ರಾಜಕೀಯ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಸರಕಾರ ದುರಾಡಳಿತದ ವಿರುದ್ಧ ಕೆಲವು ಅಂಶಗಳನ್ನು ಮುಂದಿಟ್ಟುಕೊಂಡು ಜೂ.23 ರಂದು ಜಿಲ್ಲೆಯ ಎಲ್ಲಾ ಗ್ರಾಪಂ, ನಗರ, ಪಟ್ಟಣ ಪಂಚಾಯಿತಿ ಎದುರು ಬಿಜೆಪಿ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‍ ಕುಂಪಲ ತಿಳಿಸಿದ್ದಾರೆ. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ […]

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಹೊಟ್ಟೆನೋವಿಗೆ ಗ್ಯಾಸ್ಟ್ರೋ ವಿಭಾಗದಲ್ಲಿ ಚಿಕಿತ್ಸೆ ನವದೆಹಲಿ : ಕಾಂಗ್ರೆಸ್​​ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ

ಮೊದಲ ಗಣತಿಗೆ ಮಾಡಿದ 165 ಕೋ. ರೂ.ಗೆ ಯಾರು ಹೊಣೆ ಎಂದು ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ಮರಳಿ ಜಾತಿ ಗಣತಿ ಮಾಡುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಈಗಾಗಲೇ ನಡೆದ ಸಮೀಕ್ಷೆ ವರದಿ ಏನು ಮಾಡುತ್ತೀರಿ? 165 ಕೋಟಿ ರೂ. ಖರ್ಚು ಮಾಡಿದ್ದು ನೀರಿನಲ್ಲಿಟ್ಟ ಹೋಮದಂತಾಯಿತೇ ಎಂದು ಬಿಜೆಪಿ

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ Read More »

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ

ಪ್ರಬಲ ಜಾತಿಗಳ ವಿರೋಧಕ್ಕೆ ಮಣಿದು ಮರು ಜಾತಿ ಗಣತಿಗೆ ಸೂಚಿಸಿದ ಹೈಕಮಾಂಡ್‌ ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಜಾತಿ ಗಣತಿಗಾಗಿ ಮರಳಿ ಸರ್ವೇ ಮಾಡಲು ಸೂಚಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಾಗಿರುವ ಹಿನ್ನಡೆಯೆಂದೇ ಭಾವಿಸಲಾಗುತ್ತಿದೆ. ಸಿದ್ದರಾಮಯ್ಯನವರು ಹಳೆಯ ಜಾತಿಗಣತಿ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ಶತಾಯಗತಾಯ ಮುಂದಾಗಿದ್ದರು. ಡಿ.ಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು, ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯಗಳ ವಿರೋಧದ ನಡುವೆಯೂ ಸಿದ್ದರಾಮಯ್ಯನವರು 10 ವರ್ಷಗಳ ಹಿಂದಿನ ಜಾತಿಗಣತಿ ವರದಿಯನ್ನೇ ಜಾರಿಗೆ ತರಲು ಕಸರತ್ತು ನಡೆಸಿದ್ದರು. ಅದನ್ನು

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ Read More »

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್‍ | ಪೊಲೀಸ್‍ ದೌರ್ಜನ್ಯದ ಕುರಿತು ಬಿಜೆಪಿಯಿಂದ ಮಾಹಿತಿ ಸಂಗ್ರಹ ಸಭೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿರುವುದು ಮತ್ತು ಗಡಿಪಾರು ನೋಟಿಸ್ ನೀಡಿರುವುದು ಹಾಗೂ ಪೊಲೀಸ್ ದೌರ್ಜನ್ಯದ ಕುರಿತು ಮಾಹಿತಿ ಸಂಗ್ರಹ ಸಭೆ ಇಂದು ನಡೆಯಿತು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿ ಪಕ್ಷ ನಾಯಕರಾದ ಆರ್‍.ಅಶೋಕ್‍, ಚಲವಾದಿ ನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ  ಸಹಿ ಸಂಗ್ರಹ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್‍ ಕುಂಪಲ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕರಾದ ಅರವಿಂದ ಬೆಲ್ಲದ, ಎನ್‍.ರವಿ ಕುಮಾರ್‍,

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್‍ | ಪೊಲೀಸ್‍ ದೌರ್ಜನ್ಯದ ಕುರಿತು ಬಿಜೆಪಿಯಿಂದ ಮಾಹಿತಿ ಸಂಗ್ರಹ ಸಭೆ Read More »

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ

ಕೆಪಿಸಿಸಿ ಕಳುಹಿಸಿದ್ದ ನಾಲ್ಕು ಹೆಸರುಗಳನ್ನು ತಡೆಹಿಡಿದ ಹೈಕಮಾಂಡ್‌ ಬೆಂಗಳೂರು: ವಿಧಾನ ಪರಿಷತ್‌ನ ಖಾಲಿಯಾಗಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್‌ ಶಿಫಾರಸ್ಸು ಮಾಡಿದ್ದ 4 ಹೆಸರುಗಳಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕೊನೇಕ್ಷಣದಲ್ಲಿ ತಾತ್ಕಾಲಿಕ ತಡೆ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರಸ್‌ ಆಯ್ಕೆ ಮಾಡಲುದ್ದೇಶಿಸಿರುವ ನಾಲ್ಕು ಮಂದಿಯಲ್ಲಿ ಯಾರದ್ದಾದರೂ ಹೆಸರನ್ನು ಕೈಬಿಡುವ ಸಾಧ್ಯತೆ ಇದೆಯೇ ಎಂಬ ಕುತೂಹಲ ಕೆರಳಿದೆ. ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ Read More »

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ

ನಾವು ತಪ್ಪೇ ಮಾಡಿಲ್ಲ, ಹೀಗಾಗಿ ಕಪ್ಪುಚುಕ್ಕೆ ಇಲ್ಲ ಎಂದು ಸಮರ್ಥನೆ ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಸಂಪೂರ್ಣ ಹೊಣೆ ಪೊಲೀಸರದ್ದೇ, ಸರ್ಕಾರ ತಪ್ಪೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಘಟನೆಯಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್‌

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ Read More »

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?

ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರನ್ನು ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ

ಬೆಂಗಳೂರು: IPL ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ ಸರಕಾರ 11 ಅಮಾಯಕ ಜನರ ಸಾವಿನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಸರಕಾರದ ವಿರುದ್ಧ ಆರ್. ಅಶೋಕ್ ಕಿಡಿಕಾರಿದ್ದಾರೆ. ತಮ್ಮ “ಎಕ್ಸ್” ಖಾತೆಯಲ್ಲಿ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜತೆ ಫೋಟೋಗ್ರಾಫ್, ಆಟೋಗ್ರಾಫ್ ತೆಗೆಸಿಕೊಡುವ ಭರದಲ್ಲಿ

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ Read More »

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

error: Content is protected !!
Scroll to Top