ರಾಜಕೀಯ

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ

ಮಂಡನೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ನಿರೀಕ್ಷೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ವರ್ಷದ ಕೇಂದ್ರ ಬಜೆಟನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು […]

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌?

ಗೋವಾ ಮಾದರಿಯಲ್ಲಿ ರಾಜ್ಯದಲ್ಲೂ ನಿಷೇಧ ಜಾರಿಗೆ ತರಲು ಗಂಭೀರ ಚಿಂತನೆ ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌? Read More »

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿರುವ ಸುನೇತ್ರಾ ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಮೂಲಕ ಮಹಾರಾಷ್ಟ್ರ ಮೊದಲ ಬಾರಿಗೆ ಮಹಿಳಾ ಉಪಮುಖ್ಯಮಂತ್ರಿಯನ್ನು ಹೊಂದಲಿದೆ. ಉಪಮುಖ್ಯಮಂತ್ರಿಯಾಗಿದ್ದ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿಮಾನ ಅವಗಟದಲ್ಲಿ ನಿಧನರಾದ ಬಳಿಕ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಕ್ಷಿಪ್ರವಾಗಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರ

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಕಾಂಗ್ರೆಸ್ ಜೊತೆಗೆ ಸಂಬಂಧ ಚೆನ್ನಾಗಿಲ್ಲ ಎಂಬ ಊಹಾಪೋಹಕ್ಕೆ ತೆರೆ ಎಳೆದ ಶಶಿ ತರೂರ್

ನವದೆಹಲಿ: ಕಾಂಗ್ರೆಸ್ ಜೊತೆ ಕೇರಳದ ಕೈ ನಾಯಕ ಶಶಿ ತರೂರ್ ಸಂಬಂಧ ಚೆನ್ನಾಗಿಲ್ಲ ಎನ್ನುವ ಮಾತನ್ನು ತಳ್ಳಿ ಹಾಕಿರುವ ತರೂರ್, ರಾಹುಲ್ ಗಾಂಧಿ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು, ಕೋಮುವಾದವನ್ನು ವಿರೋಧಿಸುವ ಸ್ಪಷ್ಟ ರಾಜಕೀಯ ನಿಲುವು ಹೊಂದಿರುವ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ. ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ಒಂದು ದಿನದ ಬಳಿಕ ತರೂರ್ ಈ ಮಹತ್ವದ ಹೇಳಿಕೆಯನ್ನು ನೀಡಿರುವುದಾಗಿದೆ‌. ಪಕ್ಷ ತೊರೆಯುವ ಊಹಾಪೋಹದ ಬಗೆಗೂ

ಕಾಂಗ್ರೆಸ್ ಜೊತೆಗೆ ಸಂಬಂಧ ಚೆನ್ನಾಗಿಲ್ಲ ಎಂಬ ಊಹಾಪೋಹಕ್ಕೆ ತೆರೆ ಎಳೆದ ಶಶಿ ತರೂರ್ Read More »

ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ

ಮುಖ್ಯಮಂತ್ರಿ ಮಗನ ಕಾರುಬಾರಿನಿಂದ ಪ್ರಭಾವಿ ಸಚಿವರೇ ಕಂಗಾಲಾಗಿದ್ದ ಮಾಹಿತಿ ಬಹಿರಂಗ ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿ ಸಿದ್ದರಾಮಯ್ಯನವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ವಿಸೆಷ ಅಧಿವೇಶನ ನಡೆಯುತ್ತಿರುವಾಗಲೇ ಕಂಗ್ರೆಸ್‌ ತಾನಾಗಿ ವಿಪಕ್ಷಕ್ಕೆ ದಾಳಿ ಮಾಡಲು ಹೊಸ ಅಸ್ತ್ರವೊಂದನ್ನು ಕೊಟ್ಟಂತಾಗಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ

ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ Read More »

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಮಾತು

ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನಗಳನ್ನು ‌ಕುರಿತು ಇಂದು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದರು. ವಿಕಸಿತ ಭಾರತದ ಸಂಕಲ್ಪ ಮತ್ತು ಕಳೆದ ದಶಕದ ಸಾಧನೆಗಳನ್ನು ಅವರು ಈ ಸಂದರ್ಭದಲ್ಲಿ ನೆನಪಿಸಿದರು. ಇದೇ ವೇಳೆ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ‌ಸ್ಮರಿಸಿದ ಅವರು, ಜಾತಿ ಮತಗಳ ಬೇಧವಿಲ್ಲದೆ ಸಮಾನ ಅವಕಾಶಗಳನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಸರ್ಕಾರದ ಮೂಲ ಉದ್ದೇಶ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಮಾತು Read More »

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಫೆ.1ರಂದು ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದು ಜಂಟಿ ಅಧಿವೇಶನವನ್ನುದ್ದೇಶಿಸಿ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಅಧಿವೇಶನದ ಮೊದಲ ಹಂತ ಜನವರಿ 28ರಿಂದ ಫೆಬ್ರವರಿ 13 ರವರೆಗೆ ಮತ್ತು ಎರಡನೇ ಹಂತ ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ಇರಲಿದೆ. ಜನವರಿ 31ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು. ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮೊದಲ

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ Read More »

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ

ಸುಳ್ಳಿನ ಕಾರ್ಖಾನೆ ವಿಫಲಗೊಂಡ ಹತಾಶೆಯಲ್ಲಿ ರಾಜ್ಯಪಾಲರ ವಿರುದ್ಧ ಟೀಕೆ ಎಂದು ಆರೋಪ ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕ್ಯಾ.ಬ್ರಿಜೇಶ್‌ ಚೌಟ, ಸಂವಿಧಾನ

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ Read More »

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್

ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇನ್ಯಾವುದೋ ದೇಶದಲ್ಲಿ ನಿಂತು ನಾವು ನಮ್ಮ ದೇಶವನ್ನು ಬಳಸಿಕೊಳ್ಳಲು ಆಗುವುದೇ? ದೇಶದ ಧ್ವಜ ಹಾಕಿಕೊಂಡು ಹೋಗಿ ದೇಶವನ್ನು ತೆಗಳಲಾಗುತ್ತದೆಯೇ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ನೀತಿಯಿಂದ ಭಾರತದ ಆರ್ಥಿಕತೆ ನಾಶವಾಗಿದೆ. ಹೀಗಾಗಿ ದೇಶಕ್ಕೆ ಹೂಡಿಕೆಗ‌ಳು ಬರುತ್ತಿಲ್ಲ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಹೃದಯ ಶ್ರೀಮಂತಿಕೆಯಿಂದ

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್ Read More »

error: Content is protected !!
Scroll to Top