ರಾಜಕೀಯ

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ

ಪುತ್ತೂರು : ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ

ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನಿನ ಮುಂದೆ ತಂದು ನಿಲ್ಲಿಸುವ ಕೆಚ್ಚೆದೆ ಇದೆಯೇ? ದೇಶಾದ್ಯಂತ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣ ಅಂತಿಮವಾಗಿ ಸುತ್ತಿಕೊಳ್ಳುವುದು ಯಾರ ಕೊರಳಿಗೆ? ಹೀಗೊಂದು ಅನುಮಾನ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಹನಿಟ್ರ್ಯಾಪ್‌ ಗುಸುಗುಸು ನಿಜ ಎನ್ನುವುದನ್ನು ವಿಧಾನಮಂಡಲ ಕಲಾಪದಲ್ಲೇ ಒಪ್ಪಿಕೊಳ್ಳಲಾಗಿದೆ. ಹಿರಿಯ ಸಚಿವ ಕೆ.ಎನ್‌.ರಾಜಣ್ಣ ತನ್ನನ್ನೂ ಸೇರಿಸಿ ಸುಮಾರು 48 ಮಂದಿಯ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಹಾಗೂ ಅನೇಕರ ವೀಡಿಯೊಗಳು ದಾಖಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ Read More »

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ

ಸದ್ದಿಲ್ಲದೆ ವೇತನ ಏರಿಸಿಕೊಂಡ ಸರಕಾರ ಬೆಂಗಳೂರು : ಜನರು ಬೆಲೆ ಏರಿಕೆಯಿಂದ ನಿತ್ಯ ಖರ್ಚುವೆಚ್ಚಗಳನ್ನು ಸರಿದೂಗಿಸಲು ಒದ್ದಾಡುತ್ತಿರುವಾಗಲೇ ಸರಕಾರ ಮಾತ್ರ ಮುಖ್ಯಮಂತ್ರಿಯೂ ಸೇರಿದಂತೆ ಎಲ್ಲ ಸಚಿವರ ಮತ್ತು ಶಾಸಕರ ವೇತವನ್ನು ಸದ್ದಿಲ್ಲದೆ ಹೆಚ್ಚಿಸಿಕೊಂಡಿದೆ. ಸಚಿವರು ಮತ್ತು ಶಾಸಕರ ವೇತನವನ್ನು ಶೇ.100ರಷ್ಟು ಹೆಚ್ಚಿಸುವ ಪ್ರಸ್ತಾವಕ್ಕೆ ರಾಜ್ಯಪಾಲರಿಂದ ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ Read More »

error: Content is protected !!
Scroll to Top