ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಶೇ.4 ರಷ್ಟು ಹೆಚ್ಚಳ | ಜನವಿರೋಧಿ ನೀತಿ ಪ್ರದರ್ಶಿಸಿದ ರಾಜ್ಯ ಸರಕಾರ : ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದ ಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ […]










