ರಾಜಕೀಯ

ದೇಶದ ಅತಿ ಹಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ

ಪಿಣರಾಯಿ ವಿಜಯನ್‌ ನಿರ್ಗಮನದಿಂದ ಸಿದ್ದರಾಮಯ್ಯನವರಿಗೊಲಿದ ವಿಶೇಷ ದಾಖಲೆ ಬೆಂಗಳೂರು : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ ಪರಾಜಯಗೊಂಡು 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಒಂದು ದಾಖಲೆ ಆಯಾಚಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ವರ್ಗಾವಣೆಯಾಗಿದೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ 78 ವರ್ಷ ವಯಸ್ಸಿನ ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು. ಪ್ರಸ್ತುತ ದೇಶದ […]

ದೇಶದ ಅತಿ ಹಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ತಮಿಳುನಾಡಲ್ಲಿ ಡಿಎಂಕೆ-ಎಐಡಿಎಂಕೆ ಮೈತ್ರಿ?

ಬದ್ಧವೈರಿಗಳೇ ಸೇರಿಕೊಂಡು ಸರ್ಕಾರ ರಚಿಸುವ ಕುರಿತು ಮಾತುಕತೆ ಚೆನ್ನೈ: ಯಾವ ಪಕ್ಷಕ್ಕೂ ನಿಚ್ಚಳ ಬಹುಮತ ಸಿಗದಿರುವ ಕಾರಣ ತಮಿಳುನಾಡಿನ ರಾಜಕಾರಣ ಅತಂತ್ರ ಸ್ಥಿತಿಯಲ್ಲಿದೆ. 108 ಸ್ಥಾನ ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್‌ ನೇತೃತ್ವ ಟಿವಿಕೆ ಸರ್ಕಾರ ರಚಿಸುವ ಇರಾದೆಯಲ್ಲಿದ್ದರೂ ಸರಳ ಬಹುಮತಕ್ಕೆ ಅಗತ್ಯವಿರುವ 10 ಸ್ಥಾನಗಳನ್ನು ಎಲ್ಲಿಂದ ಭರ್ತಿ ಮಾಡಿಕೊಳ್ಳುವುದು ಎಂದು ತಿಳಿಯದೆ ಗೊಂದಲದಲ್ಲಿದೆ. ಕಾಂಗ್ರೆಸ್‌ ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದರೂ ಕಾಂಗ್ರೆಸ್‌ ಬಳಿ ಇರುವುದು ಐದು ಸ್ಥಾನಗಳು ಮಾತ್ರ. ಹೀಗಾಗಿ ತಮಿಳುನಾಡಿನ ರಾಜಕೀಯದಲ್ಲಿ ಕ್ಷಣಕ್ಕೊಂದು ಅಚ್ಚರಿಯ

ತಮಿಳುನಾಡಲ್ಲಿ ಡಿಎಂಕೆ-ಎಐಡಿಎಂಕೆ ಮೈತ್ರಿ? Read More »

ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗಿರಿದ ಕಾಂಗ್ರೆಸ್‌

ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ ಘೋಷಣೆ, ಇಂಡಿ ಮೈತ್ರಿಕೂಟದಲ್ಲಿ ಬಿರುಕು ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, ಡಿಎಂಕೆ ನೇತೃತ್ವದ ಮೈತ್ರಿಗೆ ಭಾರಿ ಶಾಕ್ ಉಂಟಾಗಿದೆ. ಕಾಂಗ್ರೆಸ್ ತನ್ನ ಹಳೆಯ ಮೈತ್ರಿಯನ್ನು ಬಿಟ್ಟು ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕಡೆ ಮುಖ ಮಾಡಿದ್ದು, ಹೊಸ ಮೈತ್ರಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುತ್ತಿದೆ. ಪಕ್ಷದ ಹಿರಿಯ ನಾಯಕ ಕೆ. ಸಿ. ವೇಣಗೋಪಾಲ್‌ ನಿನ್ನೆ ಟಿವಿಕೆಗೆ ಬೆಂಬಲ ನೀಡುವುದಾಗಿ ಹೇಳಿದ ಬೆನ್ನಲ್ಲೇ ಡಿಎಂಕೆ ನಾಯಕರು ಕೆಂಡಾಮಂಡಲವಾಗಿದ್ದಾರೆ. ಬೆನ್ನಿಗಿರಿಯುವುರಲ್ಲಿ

ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗಿರಿದ ಕಾಂಗ್ರೆಸ್‌ Read More »

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ

ಪಕ್ಷದ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ ಮಾಜಿ ಸಚಿವನಿಂದ ಗಂಭೀರ ಆರೋಪ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ ತಲಾ 5 ಕೋ. ರೂ. ವಸೂಲು ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಪಕ್ಷದ

