ಗೌಡ ದುಗ್ಗಳ, ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪಾಂಬಾರು, ಬಿಜೆಪಿ ತಾಲೂಕು ಉಪಾಧ್ಯಕ್ಷ ಯತಿಂದ್ರ ಕೊಚ್ಚಿ, ಶಿವರಾಮ್ ಭಟ್ ಭೀರ್ನಕಜೆ, ಗಣೇಶ್ ಭಟ್

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ Read More »

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಬಡವರಿಗೆ ಸರ್ಕಾರದ ಮನೆ ಸಿಗಬೇಕಾದರೆ ಲಂಚ ನೀಡಬೇಕಾದ ಪರಿಸ್ಥಿತಿ ಪ್ರಸ್ತುತ ಒದಗಿ ಬಂದಿದೆ. ರಾಜ್ಯ ಸರಕಾರ ಅಧಿಕಾರ ಬಳಸಿಕೊಂಡು ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದರು. ಅವರು ಸೋಮವಾರ ಅಮರ್ ಜವಾನ್ ಜ್ಯೋತಿ ಬಳಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ನಗರ ಸಭೆಯ ವ್ಯಾಪ್ತಿಯಲ್ಲಿ ನಡೆದ

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ದ್ವೇಷ ಭಾಷಣ, ನಕಲಿ ಸುದ್ದಿ ತಡೆಯಲು ಬರಲಿದೆ ಕಠಿಣ ಕಾನೂನು

ಸಂಘರ್ಷ ಉಂಟು ಮಾಡುವ ಸುದ್ದಿಗಳಿಗೆ ಕಡಿವಾಣ ಹಾಕಲು ಹೊಸ ವಿಧೇಯಕ ಮಂಡನೆಗೆ ಸಿದ್ಧತೆ ಬೆಂಗಳೂರು : ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಕರಡು ಮಸೂದೆಯೊಂದನ್ನು ರಚಿಸಲಾಗಿದ್ದು, ಇದರಲ್ಲಿ ಸಂಘರ್ಷಕ್ಕೆ ಕಾರಣವಾಗುವ ದ್ವೇಷ ಭಾಷಣಕ್ಕೆ ಮತ್ತು ನಕಲಿ ಸುದ್ದಿ ಹರಡುವವರಿಗೆ 3ರಿಂದ 7 ವರ್ಷ ಜೈಲು ಶೀಕ್ಷೆ ವಿಧಿಸುವ ಪ್ರಸ್ತಾವ ಇಡಲಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು

ದ್ವೇಷ ಭಾಷಣ, ನಕಲಿ ಸುದ್ದಿ ತಡೆಯಲು ಬರಲಿದೆ ಕಠಿಣ ಕಾನೂನು Read More »

ವಸತಿ ಇಲಾಖೆ ಭ್ರಷ್ಟಾಚಾರದಿಂದ ಮುಜುಗರಕ್ಕೀಡಾದ ಸರ್ಕಾರ

ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ರಂಗಕ್ಕಿಳಿದ ಸಚಿವರು ಬೆಂಗಳೂರು: ಪದೇ ಪದೆ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ವಸತಿ ಇಲಾಖೆಯಲ್ಲಿ ಕೇಳಿಬಂದಿರುವ ಭಾರಿ ಭ್ರಷ್ಟಾಚಾರದ ಆರೋಪ ಮತ್ತಷ್ಟು ಮುಜುಗರವನ್ನುಂಟುಮಾಡಿದೆ. ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ಈಗ ಡ್ಯಾಮೇಜ್‌ ಕಂಟ್ರೋಲ್‌ ಪ್ರಯತ್ನಕ್ಕೆ ಮುಂದಾಗಿದ್ದಾರೆ. ದೇಶದ ಎಲ್ಲ ಕಡೆ ಭ್ರಷ್ಟಾಚಾರ ಇದೆ. ಎಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಎನ್ನುವುದಕ್ಕಾಗಲ್ಲ. ಇ.ಡಿ., ಐಟಿ ದಾಳಿಯಲ್ಲೂ ಭ್ರಷ್ಟಾಚಾರ ಇರುತ್ತದೆ. ಹಣ ತೆಗೆದುಕೊಂಡು ಬಿಟ್ಟುಬಿಡುತ್ತಾರೆ. ವಸತಿ

ವಸತಿ ಇಲಾಖೆ ಭ್ರಷ್ಟಾಚಾರದಿಂದ ಮುಜುಗರಕ್ಕೀಡಾದ ಸರ್ಕಾರ Read More »

ಜೂ.23 : ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಸವಣೂರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ

ಸವಣೂರು: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಜೂನ್ 23 ಸೋಮವಾರ ಸವಣೂರು ಗ್ರಾಮ ಪಂಚಾಯತ್‌ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ಯುವ ಸಭಾಭವನದಲ್ಲಿ ಇಂದು ಸಂಜೆ 6.00 ಗಂಟೆಗೆ ಸರಿಯಾಗಿ ಬಿಜೆಪಿ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಶಕ್ತಿಕೇಂದ್ರದ ಸಭೆಯನ್ನು ಕರೆಯಲಾಗಿದೆ. ಸಭೆಗೆ ಶಕ್ತಿಕೇಂದ್ರದ ಪ್ರಮುಖರು ಬೂತ್‌ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಮಂಡಲದ ವಿವಿಧ ಪ್ರಮುಖರು, ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ

ಜೂ.23 : ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಸವಣೂರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ Read More »

error: Content is protected !!
Scroll to Top