ರಾಜಕೀಯ

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ

ಮೋದಿ, ಅಮಿತ್‌ ಶಾ ಕರ್ನಾಟಕ ಸರಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ. ಒಗ್ಗಟ್ಟಾಗಿ ಇರದೆ ಹೋದರೆ ಸರ್ಕಾರ ಉರುಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತುಮ್ಮೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ನೀವು ಹುಷಾರಾಗಿರಬೇಕು. ಮೋದಿ, ಅಮಿತ್ ಶಾ ನಿಮ್ಮ ಸರ್ಕಾರ ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪವಿದ್ದರೂ ಒಗ್ಗಟ್ಟಾಗಿರಬೇಕು ಎಂದು ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಕಿವಿಮಾತು […]

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ Read More »

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ

ನ್ಯಾಶನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ಗೆ ಸಂಕಷ್ಟ ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ದಿಲ್ಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುವುದರೊಂದಿಗೆ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ನ್ಯಾಶನಲ್‌ ಹೆರಾಲ್ಡ್‌ನ ಕೋಟಿಗಟ್ಟಲೆ ಮೊತ್ತದ ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ನ

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ Read More »

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಒಂದೆಡೆ ಬೀದಿ ಹೋರಾಟಗಳು ನಡೆಯುತ್ತಿದ್ದರೆ ಇಂದಿನಿಂದ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟವೂ ಶುರುವಾಗಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ಗುಚ್ಚವನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆತ್ತಿಕೊಳ್ಳಲಿದೆ.ವಕ್ಫ್‌ ಕಾಯಿದೆಗೆ ತಿದ್ದಪಡಿ ಮಾಡುವ ಮೂಲಕ ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಮತ್ತು ಅವರ ಆಸ್ತಿಯನ್ನು ಕಬಳಿಸುವ ಹುನ್ನಾರವಿದೆ. ಸಂವಿಧಾನದಲ್ಲಿ ವಕ್ಫ್‌ ಕಾಯಿದೆಗೆ ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಮಸೂದೆಯನ್ನು ವಿರೋಧಿಸುವವರು ವಾದಿಸುತ್ತಿದ್ದಾರೆ.ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ Read More »

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ

ಪ್ರಬಲ ಸಮುದಾಯಗಳಿಂದ ಪ್ರತ್ಯೇಕ ಗಣತಿ, ಹೋರಾಟದ ಎಚ್ಚರಿಕೆ ಬೆಂಗಳೂರು: ಏನೇನೋ ಲೆಕ್ಕಾಚಾರ ಹಾಕಿ ಬಿಡುಗಡೆ ಮಾಡಿದ ಜಾತಿ ಗಣತಿ ವರದಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲಿಗೆ ಬಿಸಿತುಪ್ಪವಾಗುವ ಲಕ್ಷಣ ಕಾಣಿಸಿದೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದರೂ ಅದಕ್ಕೂ ಮೊದಲೇ ವರದಿಯ ಕೆಲವು ಅಂಶಗಳು ಬಹಿರಂಗವಾಗಿ ಎಲ್ಲೆಲ್ಲೂ ಆಕ್ರೋಶ ವ್ಯಕ್ತವಾಗುತ್ತದೆ. ಮುಖ್ಯವಾಗಿ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ವರದಿ ವಿರುದ್ಧ ಸಿಡಿದು ನಿಂತಿದ್ದಾರೆ. ಇದರ ಜೊತೆಗೆ ಇತರ

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ Read More »

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು

ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ನೀಡಿರುವ ಲೋಕಾಯುಕ್ತ ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚೀಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಜನಪ್ರತಿನಿಧಿ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಜನಪ್ರತಿನಿಧಿ ನ್ಯಾಯಾಲಯಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಜೊತೆಗೆ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ತೀರ್ಪು

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು Read More »

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ

ಬೆಂಗಳೂರು: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂದು ಹಲವು ನಾಯಕರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯ ಮುಖಂಡರು ಕೂಡ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಒಕ್ಕಲಿಗ ಶಾಸಕರು ಮತ್ತು ಎಂಎಲ್‌ಸಿಗಳ ಸಭೆ ಕರೆದಿದ್ದಾರೆ. ಡಿಕೆಶಿ ಮನೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗುತ್ತದೆ

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ Read More »

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ

ಹಲವು ಜಾತಿಗಳ ಮೀಸಲಾತಿ ಪ್ರಮಾಣ ಹೆಚ್ಚಿಸಲು ಶಿಫಾರಸ್ಸು ಬೆಂಗಳೂರು: ತೀವ್ರ ಚರ್ಚೆಗೆ ಕಾರಣವಾಗಿರುವ ಸಿದ್ದರಾಮಯ್ಯ ಸರಕಾರದ ಜಾತಿ ಗಣತಿ ವರದಿ ಅಧಿಕೃತವಾಗಿ ಇನ್ನೂ ಬಹಿರಂಗವಾದಿದ್ದರೂ ಅದರಲ್ಲಿರುವ ಕೆಲವು ಮಾಹಿತಿಗಳು ಸೋರಿಕೆಯಾಗಿವೆ. ವರದಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹಲವು ಚರ್ಚೆ, ವಿರೋಧದ ನಡುವೆ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015 ಮಂಡನೆ ಆಗಿದೆ. ಸಮಗ್ರ ಚರ್ಚೆಗೆ ಮುಂದಿನ ಗುರುವಾರದ ಸಚಿವ ಸಂಪುಟ ಸಭೆಯ ಮುಹೂರ್ತ

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ Read More »

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಆರೋಪಿಗಳಾಗಿರುವ ಪ್ರಕರಣ ನವದೆಹಲಿ : ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 600 ಕೋಟಿ ರೂ.ಗೂ ಮಿಕ್ಕಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಾರಂಭಿಸಿದೆ.ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾಗಿರುವ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬಯಿಯ

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು Read More »

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ

1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು?

ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು? Read More »

error: Content is protected !!
Scroll to Top