ರಾಜಕೀಯ

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ರಾಜ್ಯಪಾಲರ ಭಾಷಣವಿಲ್ಲದೆ ಕಲಾಪ ಬೆಂಗಳೂರು: ನಿರೀಕ್ಷೆಯಂತೆಯೇ ವಿಧಾನ ಮಂಡಲದಲ್ಲಿಂದು ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಧಿವೇಶನಕ್ಕೆ ಜಂಟಿ ಭಾಷಣ ಮಾಡುವ ಉದ್ದೇಶದಿಂದ ಬಂದರೂ ಆರಂಭದ ಕೆಲವು ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ. ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು. ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ […]

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ Read More »

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ

ಎಸ್‌ಡಿಪಿಐ ಓಲೈಸಲು ಹಿಂದೂ ವಿರೋಧಿ ಹೇಳಿಕೆ ಎಂದು ಟೀಕೆ ಮಂಗಳೂರು : ದೇವಸ್ಥಾನಗಳು ಎಲ್ಲರೂ ಹೋಗುವ ಜಾಗ ಅಲ್ಲಿ ಕೇಸರಿ ಧ್ವಜ ಸೇರಿದಂತೆ ಯಾವುದೇ ಧ್ವಜ ಹಾರಿಸಬಾರದು ಎಂದಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ರಮಾನಾಥ ರೈಯವರ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.ಅವರು ನೀಡಿದ ಹೇಳಿಕೆ ಹಿಂದೂ ನಾಯಕರನ್ನು ಕೇರಳಿಸಿದೆ. ಬುಧವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ವತಿಯಿಂದ ಮನರೇಗ ಯೋಜನೆಯ ಹೆಸರು ಬದಲಾವಣೆ ವಿರುದ್ಧ ನಡೆದ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ರಮಾನಾಥ ರೈ

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ Read More »

ಕರ್ನಾಟಕದಲ್ಲೂ ಗವರ್ನರ್‌ V/S ಗವರ್ನಮೆಂಟ್‌ ಸಂಘರ್ಷ

ವಿಶೇಷ ಅಧಿವೇಶನದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಬೆಂಗಳೂರು: ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಟ್‌ ನಿರಾಕರಿಸಿರುವುದು ಗಂಭೀರವಾದ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರ ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ ವಿಚಾರವಾಗಿ

ಕರ್ನಾಟಕದಲ್ಲೂ ಗವರ್ನರ್‌ V/S ಗವರ್ನಮೆಂಟ್‌ ಸಂಘರ್ಷ Read More »

ಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮಾನವಾದವು ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಹೈಕೋರ್ಟಿನ ಮಧುರೈ ಪೀಠವು ಕಠಿಣ ಪದಗಳಲ್ಲಿ ಅವಲೋಕನ ಮಾಡಿದ್ದು, ಡಿಎಂಕೆಯಿಂದ ನೂರು ವರ್ಷಗಳಲ್ಲಿ ಹಿಂದೂ ಧರ್ಮದ ಮೇಲೆ ಸ್ಪಷ್ಟ ದಾಳಿ ನಡೆದಿದೆ. ಅದೇ ಸೈದ್ಧಾಂತಿಕ ವಂಶಕ್ಕೆ ಉದಯ ನಿಧಿ ಸೇರಿದವರು ಎಂದು ಹೇಳಿದೆ. ಜೊತೆಗೆ ದ್ವೇಷ ಭಾಷಣ ಆರಂಭಿಸಿದವರು ಶಿಕ್ಷೆಗೆ ಒಳಗಾಗದೆ ಉಳಿಯುತ್ತಾರೆ ಎನ್ನುವ ಕಳವಳವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ. ಕಳೆದ 100

ಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಮದ್ರಾಸ್ ಹೈಕೋರ್ಟ್ Read More »

ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ನಬಿನ್ ಅವರು ನನ್ನ ಬಾಸ್, ನಾನು ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಸಂಸ್ಕೃತಿ. ಪಕ್ಷ ಒಂದು ಕುಟುಂಬ. ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿದಂತಹವುಗಳು. ನಮ್ಮ ಅಧ್ಯಕ್ಷರು ಬದಲಾದರೂ ಆದರ್ಶಗಳು ಬದಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಪಕ್ಷದಲ್ಲಿ ನಿರ್ದೇಶನ ಒಂದೇ ಆಗಿರುತ್ತದೆ. ಬದಲಾಗುವುದು ನಾಯಕತ್ವ ಮಾತ್ರ. ದೇಶದ ಪ್ರತಿಯೊಂದು ಮೂಲೆಯ

ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ

ಕಿರಿಯ ವಯಸ್ಸಿನ ಮುಖಂಡನಿಗೆ ದೇಶದ ಅತಿದೊಡ್ಡ ಪಕ್ಷವನ್ನು ಮುನ್ನಡೆಸುವ ಹೊಣೆ ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ.ಲಕ್ಷ್ಮಣ್ ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರd ಬಿಜೆಪಿ ಶಾಸಕ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದವು ಮತ್ತು ಎಲ್ಲ ನಾಮಪತ್ರಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ Read More »

ಸಾರ್ವಜನಿಕರ ಟೀಕೆಗೆ ಗುರಿಯಾದ ಡಿಜಿಪಿ ರಾಮಚಂದ್ರ ರಾವ್: ಕಾರಣ ಏನು ಗೊತ್ತಾ?

ಬೆಂಗಳೂರು: ದುಬೈ‌ನಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿ ಶಿಕ್ಷೆಗೆ ಒಳಗಾದ ನಟಿ ರಾನ್ಯಾ ರಾವ್ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾನ್ಯಾ ಚಿನ್ನ ಕಳ್ಳ ಸಾಗಾಟ ಮಾಡಿರುವ ಪ್ರಕರಣದಲ್ಲಿ ಪಾರದರ್ಶಕತೆ ಕಾಪಾಡಲು ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯಲ್ಲಿ ಸರ್ಕಾರ ಕಳುಹಿಸಿದೆ. ಇದೇ ಸಮಯದಲ್ಲಿ ಅವರು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ವೈರಲ್ ಆಗಿರುವುದಾಗಿದೆ. ಡಿಜಿಪಿ ಕಚೇರಿಯೊಳಗೆಯೇ ಈ

ಸಾರ್ವಜನಿಕರ ಟೀಕೆಗೆ ಗುರಿಯಾದ ಡಿಜಿಪಿ ರಾಮಚಂದ್ರ ರಾವ್: ಕಾರಣ ಏನು ಗೊತ್ತಾ? Read More »

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ

ಮಹಾರಾಷ್ಟ್ರದ ಮಹಾನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಕಮಾಲ್‌ ಮುಂಬಯಿ : ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಮುಂದುವರಿದಿದೆ. ಇಡೀ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಅದರಲ್ಲೂ ಮುಂಬಯಿ ಮಹಾನಗರಪಾಲಿಕೆಯ;ಲ್ಲಿ ಹಲವು ದಶಕಗಳ ಶಿವಸೇನೆಯ ಆಡಳಿತ ಮುಕ್ತಾಯಗೊಂಡಿದೆ. ಶಿವಸೇನೆಯ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಕಾಲದಿಂದಲೂ ತಮ್ಮ ಕುಟುಂಬದ ಹಿಡಿತದಲ್ಲಿ ಇಟ್ಟುಕೊಂಡಿದ್ದ ಮುಂಬೈ ಮಹಾನಗರ ಪಾಲಿಕೆಯಲ್ಲಿ ಶಿವಸೇನೆಯ ಉದ್ದವ್ ಠಾಕ್ರೆ ಮತ್ತು ಎಂಎನ್ಎಸ್ ಸಂಸ್ಥಾಪಕ ರಾಜ್ ಠಾಕ್ರೆ ಆಧಿಪತ್ಯಕ್ಕೆ ಮತದಾರ ಮಂಗಳ ಹಾಡಿದ್ದಾನೆ. ಮುಂಬೈ

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ Read More »

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಶ್ರೀಕಾಂತ್‌ ಪಂಗಾರ್ಕರ್‌ ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಆ ವಾರ್ಡ್‌ನಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಪಂಗಾರ್ಕರ್ 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು Read More »

ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಎರಡು ಎಫ್‌ಐಆರ್‌

ಬಿಜೆಪಿ-ಜೆಡಿಎಸ್‌ ಕೈಗೆ ಕಾಂಗ್ರೆಸ್‌ ಟೀಕಿಸಲು ಸಿಕ್ಕಿದ ಹೊಸ ಅಸ್ತ್ರ ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತ ಗೌಡ ಹಾಗೂ ಜೆಡಿಎಸ್ ಶಾಸಕರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಈಗ ಎರಡೆರಡು ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದು, ಬಂಧನದ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ದಾರೆ. ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತದಲ್ಲಿ ಹಸ್ತಕ್ಷೇಪದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ. ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್‌ ಮೇಲೆ ದಾಳಿ ಮಾಡಲು ಬಿಜೆಪಿಗೆ ಮತ್ತೊಂದು

ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಎರಡು ಎಫ್‌ಐಆರ್‌ Read More »

error: Content is protected !!
Scroll to Top