ರಾಜಕೀಯ

ಮಹಿಳೆಯರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ : ವಿಪಕ್ಷಗಳಿಗೆ ಅಮಿತ್‌ ಶಾ ಎಚ್ಚರಿಕೆ

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ವಿಪಕ್ಷಗಳಿಗೆ ತರಾಟೆ ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವಲ್ಲಿ ವಿಫಲವಾದ ಕಾರಣದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ವಿರೋಧ ಪಕ್ಷದ ವಿರುದ್ಧ ಬಿಜೆಪಿ ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಸೂದೆಯೊಂದಿಗೆ ಮಹಿಳಾ ಸಬಲೀಕರಣವನ್ನು ಬಲವಾಗಿ ಪ್ರತಿಪಾದಿಸಿದ ಗೃಹ ಸಚಿವ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ […]

ಮಹಿಳೆಯರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ : ವಿಪಕ್ಷಗಳಿಗೆ ಅಮಿತ್‌ ಶಾ ಎಚ್ಚರಿಕೆ Read More »

ಕಾಂಗ್ರೆಸ್‌ಗೆ ಈಗ ಮುಸ್ಲಿಂ ಸಮುದಾಯದ ಬೆಂಬಲ ಕಳೆದುಕೊಳ್ಳುವ ಭೀತಿ

ಸಂಪುಟ ಸಭೆಯಲ್ಲಿ ಮುಸ್ಲಿಂ ನಾಯಕರ ವಿರುದ್ಧ ಕೈಗೊಂಡ ಕ್ರಮಕ್ಕೆ ಆಕ್ರೋಶ ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಇನ್ನಷ್ಟೇ ಬರಬೇಕಿದೆ. ಆದರೆ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮಾತ್ರ ಬೀದಿಗೆ ಬಂದಿದ್ದು, ಪಕ್ಷದ ಒಗ್ಗಟ್ಟು ಮೂರಾಬಟ್ಟೆಯಾಗಿದೆ. ಮುಸ್ಲಿಂ ನಾಯಕರ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳು ಈಗ ಸರ್ಕಾರದ ಒಳಗೂ ಸಂಚಲನ ಮೂಡಿಸಿವೆ. ಎಂಎಲ್​ಸಿ ಅಬ್ದುಲ್ ಜಬ್ಬಾರ್ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ತಲೆದಂಡದ ವಿಚಾರ ಗುರುವಾರ ನಡೆದ ಸಚಿವ ಸಂಪುಟ

ಕಾಂಗ್ರೆಸ್‌ಗೆ ಈಗ ಮುಸ್ಲಿಂ ಸಮುದಾಯದ ಬೆಂಬಲ ಕಳೆದುಕೊಳ್ಳುವ ಭೀತಿ Read More »

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್‌ ನೀಡಿದ ಅರೋಪ ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಎಪಿಎಂಸಿ ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಆಗಾಗ ಕೇಳಿಬರುತ್ತಲೇ ಇದೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು Read More »

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಬೆಂಗಳೂರು: ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಶುರುವಾಗಿರುವ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಸದ್ಯಕ್ಕೆ ಶಮನವಾಗುವಂತೆ ಕಾಣಿಸುತ್ತಿಲ್ಲ. ಇದೀಗ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್‌ ರಾಜೀನಾಮೆ ನೀಡಿದ್ದಾರೆ.ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ Read More »

‘ಬಿಜೆಪಿ ಸೇರಲು ಲಕ್ಷ್ಮಣ್ ಸವದಿ ಪ್ರಯತ್ನ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸವದಿ ತಿರುಗೇಟು

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ‘ಲಕ್ಷ್ಮಣ ಸವದಿ ‌ಅವರು ಬಿಜೆಪಿಗೆ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ನೀಡಿರುವ ಹೇಳಿಕೆಗೆ ಸ್ವತಃ ಲಕ್ಷ್ಮಣ ಸವದಿ ಅವರೇ ತಿರುಗೇಟು ನೀಡಿದ್ದಾರೆ. ಸೌದಿ ಅವರು ‘ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿದವರೇ‌ ಜೆಡಿಎಸ್ ಸೇರುವ ಆಲೋಚನೆ ಮಾಡುತ್ತಿದ್ದಾರೆ. ನನ್ನ ಬಗ್ಗೆ ಕೆಲಸ‌ ಇಲ್ಲದವರು ಅಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಬಿಡುವುದಾಗಿ ಯಾವುದೇ ರೀತಿಯ ಹೇಳಿಕೆಗಳನ್ನು ನಾನು ಎಲ್ಲಿಯೂ ನೀಡಿಲ್ಲ. ಅಂತಹ ತಲೆ ಬಡ ಇಲ್ಲದ ಹೇಳಿಕೆಗಳನ್ನು