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ Read More »

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್

ಜಾತಿ ನಿಂದನೆ ಕೇಸಿನಲ್ಲಿ ಬಂಧನಕ್ಕೆ ವಾರಂಟ್‌ ಜಾರಿ ಬೆಂಗಳೂರು : ಜಾತಿನಿಂದನೆ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ Read More »

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು

ಅಂಚೆ ಮತಪತ್ರದಲ್ಲಿ ಅಕ್ರಮ ಎಸಗಿದ ಕುರಿತು ಮೂವರ ವಿರುದ್ಧ ಕೇಸ್‌ ದಾಖಲು ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿ.ಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ ಎಜೆಂಟ್ ಆಗಿರುವ ಸುಧೀರ್ ಕುಮಾರ್ ಮುರೋಳ್ಳಿ ದೂರು ನೀಡಿದ್ದಾರೆ. ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಟ್ರಾಂಗ್ ರೂಂ ಸೀಲ್

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು Read More »

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ

ರಾತ್ರಿಯವರೆಗೂ ನಡೆದ ಎಣಿಕೆ, ತಡರಾತ್ರಿ ಸ್ಪಷ್ಟ ಫಲಿತಾಂಶ ಘೋಷಣೆ ನವದೆಹಲಿ : ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ. ನಡುರಾತ್ರಿಯವರೆಗೂ ಮತ

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ Read More »

ಯಾರಾಗಲಿದ್ದಾರೆ ಮುಖ್ಯಮಂತ್ರಿ? : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಯ್ಕೆ ಕಠಿಣ

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಹೀನಾಯ ಸೋಲು ನವದೆಹಲಿ: ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಿಗೆ ಎದುರಾಗುವ ದೊಡ್ಡ ಪ್ರಶ್ನೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಎನ್ನುವುದು. ಈ ಸಲ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಎಲುವು ಕಂಡಿರುವ ಬಿಜೆಪಿಯ ಎದುರು ಕೂಡ ಈ ಪ್ರಶ್ನೆ ಇದೆ. ಅಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ಯೋಗ್ಯರಾದ ಹಲವು ನಾಯಕರು ಇರುವುದರಿಂದ ಮುಖ್ಯಮಂತ್ರಿಯ ಆಯ್ಕೆ ಬಿಜೆಪಿ ಪಾಲಿಗೆ ಕಠಿಣವಾಗಲಿದೆ ಎನ್ನಲಾಗುತ್ತಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿ

ಯಾರಾಗಲಿದ್ದಾರೆ ಮುಖ್ಯಮಂತ್ರಿ? : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಯ್ಕೆ ಕಠಿಣ Read More »

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ

ಪಶ್ಚಿಮ ಬಂಗಾಳದಲ್ಲಿ ಮುನ್ನಡೆ ವಿಸ್ತರಿಸಿಕೊಂಡ ಬಿಜೆಪಿ ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲ ಲೆಕ್ಕಾಚಾರ ಬುಡಮೇಲಾಗುವ ಸಾಧ್ಯತೆ ಗೋಚರಿಸುತ್ತಿದೆ. ಇಲ್ಲಿ ಚಿತ್ರನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಎಲ್ಲ ಸಮೀಕ್ಷೆಗಳನ್ನು ತಲೆಕೆಳಗಾಗಿಸಿ ಮುನ್ನಡೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಅಚ್ಚರಿ ಹುಟ್ಟಿಸಿದೆ. ಇದಕ್ಕೂ ಹೆಚ್ಚಿನ ಅಚ್ಚರಿಯೆಂದರೆ ಆಡಳಿತರೂಢ ಡಿಎಂಕೆ ತೃತೀಯ ಸ್ಥಾನದಲ್ಲಿರುವುದು. ಬಿಜೆಪಿ ಒಳಗೊಂಡಿರುವ ಎಐಎಡಿಎಂಕೆ ದ್ವಿತೀಯ ಸ್ಥಾನದಲ್ಲಿದ್ದು, ಸದ್ಯದ ಮುನ್ನಡೆ ಯಾರ ಊಹೆಗೂ ನಿಲುಕದ ಫಲಿತಾಂಶವಾಗಿದೆ. ಯಾವ ಚುನಾವಣೋತ್ತರ ಸಮೀಕ್ಷೆಯೂ ಟಿವಿಕೆ ಪಕ್ಷವನ್ನು

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ Read More »

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ

ಕೇಸರಿ ಪಕ್ಷಕ್ಕೆ ಬೋನಸ್‌ ಆಗಿ ದಕ್ಕಿದ ಒಂದು ಸ್ಥಾನ ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್‌ ತಲುಪಿದಂತಾಗಿದೆ. ರಾಜ್ಯದ

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ Read More »

error: Content is protected !!
Scroll to Top