ರಾಜಕೀಯ

ಇಂದಿನಿಂದ ಸಂಸತ್ತಿನ ಅಧಿವೇಶನ

ಹೊಸದಿಲ್ಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.  ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ […]

ಇಂದಿನಿಂದ ಸಂಸತ್ತಿನ ಅಧಿವೇಶನ Read More »

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಅವಧಿ ಮುಂದುವರಿಸಲು ಕಟಿಬದ್ಧವಾಗಿರುವ ಸರ್ಕಾರ, ಹಣ ಹೊಂದಿಸಲು ಬಹಳ ಶ್ರಮ ಪಡುತ್ತಿದೆ. ರಾಜ್ಯದಲ್ಲಿ ಹಣ ಸೋರಿಕೆ ತಡೆಯಲು, ಆದಾಯವನ್ನು ಗರಿಷ್ಠವಾಗಿ ಹೆಚ್ಚಿಸಲು ಇರುವ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಅದಕ್ಕಾಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಜೊತೆ ಸರ್ಕಾರ ಕೈ ಜೋಡಿಸಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಐದು ವರ್ಷ ಶತಾಯಗತಾಯ ಗ್ಯಾರಂಟಿ ಸ್ಕೀಮ್‌ಗಳನ್ನು ಮುಂದುವರಿಸಲು ಸಂಕಲ್ಪ ತೊಟ್ಟಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ Read More »

ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರಿನಲ್ಲಿ  ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಮತ್ತು ವಾಲ್ಮೀಕಿ ನಿಗಮದ ಭ್ರಷ್ಟಾಚಾರದಂತಹ ಅವ್ಯವಸ್ಥೆಗಳಿಂದ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಸರಕಾರ ಹಣವನ್ನು ಸರಿದೂಗಿಸಲು ಸಾಮಾನ್ಯ ಜನರ ಕಿಸೆಗೆ ಕನ್ನ ಹಾಕುತ್ತಿರುವುದು

ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಗರದ ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆ ಸಮೀಪ ನಡೆಯಿತು. ಮೊದಲಿಗೆ ಖಾಸಗಿ ಬಸ್ ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ ಜಾಥಾ ಮೂಲಕ ಬಂದು ಗಾಂಧಿಕಟ್ಟೆ ಸಮೀಪ ರಸ್ತೆ ತಡೆ ಮಾಡಿ ಪ್ರತಿಭಟಿಸಲಾಯಿತು. ಬಳಿಕ ಅಲ್ಲಿಂದ ಮುಖ್ಯರಸ್ತೆಯಾಗಿ ಶ್ರೀಧರ ಭಟ್ ಬಳಿಯಿಂದ ತೆರಳಿ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ Read More »

ನಾಳೆ ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು :  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ‌ ಜನ ವಿರೋಧಿ ನೀತಿ‌ ಅನುಸರಿಸುತ್ತಿರುವ   ರಾಜ್ಯ ಸರಕಾರದ ವಿರುದ್ಧ  ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ  ಜೂ.20 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ‌ ಸಭೆ ನಡೆದ‌ ಬಳಿಕ‌ ಖಾಸಗಿ ಬಸ್‌ ನಿಲ್ದಾಣದಿಂದ‌ ಮುಖ್ಯ ರಸ್ತೆಯಲ್ಲಿ ತರಳಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮನವಿ ಸಲ್ಲಿಸಲಾಗುವುದು. ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ಬೀದಿಗಿಳಿದು ಹೋರಾಟ: ಭಾಗೀರಥಿ ಮುರುಳ್ಯ

ಕಡಬ : ಪರಿಶಿಷ್ಟರ ಹಣ ಬಳಸಿಕೊಂಡು ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯ ನೀಡುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರಿಗೂ ದುಪ್ಪಟ್ಟು ಬೆಲೆ ತೆರಬೇಕಾಗಿದೆ.   ಬೆಲೆ ಏರಿಸಿಕೊಂಡ ಸರ್ಕಾರ ನಿದ್ದೆ ಮಾಡುತ್ತಿದೆ. ಹೋರಾಟ ನಮಗೆ ಹೊಸದಲ್ಲ, ರಸ್ತೆಗಿಳಿದು ಮುಂದಿನ ದಿನ ಕಡಬದಲ್ಲೂ ಪ್ರತಿಭಟಿಸಲಾಗುವುದು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಕಡಬದಲ್ಲಿ ಜೂ.19ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು ಇದರಿಂದಾಗಿ ರೈತರಿಗೆ

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ಬೀದಿಗಿಳಿದು ಹೋರಾಟ: ಭಾಗೀರಥಿ ಮುರುಳ್ಯ Read More »

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ  ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ರಾಜ್ಯ ಸರಕಾರದಿಂದ ಪೆಟ್ರೋಲ್ ಬೆಲೆ ಏರಿಕೆ | ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆಯುತ್ತಿರುವ ಸರಕಾರ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ರಾಜ್ಯ ಸರಕಾರದ ವಿರುದ್ಧ ಖಂಡನೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ

ರಾಜ್ಯ ಸರಕಾರದಿಂದ ಪೆಟ್ರೋಲ್ ಬೆಲೆ ಏರಿಕೆ | ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆಯುತ್ತಿರುವ ಸರಕಾರ : ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳು ಹೀನಾಯವಾಗಿ ಸೋತಿದ್ದರೆ ಖಂಡಿತ ಮತಯಂತ್ರಗಳನ್ನು ದೂಷಿಸುವ ಕಾರ್ಯ ನಡೆಯುತ್ತಿತ್ತು. ಆದರೆ ಫಲಿತಾಂಶ ಪ್ರಕಟವಾದಾಗ ಪ್ರತಿಪಕ್ಷಗಳೂ ಕೂಡ ಸಾಧನೆ ಮಾಡಿದ ಕಾರಣ ಮತಯಂತ್ರಗಳು ಬಚಾವಾಗಿದ್ದವು. ಆದರೆ ಫಲಿತಾಂಶ ಪ್ರಕಟವಾಗಿ, ಸರಕಾರವೂ ರಚನೆಯಾದ ಬಳಿಕ ಈಗ ಮತಯಂತ್ರಗಳ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಈ ಚರ್ಚೆಗೆ ಕಾರಣರಾಗಿರುವವರು ಟೆಸ್ಲಾ ಕಂಪನಿಯ ಎಲಾನ್ ಮಸ್ಕ್ ಚುನಾವಣೆಗಳಲ್ಲಿ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದು, ಹ್ಯಾಕರ್‌ಗಳು ಕೃತಕ ಬುದ್ಧಿಮತ್ತೆ ಬಳಸಿಕೊಂಡು ಇವಿಎಂ ಗಳನ್ನು

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು Read More »

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸೆಸ್‍ ಜಾಸ್ತಿ ಮಾಡಿ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‍ ನ್ನು ಹೆಚ್ಚಳ ಮಾಡುವ ಆದೇಶಕ್ಕೆ ಸಹಿತ ಹಾಕುವ ಮೂಲಕ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ 13 ಸಾವಿರ

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸೆಸ್‍ ಜಾಸ್ತಿ ಮಾಡಿ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ : ಶಾಸಕ ಸುನಿಲ್ ಕುಮಾರ್ Read More »

error: Content is protected !!
Scroll to Top