ರಾಜಕೀಯ

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1 […]

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ

ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ

ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್‌ ಸರಕಾರದಲ್ಲಿ ಶೇ. 60 ಕಮಿಷನ್‌ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ

ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ Read More »

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು

ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್‌ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ.

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ Read More »

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ

ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ ಬೆಂಗಳೂರು : ತಾನು ಕರೆದ ಡಿನ್ನರ್‌ ಮೀಟಿಂಗ್‌ ರದ್ದುಪಡಿಸಲು ಹೈಕಮಾಂಡ್‌ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿರುವ ಪರಮೇಶ್ವರ್‌ಗೆ ಹೈಕಮಾಂಡ್‌ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್‌ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ Read More »

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ

ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ Read More »

error: Content is protected !!
Scroll to Top