ರಾಜಕೀಯ

ಗೊಂದಲಕ್ಕೆಡೆ ಮಾಡಿದ ಬಿ-ಖಾತಾ ಕುರಿತ ಪತ್ರಿಕಾಗೋಷ್ಠಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ : ಇಸಾಕ್‍ ಸಾಲ್ಮರ

ಪುತ್ತೂರು: ನಗರಸಭಾ ವ್ಯಾಪ್ತಿಗೆ ಮಾಡಿದ ಬಿ ಖಾತಾ ಕುರಿತು ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಗೊಂದಲ ಹಾಗೂ ಅರ್ಜಿಗಳೇ ಬಾರದೆ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿಗೆ ಆದೇಶಿಸುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಸಂಚಾಲಕ ಇಸಾಕ್‍ ಸಾಲ್ಮರ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಸಾವಿರ ಜನಕ್ಕೆ […]

ಗೊಂದಲಕ್ಕೆಡೆ ಮಾಡಿದ ಬಿ-ಖಾತಾ ಕುರಿತ ಪತ್ರಿಕಾಗೋಷ್ಠಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ : ಇಸಾಕ್‍ ಸಾಲ್ಮರ Read More »

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ.ವಾಗಿದ್ದು, ಇದು ಬಹಳ ದುಃಖಕರ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಸದನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೇಮಕವಾಗಿರುವ ಸಿಬ್ಬಂದಿಗಳ ಬಗ್ಗೆ ಪ್ರಶ್ನಿಸಿದಾಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗುವಂತೆ ಪ್ರೋತ್ಸಾಹಿಸಲು ಅಗತ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕೆಂದು

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು Read More »

ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದಿನಂತೆ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಮಂಡಿಸಿದ್ದಾರೆ. ರಾಜ್ಯದ  ಎಲ್ಲ  ಜನರ ಹಿತ ಕಾಯಬೇಕಾದ ಮುಖ್ಯಮಂತ್ರಿ ಕೇವಲ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೋಟ್ಯಾಂತರ ರೂ. ಘೋಷಿಸಿದ್ದಾರೆ ಎಂದು ಮಾಜಿ ಸಂಸದ ನಳಿನ್‍ ಕುಮಾರ್ ಕಟೀಲ್‍ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಸಾಲದ ಪ್ರಮಾಣ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು ಆತಂಕಕಾರಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿೃಸಲಾಗಿದೆ. ಅಡಕೆ ಬೆಳೆಗಾರರ ಸಮಸ್ಯೆಗೆ ಬಜೆಟ್‌ನಲ್ಲಿ ಯಾವುದೇ ಸ್ಪಂದನೆ

ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ : ನಳಿನ್ ಕುಮಾರ್ ಕಟೀಲ್‍ Read More »

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಹೊಸ ಯೋಜನೆಗಳೇ ಇಲ್ಲ. ನಕ್ಸಲ್ ಪ್ರಭಾವಿತ ಗ್ರಾಮಗಳಿಗೆ ಸಹಾಯ ಪ್ಯಾಕೇಜ್ ನೀಡುವ ಬದಲು ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ಈ ಬಜೆಟ್ ಕನ್ನಡಿಗರ ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಇದು

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ Read More »

ಪುತ್ತೂರು ಸರಕಾರಿ ಮೆಡಿಕಲ್‍ ಕಾಲೇಜು ಕುರಿತು ಬಜೆಟ್‍ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು 

ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟತೆ  ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸರಕಾರಿ ಅಸ್ಪತ್ರೆಗೆ ಮೊದಲು ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಬೆಡ್ ಗೆ ಉನ್ನತೀಕರಿಸಬೇಕು, ಆದರೆ ಬಜೆಟ್ ನಲ್ಲಿ ಈ ಪ್ರಸ್ತಾಪವನ್ನೇ ಮಾಡಿಲ್ಲ, ಸರಕಾರಿ ಮೆಡಿಕಲ್ ಕಾಲೇಜು ಉಲ್ಲೇಖ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ತೃಪ್ತಿಪಡಿಸಲು ಮಾಡಿದ

ಪುತ್ತೂರು ಸರಕಾರಿ ಮೆಡಿಕಲ್‍ ಕಾಲೇಜು ಕುರಿತು ಬಜೆಟ್‍ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು  Read More »

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ

ರಾಗಿ ಆರೋಗ್ಯ ಮಿಶ್ರಣ ಇನ್ನು ಮುಂದೆ ವಾರಕ್ಕೆ 5 ದಿನ ಬೆಂಗಳೂರು: ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ Read More »

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್‌ಐಆರ್ ದಾಖಲು‌

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ Read More »

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್‌ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »

error: Content is protected !!
Scroll to Top