ರಾಜಕೀಯ

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ

ದೆಹಲಿ: ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ. ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧೈಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ ಹೀಗೆಂದು ಪ್ರತಿಪಕ್ಷಗಳ ಗಲಾಟೆ ಗದ್ದಲದ ನಡುವೆ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. 2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್ ಕನೆಕ್ಷನ್ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ […]

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ Read More »

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ

ಬಂಟ್ವಾಳ: ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಪ್ರಕ್ರಿಯೆ ಬಾಕಿ ಇದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಕ್ಷೇತ್ರ ಸಮಿತಿ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಗೋವಿಂದ ಪ್ರಭು, ರವೀಶ್‍ ಶೆಟ್ಟಿ, ಪುಷ್ಪರಾಜ್ ಚೌಟ, ರೇಷ್ಮಾ ಶಂಕರಿ ಭಟ್‍, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’’ಸೋಜಾ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್‍ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ Read More »

ನಾಳೆ (ಜು.2) : ಬಿಜೆಪಿ ಸುಳ್ಯ ಮಂಡಲ, ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ

ಕಡಬ: ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಜು.2 ರಂದು ನಡೆಯಲಿದೆ. ಕಡಬ ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10.30 ರಿಂದ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜು.2) : ಬಿಜೆಪಿ ಸುಳ್ಯ ಮಂಡಲ, ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ Read More »

ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್

ಪುತ್ತೂರು: ಪುತ್ತೂರಿನ ಕಾಂಗ್ರೆಸ್‍ವಲಯದಲ್ಲಿ ನೈಜ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಬ್ಲಾಕ್ ಅಧ್ಯಕ್ಷರನ್ನಾಗಿ ನೈಜ ಕಾಂಗ್ರೆಸ್ಸಿಗರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪುರುಷೋತ್ತಮ ಬೂಡಿಯಾರ್ ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರನ್ನು ಹೊರತುಪಡಿಸಿ ಉಳಿದ ನಾಯಕರು ಕಾಂಗ್ರೆಸ್ ಪಕ್ಷವನ್ನ ಮೇಲೆತ್ತಲು ಪ್ರಯತ್ನಿಸುತ್ತಿಲ್ಲ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆ ಎಂದರು. ವಿಧಾನಸಭಾ

ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್ Read More »

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ. ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಮೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣೆ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಈ ಸಂದರ್ಭ ಡಿ.ಸಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ಎಸ್.ಟಿ ಮೋರ್ಚ

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ : ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಓಂ ಬಿರ್ಲಾ

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

ಹೊಸದಿಲ್ಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಘೋಷಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪದಾಧಿಕಾರಿಗಳನ್ನು ಬಳಿಕ ಆಯ್ಕೆ ಮಾಡಲಾಗುವುದು ಎಂದು

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ Read More »

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು,  ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್ Read More »

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಳ್ಯ: ಅಂಬಟೆಡ್ಕದಲ್ಲಿ ಸ್ವಂತ ನಿವೇಶನದ ಮೂಲಕ ನಿರ್ಮಾಣಗೊಂಡ ಬಿಜೆಪಿಯ ನೂತನ ಕಾರ್ಯಾಲಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಹಾಗೂ

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

error: Content is protected !!
Scroll to Top