ರಾಜಕೀಯ

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ

ಪುತ್ತೂರು : ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪ್ರತಿಭಟನೆ ಡಿ 16ರಂದು ನಡೆಯಲಿದೆ.   ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ. ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೊತ್ಥಾನ ಹಂತ 4 ನೇ(ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪತ್ರಿಕಾ […]

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ Read More »

ಮಾಜಿ ಮುಖ್ಯಮಂತ್ರಿ ದಿ| ಎಸ್ ಎಂ ಕೃಷ್ಣರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಭೆ

ಪುತ್ತೂರು : ಮಂಗಳವಾರ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ , ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿವಂಗತ ಶ್ರೀ ಎಸ್ ಎಂ ಕೃಷ್ಣ ಇವರಿಗೆ ಪುತ್ತೂರು ಭಾರತೀಯ ಜನತಾ ಪಾರ್ಟಿ  ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾಧವ್ ಮಾತನಾಡಿ, ನುಡಿನಮನ ಸಲ್ಲಿಸಿದರು.  ಬಳಿಕ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಮಂಡಲ ಪ್ರಧಾನ

ಮಾಜಿ ಮುಖ್ಯಮಂತ್ರಿ ದಿ| ಎಸ್ ಎಂ ಕೃಷ್ಣರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಭೆ Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘೆವಾಲ್ ಡಿ.16 ರಂದು ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಮಸೂದೆ ಮಂಡನೆ ನಂತರ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು. ಪ್ರಧಾನಿ ಮೋದಿ ನೇತೃತ್ವದ ಸಂಪುಟ ಇತ್ತೀಚೆಗೆ ಮಸೂದೆಗೆ ಒಪ್ಪಿಗೆ ನೀಡಿತ್ತು. ಒಪ್ಪಿಗೆ ಬೆನ್ನಲ್ಲೇ ಈಗ ಬಿಲ್‌ ಮಂಡಿಸಲು ತಯಾರಿ ನಡೆಸಲಾಗುತ್ತಿದೆ.

ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ Read More »

ಮಂಗಳೂರು, ಸಿಂಗಾಪುರ ಮಧ್ಯೆ  ನೇರ ವಿಮಾನ ಸಂಚಾರಕ್ಕೆ ಮನವಿ| ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಸಲ್ಲಿಕೆ

ಮಂಗಳೂರು:  ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರವಾಗಲಿದೆ. ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೆಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣ ಎಂದುಸಿಂಗಾಪುರವಾಗಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿದ್ದು. ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಪ್ರಕಟಣೆ ತಿಳಿಸಿದೆ. ಸರ್ಕಾರಕ್ಕೆ ಮನವಿ ಮಾಡಿದ್ದ ಸಂಸದ

ಮಂಗಳೂರು, ಸಿಂಗಾಪುರ ಮಧ್ಯೆ  ನೇರ ವಿಮಾನ ಸಂಚಾರಕ್ಕೆ ಮನವಿ| ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಸಲ್ಲಿಕೆ Read More »

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ

ಸಿದ್ದರಾಮಯ್ಯ, ಪ್ರಹ್ಲಾದ್‌ ಜೋಶಿ ಸಹಿತ ಗಣ್ಯರಿಂದ ಅಂತಿಮ ನಮನ ಬೆಂಗಳೂರು : ನಿನ್ನೆ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗ ಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ,

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ Read More »

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ  ಕಾರ್ಯಕಾರಿಣಿಯ ಮುಂದಿನ 5 ವರ್ಷಕ್ಕೆ  ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ  ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ  ಕೆ, ಸುಂದರ ಎಂ, ಕುಟ್ಟಿ ನಲಿಕೆ, ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ, ಕುಸುಮ ಎಂ.

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ Read More »

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ

ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ Read More »

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ

ಭಾರತದ ವಿರುದ್ಧ ಪಿತೂರಿ ಮಾಡುತ್ತಿರುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪಟ್ಟು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ನಂಟಿನ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ಸೋನಿಯಾ ಗಾಂಧಿ ಮತ್ತು ಅಮೆರಿಕದ ವಿವಾದಾತ್ಮಕ ಉದ್ಯಮಿ ಜಾರ್ಜ್ ಸೊರೊಸ್ ಒಡೆತನದ ಸಂಸ್ಥೆಗಳ ಜೊತೆಗಿರುವ ನಂಟನ್ನು ಬಹಿರಂಗಗೊಳಿಸಿ ತಿರುಗೇಟು ನೀಡಿದ್ದು, ಈ ವಿಚಾರ ಈಗ ರಾಷ್ಟ್ರ ರಾಜಕಾರಣದಲ್ಲಿ ಬಹಳ ಚರ್ಚೆಗೀಡಾಗುತ್ತಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರ ಎಂದು

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ Read More »

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ

ಮೊದಲ ದಿನವೇ ಕೋಲಾಹಲದ ನಿರೀಕ್ಷೆ ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ. ಮುಡಾ, ವಾಲ್ಮೀಕಿ ನಿಗಮ, ವಕ್ಫ್‌ನಿಂದ ರೈತರ ಭೂ ಕಬಳಿಕೆ ವಿವಾದ, ಬಾಣಂತಿಯರ ಸಾವು ಪ್ರಕರಣ ಹೀಗೆ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ವಿರೋಧ ಪಕ್ಷದವರು ಸಜ್ಜಾಗಿದ್ದಾರೆ. ಬಿಜೆಪಿ ಅಸ್ತ್ರಗಳಿಗೆ ಕಾಂಗ್ರೆಸ್ ಕೊರೊನ ಅಸ್ತ್ರ ಜೊತೆಗೆ ಯತ್ನಾಳ್ ಬಣ ಬಡಿದಾಟವನ್ನು ತಿರುಗುಬಾಣವಾಗಿ ಬಿಡಲು ಸಜ್ಜಾಗಿದೆ. ಬಿಜೆಪಿ ವಕ್ಫ್

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ Read More »

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ Read More »

error: Content is protected !!
Scroll to Top