‘ಬಿಜೆಪಿ ಸೇರಲು ಲಕ್ಷ್ಮಣ್ ಸವದಿ ಪ್ರಯತ್ನ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸವದಿ ತಿರುಗೇಟು Read More »

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ

ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನವದೆಹಲಿ: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕರ್ನಾಟಕದ ಎರಡುಕ್ಷೇತ್ರಗಳಿಗೆ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಒಟ್ಟು 25 ಮಿಲಿಯನ್ ಮತದಾರರಿದ್ದಾರೆ, ಇದರಲ್ಲಿ

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ Read More »

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ

ಕಾಂಗ್ರೆಸ್‌ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದ ತರೂರ್‌ಗೆ ತಂಡದಿಂದ ತಡೆ ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್‌ ಅವರ ಗನ್‌ಮ್ಯಾನ್‌ ಮೇಲೂ ಹಲ್ಲೆ ನಡೆಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ Read More »

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌?

ಉಪನಾಯಕ ಸ್ಥಾನದಿಂದ ತೆಗೆದು ಹಾಕಿದ ದಿಢೀರ್‌ ಕ್ರಮದಿಂದ ಹಲವು ಅನುಮಾನ ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕ ರಾಘವ್ ಚಡ್ಡಾ ಅವರನ್ನು ತೆಗೆದುಹಾಕಿದೆ. ಆ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ಬದಲಿಯಾಗಿ ನೇಮಿಸಿದೆ. ಆಪ್‌ನ ಈ ದಿಢೀರ್‌ ಕ್ರಮ ಭಾರಿ ಚರ್ಚೆಗೆ ಕಾರಣವಾಗಿದೆ. ಇಷ್ಟಕ್ಕೂ ರಾಘವ್‌ ಚಡ್ಡಾ ಅವರನ್ನು ಯಾವ ಕಾರಣಕ್ಕೆ ತೆಗೆದು ಹಾಕಲಾಗಿದೆ ಎಂದು ಆಪ್‌ ತಿಳಿಸಿಲ್ಲ. ರಾಘವ್‌ ಚಡ್ಡಾ ಸಂಸತ್‌ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು,

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌? Read More »

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ

ಫ್ರಿಜ್‌, ವಾಷಿಂಗ್‌ ಮಷಿನ್‌ ದುರಸ್ತಿಗೆ 8 ಸಾವಿರ ರೂ, ತಿಂಗಳಿಗೆ 2 ಸಾವಿರ ರೂ. ಗ್ಯಾರಂಟಿ ಮೊತ್ತ ಘೋಷಿಸಿದ ಡಿಎಂಕೆ, ಕಾಂಗ್ರೆಸ್‌ ನವದೆಹಲಿ: ವಿಧಾನಸಭೆ ಚುನಾವಣೆ ಗೆಲ್ಲುವ ಸಲುವಾಗಿ ಡಿಎಂಕೆ ಮತ್ತು ಕಾಂಗ್ರೆಸ್‌ ಮತ್ತೆ ಉಚಿತ ಕೊಡುಗೆಗಳ ಮೊರೆ ಹೋಗಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಭಾನುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳಲು ಮಹಿಳೆಯರಿಗೆ ತಿಂಗಳಿಗೆ 2,000 ರೂ. ಸೇರಿದಂತೆ ಭರಪೂರ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ Read More »

ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದಿಢೀರ್‌ ಎಂದು ಹಿಂದಿ ಕೈಬಿಟ್ಟ ಸರ್ಕಾರ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ಹಿಂದಿಯ ಅಂಕವನ್ನು ದಿಢೀರ್‌ ಎಂದು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮ ಮತ್ತೊಮ್ಮೆ ಭಾಷಾ ವಿವಾದ ಭುಗಿಲೇಳುವಂತೆ ಮಾಡಿದೆ. ಶಿಕ್ಷಣ ತಜ್ಞರು, ರಾಜಕೀಯ ಮುಖಂಡರು, ಭಾಷಾ ಹೋರಾಟಗಾರರು ಈ ಕುರಿತು ನಾನಾ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಪರೀಕ್ಷೆ ನಡೆಯುತ್ತಿರುವಾಗಲೇ ಯಾವುದೇ ಮುನ್ಸೂಚನೆ ನೀಡದೆ ದಿಢೀರ್‌ ಎಂದು ಸರ್ಕಾರ ಹಿಂದಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳ ಹಿತಕ್ಕಿಂತ ರಾಜಕೀಯ ಕಾರಣವೇ ಗುರಿಯಾಗಿರುವಂತೆ ಕಾಣಿಸುತ್ತಿದೆ. ಹಿಂದಿ ಅಂಕಗಳನ್ನು

ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ Read More »

error: Content is protected !!
Scroll to Top