ರಾಜಕೀಯ

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ

ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್‌ ಸರಕಾರದಲ್ಲಿ ಶೇ. 60 ಕಮಿಷನ್‌ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ […]

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ

ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ Read More »

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು

ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್‌ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ.

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ Read More »

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ

ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ ಬೆಂಗಳೂರು : ತಾನು ಕರೆದ ಡಿನ್ನರ್‌ ಮೀಟಿಂಗ್‌ ರದ್ದುಪಡಿಸಲು ಹೈಕಮಾಂಡ್‌ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿರುವ ಪರಮೇಶ್ವರ್‌ಗೆ ಹೈಕಮಾಂಡ್‌ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್‌ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ Read More »

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ

ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ Read More »

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು

ಸದ್ಯಕ್ಕೆ ಡಿನ್ನರ್‌ ಮೀಟಿಂಗ್‌ ನಡೆಸದಂತೆ ಸೂಚನೆ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಗುಂಪು ರಾಜಕೀಯ ಜೋರಾಗಿದೆ. ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಮೀಟಿಂಗ್‌ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ತನ್ನ ಶಕ್ತಿ ಪ್ರದರ್ಶಿಸಲು ಇಂದು ಡಿನ್ನರ್ ಸಭೆ ಕರೆದಿದ್ದರು. ಆದರೆ ಈ ಡಿನ್ನರ್‌ ಮೀಟಿಂಗ್‌ಗೆ ಹೈಕಮಾಂಡ್ ತಡೆ ಹಾಕಿದೆ. ಎಸ್‌ಸಿ/ಎಸ್‌ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು Read More »

ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಸಲ್ಲಿಕೆ | ಸಹಕಾರ ಭಾರತೀಯ ಅಭ್ಯರ್ಥಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲಾಯಿತು. ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿಗೆ ನಡೆಯುವ ಚುನಾವಣೆಗೆ ನರಿಮೊಗರು ವಲಯದಿಂದ ಅನುಸೂಚಿತ ಜಾತಿಯ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಯಾಗಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್. ಟಿ ಮೋರ್ಚ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಗ್ರಾಮಾಂತರ ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಯತೀಂದ್ರ ಕೊಚ್ಚಿ,

ಪುತ್ತೂರಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಸಲ್ಲಿಕೆ | ಸಹಕಾರ ಭಾರತೀಯ ಅಭ್ಯರ್ಥಿ  ಬಾಬು ಮುಗೇರ ಬಾವಿಕಟ್ಟೆ ನಾಮಪತ್ರ ಸಲ್ಲಿಕೆ Read More »

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು

ಉಪ್ಪಿನಂಗಡಿ : 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿ ಜ.8ರಂದು ಹಮ್ಮಿಕೊಂಡಿದ್ದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. 31ನೇ ನೆಕ್ಕಿಲಾಡಿ ಬೊಳುವಾರು ರಾಜ್ಯ ಹೆದ್ದಾರಿಯ 31 ನೆಕ್ಕಿಲಾಡಿಯಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಡಾಮರು ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿದೆ ಇದರಿಂದ ಜ.8 ರಂದು ನಡೆಯಬೇಕಾದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. ಕಳೆದ ಡಿ.2ರಂದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಹೆದ್ದಾರಿ ಕಾಮಗಾರಿಯ ವಿಳಂಬವನ್ನು

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು Read More »

error: Content is protected !!
Scroll to Top