ರಾಜಕೀಯ

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ

ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವ ಸುರ್ಜೆವಾಲಾ ಬೇಡ ಎಂದು ಹೈಕಮಾಂಡ್‌ಗೆ ಮನವಿ ಬೆಂಗಳೂರು: ಹೈಕಮಾಂಡ್‌ ಎಷ್ಟೇ ಮದ್ದರೆದರೂ ಕಾಂಗ್ರೆಸ್‌ನ ಬಂಡಾಯ ಶಮನವಾಗುತ್ತಿಲ್ಲ. ಈಗ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ನ ಕರ್ನಾಟಕ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೆವಾಲಾ ವಿರುದ್ಧವೇ ಬಂಡಾಯ ಸಾರಿದ್ದಾರೆ. ಕೆಲವು ಸಚಿವರು ಸುರ್ಜೆವಾಲಾ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಹಕ್ತಪಡಿಸಿದ್ದು, ಅವರನ್ನು ವಾಪಸು ಕರೆಸಿಕೊಳ್ಳಲು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.ನಮ್ಮ ಹಿನ್ನಡೆಗೆ ಸುರ್ಜೆವಾಲಾ ಕಾರಣರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ವೇಳೆ ಕೆಲವು ಮಂದಿ ಸಚಿವರು […]

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ Read More »

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌

ಕಚ್ಚಾಡುತ್ತಿರುವ ಕರ್ನಾಟಕದ ನಾಯಕರ ಕಿವಿ ಹಿಂಡಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಪಕ್ಷದದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. ಕೆಲವರು ಹೇಳಿದ

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌ Read More »

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ

ಅಕ್ರಮವಾಗಿ ಹಂಚಿದ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ ಬೆಂಗಳೂರು : ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ರಾತ್ರೋರಾತ್ರಿ ಮುಟ್ಟುಗೋಲು ಹಾಕಿಕೊಂಡಿದೆ.ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್​​ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು ಮತ್ತು

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಜಯಪ್ರಕಾಶ್‍ ಎ. ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಎನ್‍.ಜಯಂತಿ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. ಜಯಪ್ರಕಾಶ್‍ ಎನ್‍. ಅವರು ಈ ಹಿಂದೆ ಡಿ.ವಿ.ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಾಗೂ ಕೇಂದ್ರ ಸಚಿವರಾಗಿದ್ದಾಗ ಅವರ ಪಿ.ಎ. ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ Read More »

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ

ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ Read More »

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕಡಬ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು  ಸೋಮವಾರ ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಚರ್ಚಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಿ.ಪಂ.ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ  ವಿದ್ಯುತ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ  ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷಯ ಸೋಲಾರ್ ವಿದ್ಯುತ್ ಉತ್ಪಾದನೆ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಬೇಡಿಕೆ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಸಂಸದರು ಸವಣೂರು, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ

ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »

error: Content is protected !!
Scroll to Top